ಲೋಕಸಭೆ ಚುನಾವಣೆ | ಜಾತಿ ಗಣತಿ ನಡೆಸುವುದು ‘ಕಾಂಗ್ರೆಸ್‌ನ ಗ್ಯಾರಂಟಿ’ – ಜೈರಾಮ್ ರಮೇಶ್

Date:

“ದೇಶದಲ್ಲಿ ಜಾತಿ ಗಣತಿ ನಡೆಸುವುದು ನಮ್ಮ ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಯಾಗಿದೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕೊನೆಯ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಮಹಾರಾಷ್ಟ್ರಕ್ಕೆ ಬರುವ ಮುನ್ನ ರಾಜ್ಯದ ನಂದೂರ್ಬಾರ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜೈರಾಮ್‌ ರಮೇಶ್ ಮಾತನಾಡಿದರು.

“ನಾವು ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ. ಇದು ನಮ್ಮ ಸಮಾಜದ ಎಕ್ಸ್‌ರೇಯಂತೆ. ಇದು ನಮ್ಮ ದೇಶದಲ್ಲಿರುವ ಬೇರೆ ಬೇರೆ ಜಾತಿಗಳ ಜನಸಂಖ್ಯೆ, ರಾಷ್ಟ್ರದ ಸಂಪತ್ತಿನಲ್ಲಿ ಅವರ ಪಾಲನ್ನು ತೋರಿಸುತ್ತದೆ. ಜೊತೆಗೆ ಪ್ರಜಾಪ್ರಭುತ್ವದಲ್ಲಿ ಅವರ ಪಾಲನ್ನೂ ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್ ನಾಯಕ ವಿವರಿಸಿದರು.

ಇನ್ನು “ಕಾಂಗ್ರೆಸ್ ಒಂದು ರಾಜಕೀಯ ಪಕ್ಷ, ಇದು ನೋಡುಗರ ಗುಂಪೇನಲ್ಲ. ಚುನಾವಣೆಯಲ್ಲಿ ನಾವು ಸೋಲಬಹುದು, ಗೆಲ್ಲಬಹುದು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮಾತ್ರ ಸಮಾಜವನ್ನು ವಿಭಜಿಸಲು ಎಲ್ಲ ಪ್ರಯತ್ನವನ್ನು ಮಾಡುತ್ತಿದೆ, ಇದಕ್ಕಾಗಿ ಸಿಗುವ ಯಾವುದೇ ಅವಕಾಶವನ್ನು ಬಿಡುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, “ನಮ್ಮ ದೇಶ ಪ್ರಧಾನಿ ಮೋದಿಯವರ ವರ್ತನೆ ಮತ್ತು ನೀತಿಗಳಿಂದಾಗಿ ವಿಭಜನೆಯಾಗುತ್ತಿದೆ. ಬಿಜೆಪಿಯವರ ಗಮನ ಎಂದಿಗೂ ಕೂಡಾ ಸಮಾಜವನ್ನು ಒಡೆಯುವುದರ ಮೇಲೆ ಇರುತ್ತದೆ” ಎಂದಿದ್ದು, “ಭಾರತ್ ಜೋಡೊ ನ್ಯಾಯ ಯಾತ್ರೆ ಯಾವುದೇ ಚುನಾವಣಾ ಪ್ರಚಾರದ ಭಾಗವಲ್ಲ, ಇದು ರಾಜಕೀಯ ರ್‍ಯಾಲಿ” ಎಂದರು.

ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಜಾತಿ ಗಣತಿ ಅಭಿಯಾನದ ಭಾಗವಾಗಿ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ #Gintikaro (ಲೆಕ್ಕ ಹಾಕು) ಹ್ಯಾಷ್‌ ಟ್ಯಾಗ್ ಅನ್ನು ಸೇರಿಸಿದ್ದಾರೆ. ಇನ್ನು ಎಲ್ಲಾ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ಎಕ್ಸ್‌ ಬಯೋನಲ್ಲಿ ಇದನ್ನು ಸೇರಿಸಲು ತಿಳಿಸಲಾಗಿದೆ ಎಂಬ ಮಾಹಿತಿಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...