ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು; ಅತ್ತ ಬಿಜೆಪಿ ವಾಗ್ದಾಳಿ

Date:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಕೀಲರಾದ ನಟರಾಜ್ ಶರ್ಮಾ ಎಂಬುವರು ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಸಚಿವರ ಮೇಲೆ ಎರಡು ರೀತಿಯ ಆರೋಪಗಳನ್ನು ಮಾಡಲಾಗಿದೆ. ಅವರ ಪ್ರಕಾರ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಸರ್ಕಾರದ ವತಿಯಿಂದ ಸರಬರಾಜು ಮಾಡಲಾಗುವ ಪೌಷ್ಠಿಕ ಆಹಾರದ ಗುತ್ತಿಗೆಯನ್ನು ಆಯಾ ಊರುಗಳಲ್ಲಿರುವ ಸ್ಥಳೀಯ ಸಹಕಾರಿ ಸಂಸ್ಥೆಗಳಿಗೆ ನೀಡಬೇಕು ಎಂದು ಹೈಕೋರ್ಟ್ ಈ ಹಿಂದೆಯೇ ಹೇಳಿದೆ. ಆದರೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಗಳೂರಿನ ಸಂಸ್ಥೆಯೊಂದಕ್ಕೆ ಪೌಷ್ಠಿಕಾಂಶಯುಕ್ತ ಆಹಾರವನ್ನು ಸರಬರಾಜು ಮಾಡುವ ಗುತ್ತಿಗೆಯನ್ನು ಕ್ರಿಸ್ಟಿ ಫ್ರೈಡ್ ಗ್ರ್ಯಾಮ್ ಎಂಬ ಕಂಪನಿಗೆ ಪರೋಕ್ಷವಾಗಿ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

2011ರಲ್ಲಿ ಈ ಕಂಪನಿಯು ಇದೇ ರೀತಿಯ ಗುತ್ತಿಗೆಯನ್ನು ಪಡೆದುಕೊಂಡಿತ್ತು. ಆದರೆ, ಆ ಕಂಪನಿಯು ಸರಬರಾಜು ಮಾಡುತ್ತಿದ್ದ ಪೌಷ್ಠಿಕ ಆಹಾರದಲ್ಲಿ ಗುಣಮಟ್ಟದ ಕೊರತೆಯಿದ್ದಿದ್ದರಿಂದಾಗಿ ಆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿತ್ತು. ಆದರೆ, ಕಪ್ಪುಪಟ್ಟಿಗೆ ಸೇರಿಸಲಾಗಿರುವ ಕಂಪನಿಯ ಅಡಿಯಲ್ಲಿ ಮೂರು ಕಂಪನಿಗಳಿದ್ದು ಆ ಮೂರು ಕಂಪನಿಗಳಿಗೆ ಹೊಸ ಗುತ್ತಿಗೆಯನ್ನು ನೀಡಲಾಗಿದೆ ಎಂದು ನಟರಾಜ್ ಶರ್ಮಾ ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಪ್ಪುಪಟ್ಟಿಯಲ್ಲಿರುವ ಕಂಪನಿಗೆ ಗುತ್ತಿಗೆ ನೀಡುವುದು ತಪ್ಪು ಹಾಗೂ ಅದರ ವಿಳಾಸ ಬೆಂಗಳೂರಿನಲ್ಲಿರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ಗುತ್ತಿಗೆ ನೀಡಬೇಕೆಂಬ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದಂತಾಗಿದೆ ಎಂದು ನಟರಾಜ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡುವಾಗ ವಿವರಿಸಿದ್ದಾರೆ. ಅಲ್ಲದೆ, ಶೇ. 10ರಷ್ಟು ಕಮೀಷನ್ ಪಡೆದು ದೊಡ್ಡ ಮೊತ್ತದ ಟೆಂಡರ್ ಅನ್ನು ಈ ಕಂಪನಿಗೆ ನೀಡಲಾಗಿದೆ ಎಂಬುದು ಅವರ ಮತ್ತೊಂದು ಆರೋಪ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೆ.ಸಿ. ಪ್ರಕಾಶ್ ಹಾಗೂ ಇಲಾಖೆಯ ನಿರ್ದೇಶಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ದೂರಿದ್ದಾರೆ.

ಬಿಜೆಪಿ ವಾಗ್ದಾಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಭ್ರಷ್ಟಾಚಾರ ನಡೆದಿದ್ದು ಅದಕ್ಕೆ ಅದರಲ್ಲಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಕ್ಸ್‌ ತಾಣದಲ್ಲಿ ವಾಗ್ದಾಳಿ ನಡೆಸಿದ್ದು, “ಬೆಳಗಾವಿಯಲ್ಲಿ ಬಾಣಂತಿಯರಿಗೆ, ಮಕ್ಕಳಿಗೆ ನೀಡಲಾಗುವ ಪೌಷ್ಠಿಕ ಆಹಾರದ ಟೆಂಡರ್‌’ನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ. ಇದಕ್ಕೆ ಇಲಾಖಾಧಿಕಾರಿಗಳು ಮೇಲುಸಹಿ ಹಾಕಿರುವುದರಿಂದ ಇಲಾಖೆಯ ಹಿರಿಯ ಅಧಿಕಾರಿಗಳೇ ಈ ಭ್ರಷ್ಟಾಚಾರದಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಅಲ್ಲದೆ, ಇಡೀ ಸಚಿವಾಲಯವೇ ಭ್ರಷ್ಟಾಚಾರದಲ್ಲಿ ಮುಳುಗಿದೆ” ಎಂದು ಆರೋಪಿಸಿದೆ.

“ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆಯಲ್ಲೇ ಕೋಟಿ ಕೋಟಿ ಅಕ್ರಮ ಬಿಲ್‌ ಸಲ್ಲಿಸಿ ಕಲೆಕ್ಷನ್‌ ದಂಧೆ ನಡೆಸಲಾಗುತ್ತಿದೆ. ₹ 2 ಕೋಟಿ ನಕಲಿ ಬಿಲ್‌ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಚೇರಿಯಿಂದ ಮೇಲುಸಹಿ ಬೇರೆ ಪಡೆಯಲಾಗಿದೆ ಎಂದರೆ ಅಧಿಕಾರಿಗಳು ಮತ್ತು ಸಚಿವಾಲಯ ಭ್ರಷ್ಟಾಚಾರದಲ್ಲಿ ಹಾಸು ಹೊಕ್ಕಾಗಿದ್ದಾರೆ” ಎಂದು ಆರೋಪಿಸಿದೆ.

“ಬಾಣಂತಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರವನ್ನು ನೀವು ಈ ರೀತಿ ತಿಂದರೆ ಜನ ಕ್ಷಮಿಸುತ್ತಾರೆ ಎಂದು ಅಂದುಕೊಂಡಿದ್ದೀರಾ ಲಕ್ಷ್ಮೀ ಹೆಬ್ಬಾಳ್ಕರ್‌ ಅವರೇ” ಎಂದು ಸಚಿವರನ್ನು ಬಿಜೆಪಿ ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...