ಎಚ್‌ ಡಿ ಕುಮಾರಸ್ವಾಮಿ ವಿರುದ್ಧದ ‘ಕೆಎಸ್‌ಟಿ’ ಆರೋಪಕ್ಕೆ ಜೆಡಿಎಸ್‌ ಕಿಡಿ

Date:

  • ಕಾಂಗ್ರೆಸ್‌ ಜೆಡಿಎಸ್‌ ನಡುವೆ ‘ವೈಎಸ್‌ಟಿ’ – ‘ಕೆಎಸ್‌ಟಿ’ ವಾಕ್ಸಮರ
  • ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ವರ್ಗಾವಣೆ ದಂಧೆ ಆರೋಪ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಲವು ದಿನಗಳಿಂದ ವರ್ಗಾವಣೆ ದಂಧೆ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಜಿಎಸ್​ಟಿ ಜೊತೆಗೆ ವೈಎಸ್​ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್​) ಸಂಗ್ರಹವಾಗುತ್ತಿದೆ ಎಂದಿದ್ದರು. ಇದಕ್ಕೆ ಪ್ರತಿಕ್ರೀಯಿಸಿರುವ ಕಾಂಗ್ರೆಸ್​ ಸಹ ಕುಮಾರಸ್ವಾಮಿ ವಿರುದ್ಧ ವೈಎಸ್​ಟಿಗೆ ಪ್ರತಿಯಾಗಿ ಕೆಎಸ್​ಟಿ ಆರೋಪ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ವೆಸ್ಟ್​ ಎಂಡ್​​ ಹೋಟೆಲ್​ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಕುಮಾರಸ್ವಾಮಿಯವರೇ? ಅಲ್ಲಿ ಖಾಯಂ ಅಡ್ಡ ತೆರೆದಿದ್ದೀರಿ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ಹೋಟೆಲ್​ಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ ‘ಕೆಎಸ್​ಟಿ’ (ಕುಮಾರಸ್ವಾಮಿ ಸರ್ವಿಸ್‌ ಟ್ಯಾಕ್ಸ್‌) ಸಂಗ್ರಹದ ಹಣ ಬಳಸುತ್ತಿದ್ದೀರಾ? ‘ಕೆಎಸ್‌ಟಿ ಕುಮಾರ್’ ಅವರು ಉತ್ತರಿಸಬೇಕು” ಎಂದು ತಿರುಗೇಟು ನೀಡಿದೆ.

ಕಾಂಗ್ರೆಸ್​ ಟ್ವೀಟ್​ಗೆ ಜೆಡಿಎಸ್​ ಸರಣಿ ಟ್ವೀಟ್​ ಮಾಡಿದ್ದು, “ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ. ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ‘ ಹೊಸ ವರಸೆ ಮತ್ತು ಹೊಸ ಕಸವರಿಕೆ” ಎಂದು ತಿರುಗೇಟು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವೈಎಸ್‌ಟಿ ಟ್ಯಾಕ್ಸ್‌ ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ‘ಅವಿವೇಕ ‘ ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ” ಎಂದು ಕುಟುಕಿದೆ.

ಈ ಸುದ್ದಿ ಓದಿದ್ದೀರಾ? ಮೂರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಕಿಡಿ

“ವೆಸ್ಟ್‌ʼಎಂಡ್‌ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ. ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ” ಎಂದು ಜೆಡಿಎಸ್‌ ಪರೋಕ್ಷವಾಗಿ ಡಿ ಕೆ ಶಿವಕುಮಾರ್ ಕಾಲೆಳೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...