ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

Date:

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ ಹಿಂದೆ, ಮಹಿಷ ದಸರಾ ಅಡ್ಡಿಪಡಿಸಿ, ರಗಳೆ, ರಾದ್ದಾಂತ ಎಬ್ಬಿಸುತ್ತಿದ್ದ ಬಿಜೆಪಿ, ಇದೀಗ, ಮೈಸೂರು ದಸರಾದ ದೀಪಾಲಂಕಾರದಲ್ಲೂ ಕ್ಯಾತೆ ತೆಗೆದಿದೆ. ದಸರಾದಲ್ಲೂ ಕೋಮು ರಾಜಕಾರಣ, ಕೋಮು ದ್ವೇಷ ಬಿತ್ತಲು ಮುಂದಾಗಿದೆ.

ದಸರಾ ಪ್ರಯುಕ್ತ ಮೈಸೂರಿನಾದ್ಯಂತ ದೀಪಾಲಂಕಾರ ಮಾಡಲಾಗಿದೆ. ನಗರದ ಬಹುತೇಕ ಭಾಗಗಳು ದೀಪಗಳಿಂದ ಕಂಗೊಳಿಸುತ್ತಿವೆ. ನಾನಾ ಬಗೆಯಲ್ಲಿ ದೀಪಾಲಂಕಾರ ಮಾಡಿಲಾಗಿದೆ. ಅದೇ ರೀತಿ, ಪ್ರಮುಖ ರಸ್ತೆಯೊಂದರಲ್ಲಿ ಗುಂಬಜ್ ಮಾದರಿಯಲ್ಲೂ ದೀಪಾಲಂಕಾರ ಮಾಡಲಾಗಿದೆ. ಅದಕ್ಕೆ, ಬಿಜೆಪಿ ಅಪಸ್ವರ ಎತ್ತಿದೆ.

ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಹಸಿರು ಚಪ್ಪರ ಹಾಕಿ, ಅದಕ್ಕೆ ದೀಪಾಲಂಕಾರ ಮಾಡಲಾಗಿದೆ. ಚಪ್ಪರವನ್ನು ಗುಂಬಜ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಅದಕ್ಕೂ ಬಿಜೆಪಿ ಕ್ಯಾತೆ ತೆಗೆದಿದೆ. ಮಾಜಿ ಸಂಸದ ಪ್ರತಾಪ್ ಸಿಂಹ, ಅದನ್ನು ಬದಲಾಯಿಸಬೇಕು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಪ್ಪರದ ಚಿತ್ರವನ್ನು ‘ಎಕ್ಸ್‌‘ನಲ್ಲಿ ಹಂಚಿಕೊಂಡಿರುವ ಪ್ರತಾಪ್ ಸಿಂಹ, ‘ಇದನ್ನು ಬದಲಿಸಲು ಹೇಳಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಪ್ರತಿ ವರ್ಷ ಸಯ್ಯಾಜಿರಾವ್ ರಸ್ತೆಯಲ್ಲಿ ಚಾಂಮುಂಡೇಶ್ವರಿ ವಿದ್ಯುತ್ ಪ್ರಕರಣ ನಿಗಮ ನಿಯಮಿತ (ಚೆಸ್ಕಾಂ)ನಿಂದ ಹಸಿರು ಚಪ್ಪರ ಅಳವಡಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಹಸಿರು ಚಪ್ಪರ ಹಾಕಿದೆ. ವಿಭಿನ್ನ ಮತ್ತು ವಿಶಿಷ್ಟವಾಗಿ ಈ ಬಾರಿ, ಗುಂಬಜ್ ಮಾದರಿಯಲ್ಲಿ ಚಪ್ಪರ ನಿರ್ಮಿಸಿದೆ. ಸಚಿವ ಕೆ.ಜೆ ಜಾರ್ಜ್‌ ಅವರು ಶುಕ್ರವಾರ ಇದೇ ಚಪ್ಪರದ ಬಳಿಯಿಂದಲೇ ದೀಪಾಲಂಕಾರ ಉದ್ಘಾಟನೆ ಮಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...