ಚುನಾವಣೆ ಸಮಯದಲ್ಲಿ ಕೋಮುಗಲಭೆ ಆಗದಂತೆ ನೋಡಿಕೊ‌ಳ್ಳಿ: ಸಿದ್ದರಾಮಯ್ಯ ಖಡಕ್‌ ಸೂಚನೆ

Date:

ಚುನಾವಣಾ ಸಂದರ್ಭದಲ್ಲಿ ರೌಡಿಗಳು, ರೂಢಿಗತ ಅಪರಾಧಿಗಳನ್ನು ಗುರುತಿಸಿ, ಅವರ ಮೇಲೆ ನಿಗಾ ಇರಿಸುವ ಜೊತೆಗೆ ಕೋಮುಗಲಭೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ನಂತರ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ಕರೆದು ಮಾತನಾಡಿ, “ರಾಜ್ಯದಲ್ಲಿ ಕೋಮುಗಲಭೆಗಳು ನಡೆದಿಲ್ಲ, ಇದು ಉತ್ತಮ ಕಾನೂನು ಸುವ್ಯವಸ್ಥೆಗೆ ಸಾಕ್ಷಿ. ಆದರೆ ಸೈಬರ್ ಕ್ರೈಂ ಹೆಚ್ಚಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಬಳಸಿ ಸೈಬರ್ ಅಪರಾಧಗಳ ನಿಗ್ರಹಿಸಿ, ಅಪರಾಧ ಪತ್ತೆ ಹಚ್ಚಬೇಕು ಎಂದು ಹೇಳಿರುವೆ” ಎಂದರು.

“ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆಯಿದ್ದು, ಹೆಚ್ಚು ಜವಾಬ್ದಾರಿಗಳನ್ನು ವಹಿಸಲು ಹೆಚ್ಚುವರಿ ಡಿಸಿಪಿ ಹುದ್ದೆಗಳನ್ನು ಸೃಜಿಸಲಾಗುತ್ತಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ದಲಿತರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳೂ ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಿ, ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೈತಿಕ ಪೋಲಿಸ್‍ಗಿರಿ ಮಾಡುವುದನ್ನು ಹಾಗೂ ಕಾನೂನನ್ನು ಕೈಗೆತ್ತಿಕೊಂಡರೆ ನಮ್ಮ ಸರ್ಕಾರ ಸಹಿಸುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ ಮನವಿ ಮೇರೆಗೆ ರಾಜ್ಯದ ಪೋಲಿಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

“ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಪೋಲಿಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆನ್ ಲೈನ್ ನಲ್ಲಿ ಎಫ್‍ಐಆರ್ ದಾಖಲಿಸಲು ತೊಂದರೆಯಾಗುತ್ತಿದ್ದು ಈ ಬಗ್ಗೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಸುವರ್ಣ ಪೋಲಿಸ್ ಭವನ ನಿರ್ಮಾಣ ಮಾಡಲಾಗುವುದು. ಸುವರ್ಣ ಮಹೋತ್ಸವದ ಅಂಗವಾಗಿ ಎಲ್ಲಾ ಪೊಲೀಸ್‌ನವರಿಗೆ ಬೆಳ್ಳಿ ಪದಕ ವಿತರಣೆ. ವೈದ್ಯಕೀಯ ತಪಾಸಣಾ ಭತ್ಯೆ 1000 ದಿಂದ 1500 ಕ್ಕೆ ಹೆಚ್ಚಳ. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಸ್ಪಷ್ಟ ಸೂಚನೆ” ಎಂದರು.

“ಸರ್ಕಾರದ ನಿರ್ದೇಶನದ ಮೇರೆಗೆ ಕಳೆದ 6 ತಿಂಗಳಲ್ಲಿ ಪೋಲೀಸರು ದಾಳಿ ಮಾಡಿ 27 ಕೋಟಿ ಮೌಲ್ಯದ 4484 ಕೆಜಿ ಗಾಂಜಾ, 23 ಕೆಜಿ ರಾಸಾಯನಿಕ ಮಾದಕ ವಸ್ತುಗಳನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಇವೆಲ್ಲವನ್ನೂ ಫೆಬ್ರವರಿ ಮೊದಲ ವಾರದಲ್ಲಿ ನಾಶಪಡಿಸಲು ಅನುಮತಿ ನೀಡಲಾಗಿದೆ. ಮಾದಕ ವಸ್ತು ಹಾಗೂ ಸೈಬರ್ ಅಪರಾಧಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಪ್ರತಿ ಸಿಇಎನ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್ ಬದಲಾಗಿ ಡಿವೈಎಸ್‍ಪಿ ಅಥವಾ ಎಸಿಪಿ ಮಟ್ಟದ ಅಧಿಕಾರಿಗಳ ನೇಮಕ ಮಾಡಲಾಗುವುದು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...