ಪಂಚರತ್ನ ರಥಯಾತ್ರೆಗೆ ತೆರೆ | ದೇವೇಗೌಡರ ಭಾಷಣಕ್ಕೆ ಕಣ್ಣೀರಿಟ್ಟ ಕುಮಾರಸ್ವಾಮಿ, ರೇವಣ್ಣ

Date:

  • ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಗೆ ತೆರೆ
  • ಜನಸ್ತೋಮ ಕಂಡು ಕ್ಷಣಕಾಲ ಭಾವುಕರಾದ ಎಚ್‌ ಡಿ ದೇವೇಗೌಡ

ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರ ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಯ ಸಮಾರೋಪ ಭಾನುವಾರ ಸಂಜೆ ನಡೆಯಿತು.

ಮೈಸೂರು ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಚ್‌ ಡಿ ಕುಮಾರಸ್ವಾಮಿ ಪರ ಘೋಷಣೆಗಳು ಮುಗಿಲು ಮುಟ್ಟಿದವು. ಎಲ್ಲಡೆಯೂ ಪಕ್ಷದ ಬಾವುಟಗಳು ಹಾರಾಡಿದವು.

ಅನಾರೋಗ್ಯದ ಕಾರಣ ಗಾಲಿಕುರ್ಚಿಯಲ್ಲಿ ಜೆಡಿಎಸ್‌ ವರಿಷ್ಠ ಎಚ್ ಡಿ ದೇವೇಗೌಡರನ್ನು ವೇದಿಕೆಗೆ ಕರೆತರಲಾಯಿತು. ಈ ವೇಳೆ ಅವರು ಕುಳಿತುಕೊಂಡೇ ಜನರತ್ತ ಕೈಬೀಸಿದರು. ಅವರೊಂದಿಗೆ ಎಚ್ ಡಿ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಸೂರಜ್ ರೇವಣ್ಣ ಹೆಜ್ಜೆ ಹಾಕಿದರು. ನೆರೆದಿದ್ದ ಜನಸ್ತೋಮ ಕಂಡು ದೇವೇಗೌಡ ಕ್ಷಣಕಾಲ ಭಾವುಕರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ದೇವೇಗೌಡ “ದೇವರ ಆಶೀರ್ವಾದ, ಕಾರ್ಯಕರ್ತ ಶಕ್ತಿಯಿಂದ ಮತ್ತೆ ಅಧಿಕಾರಕ್ಕೆ ಜೆಡಿಎಸ್‌ ಬರಲಿದೆ. ನಾನು ಒಬ್ಬ ರೈತನ ಮಗ. ನೀವು ರೈತರ ಮಕ್ಕಳು. ಬಣ್ಣದ ನಾಟಕದ ಮಾತುಗಳಿಂದ ಯಾವುದೇ ಅಧಿಕಾರಕ್ಕೆ ಬಂದವರಲ್ಲ” ಎಂದರು.

ದೇವೇಗೌಡರು ಲಿಖಿತ ಭಾಷಣ ಓದುತ್ತಿರಬೇಕಾದರೆ, ಅತ್ತ ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್‌ ಡಿ ರೇವಣ್ಣ ಭಾವುಕರಾಗಿ ಕಣ್ಣೀರು ಹಾಕಿದರು.

ನಿಮ್ಮನ್ನು ನೋಡುತ್ತೇನೋ, ಇಲ್ಲವೋ ಎಂದುಕೊಂಡಿದ್ದೆ

“ನಾನು ಜೀವನದಲ್ಲಿ ಉಳಿದಿದ್ದು ರಾಜಕೀಯದಲ್ಲಾದರೂ ಬೆಳೆದಿದ್ದು ಮಾತ್ರ ನಿಮ್ಮಿಂದ ಮತ್ತು ಆ ದೇವರ ಕೃಪೆಯಿಂದ. ನಾನು ನಂಬುವುದು ಎರಡೇ ಶಕ್ತಿಗಳನ್ನು ಒಂದು ಆ ಭಗವಂತ ಮತ್ತು ನಮ್ಮ ಕಾರ್ಯಕರ್ತರು. ನನಗೆ ಇತ್ತೀಚೆಗೆ ಆರೋಗ್ಯದಲ್ಲಿ ತುಂಬಾ ಏರುಪೇರಾಗಿತ್ತು. ನಿಮ್ಮನ್ನು ನೋಡುತ್ತೇನೋ, ಇಲ್ಲವೋ ಎಂದು ಕೊಂಡಿದ್ದೆ. ಸದ್ಯ ಚೇತರಿಕೆ ಕಂಡಿದ್ದೇನೆ” ಎಂದರು.

90 ದಿನಗಳ ಕಾಲ ಯಾತ್ರೆ ಮಾಡಿದ್ದೇವೆ

“ಕೋಲಾರ ಜಿಲ್ಲೆ ಮುಳಬಾಗಿಲಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಿದ್ದೆ. 90 ದಿನಗಳ ಕಾಲ ಈ ಪಂಚರತ್ನ ರಥಯಾತ್ರೆ ಮಾಡಿದ್ದೇವೆ. ಜನತೆ ಆಶೀರ್ವಾದದಿಂದ ಜೆಡಿಎಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

“ನನಗೆ ರಾಜಕೀಯವಾಗಿ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆಯ ಜನರು. ನನ್ನ ರಾಜಕೀಯ ಬೆಳವಣಿಗೆಗೆ ಕಾರಣವಾಗಿದ್ದು ಮಂಡ್ಯ, ಮೈಸೂರು ಜನ. ರೈತರ ಮಕ್ಕಳು ಕೂಡ ನನ್ನ ಹೋರಾಟಕ್ಕೆ ದೇಣಿಗೆ ನೀಡಿದ್ದಾರೆ. ದೇವೇಗೌಡರು ಶತಾಯುಷಿಗಳಾಗಿ ಇರಬೇಕು. ಇದರಲ್ಲಿ ನಮ್ಮ ಸ್ವಾರ್ಥವಿಲ್ಲ. ನಿಮ್ಮ ಹಾರೈಕೆಯಿಂದ ಈ ಬಾರಿ 120 ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಸಾಧಿಸಬೇಕು” ಎಂದು ಕೇಳಿಕೊಂಡರು.

“ದೇವೇಗೌಡರು ನಮಗೆಲ್ಲ ಆದರ್ಶ ನಾಯಕರು ಎಂದು ಯಡಿಯೂರಪ್ಪ ಹೇಳುತ್ತಾರೆ. ಹೀಗಿದ್ದ ಮೇಲೆ ಕಾಂಗ್ರೆಸ್‌ನವರು ಯಾವ ಲೆಕ್ಕ. ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಹಲವರು ಜೆಡಿಎಸ್‌ನಲ್ಲೇ ಬೆಳೆದವರು. ಕಾಂಗ್ರೆಸ್ ಉಳಿಯಲ್ಲ ಅಂತಾ ಕುಮಾರಸ್ವಾಮಿ ಅವರನ್ನು ತೆಗೆದರು ಹಾಕಿದರು” ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...