ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ

Date:

ಜನ ಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

ದೇಶದಲ್ಲಿ ಜಾತಿ‌ ಗಣತಿ ನಡೆಸುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಘೋಷಿಸಿದ ಬೆನ್ನಲ್ಲೇ ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ” ಎಂದಿದ್ದಾರೆ.

“ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು. ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾತಿಗಣತಿಗೆ ಮೋದಿ ಸರ್ಕಾರ ಒಪ್ಪಿಗೆ; ರಾಹುಲ್ ಗಾಂಧಿ ಹೋರಾಟದ ಫಲ ಎಂದ ನೆಟ್ಟಿಗರು

“ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನು ಬಲವಾಗಿ ನಂಬಿದವನು” ಎಂದು ಹೇಳಿದ್ದಾರೆ.

“ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇ.50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕು” ಎಂದು ಆಗ್ರಹಿಸಿದ್ದಾರೆ.

“ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ. ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...