ಪತ್ರಕರ್ತರ ಸಮ್ಮೇಳನ | ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ ಅಭಿಮತ

Date:

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಅದು ಸಮಾಜದ ಪರವಾಗಿರುತ್ತದೆ. ಪತ್ರಿಕಾವೃತ್ತಿ ಉದ್ಯಮವಾದ ಕೂಡಲೇ ಅದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿ, “ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ” ಎಂದು ಪತ್ರಕರ್ತರಿಗೆ ಕರೆ ನೀಡಿದರು.

ಪ್ರತಿಯೊಬ್ಬರೂ ಸಂವಿಧಾನ ಓದಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ. ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ, ಸವಾಲು ಎರಡೂ ಆಗಿದೆ. ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡುತ್ತಿದ್ದಾರೆ. ಈ ಎಚ್ಛರಿಕೆ ಸದಾ ಇರಲಿ” ಎಂದರು.

ಕೆಲವೇ ದಿನದಲ್ಲಿ ಬಸ್ ಪಾಸ್

“ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ” ಎಂದರು.

ರಾಜಣ್ಣ ನೀನು ಮನುಸ್ಮೃತಿ ಓದು

ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು "ಜಾತಿ-ಕೆಳ ಜಾತಿ" ಎನ್ನುವ ಪದ ಬಳಸಿದರು.

ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರಿದವರು, ಹಿಂದುಳಿದವರು ಎಂದು ಹೇಳಬಹುದು ಎಂದರು. ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು "ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರಿಸಿದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...