ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣ; 5ನೇ ಗ್ಯಾರಂಟಿ ಯೋಜನೆ ಘೋಷಿಸಿದ ಕಾಂಗ್ರೆಸ್

Date:

  • ಕಾಂಗ್ರೆಸ್‌ನ 5ನೇ ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ
  • ಮಹಿಳಾ ಮತದಾರರಿಗೆ ಬಂಪರ್ ಕೊಡುಗೆ ಘೋಷಿಸಿದ ಕೈ ಪಕ್ಷ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗೆ ನಿಂತಿರುವ ಕಾಂಗ್ರೆಸ್, 5ನೇ ಗ್ಯಾರಂಟಿ ಯೋಜನೆ ಘೋಷಿಸುವ ಮೂಲಕ, ತನ್ನ ಗ್ಯಾರಂಟಿ ಯೋಜನೆಗಳ ಸರಣಿಯನ್ನು ಮುಂದುವರೆಸಿದೆ.

ಇದರಂತೆ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣ ಕೊಡುಗೆಯನ್ನು ಘೋಷಿಸಿದೆ. ಆ ಮೂಲಕ ರಾಜ್ಯದಲ್ಲಿರುವ 2,63,98,483 ಮಹಿಳಾ ಮತದಾರರನ್ನು ತನ್ನತ್ತ ಸೆಳೆದುಕೊಳ್ಳಲು ಮೆಗಾ ಪ್ಲಾನ್ ರೂಪಿಸಿದೆ.

ಇದು ಮಹಿಳೆಯರಿಗಾಗಿಯೇ ಘೋಷಿಸಿರುವ ಕಾಂಗ್ರೆಸ್‌ನ ಎರಡನೇ ದೊಡ್ಡ ಯೋಜನೆ. ಈ ಮೊದಲು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಘೋಷಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು (ಏ 27) ಮಂಗಳೂರಿನಲ್ಲಿ ಐದನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ, ನಮ್ಮ ಮನೆ ಮಹಿಳೆಯರ ಹುಂಡಿ ಡಬ್ಬಿಗಳಿಂದ ರಾಜ್ಯದ 40% ಸರ್ಕಾರ ಹಣ ಕದ್ದಿದೆ. ಇದನ್ನು ನಾವು ಮರಳಿ ಈ ಯೋಜನೆ ರೂಪದಲ್ಲಿ ಕೊಡಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ಇದನ್ನು ಘೋಷಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಪ್ರಧಾನಿ ಮೋದಿಯವರಿಗೆ ಸವಾಲೆಸೆದ ರಾಹುಲ್ ಗಾಂಧಿ, “ಮೋದಿಜಿ, ನಾವು ನಾಲ್ಕು ಭರವಸೆ ಈಡೇರಿಸುತ್ತೇವೆ. ನೀವು ದೇಶದಲ್ಲಿ ಇದನ್ನು ಈಡೇರಿಸುತ್ತೀರಾ” ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ಉಳಿದ ನಾಲ್ಕು ಗ್ಯಾರಂಟಿ ಘೋಷಣೆಗಳು ಹೀಗಿವೆ.

ಗೃಹ ಜ್ಯೋತಿ ಯೋಜನೆ

ಕಾಂಗ್ರೆಸ್ ಈ ವರ್ಷದ ಜನವರಿಯಲ್ಲಿ ತಮ್ಮ ಮೊದಲ ಭರವಸೆಯಾಗಿ ಗೃಹ ಜ್ಯೋತಿ ಯೋಜನೆಯನ್ನು ಘೋಷಿಸಿತು. ಪಕ್ಷ ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಿದೆ ಎಂದಿದೆ.

ಗೃಹ ಲಕ್ಷ್ಮೀ ಯೋಜನೆ

ತನ್ನ ಎರಡನೇ ಚುನಾವಣಾ ಭರವಸೆಯಲ್ಲಿ, ಕಾಂಗ್ರೆಸ್ ಗೃಹ ಲಕ್ಷ್ಮೀ ಯೋಜನೆಯನ್ನು ಘೋಷಿಸಿದೆ. ಇದರಂತೆ ಈ ಯೋಜನೆಯಡಿ ರಾಜ್ಯದ ಪ್ರತಿ ಗೃಹಿಣಿಯರಿಗೆ ತಿಂಗಳಿಗೆ 2,000 ರೂಪಾಯಿಗಳನ್ನು ನೀಡಲಾಗುತ್ತದೆ. ಈ ಯೋಜನೆಯಿಂದ 1.5 ಕೋಟಿ ಗೃಹಿಣಿಯರಿಗೆ ಅನುಕೂಲವಾಗಲಿದೆ. ಈ ಯೋಜನೆಯು ಕುಟುಂಬದ ಮುಖ್ಯಸ್ಥ ಮಹಿಳೆಗೆ ನೀಡಲಾಗುತ್ತದೆ.

ಅನ್ನ ಭಾಗ್ಯ

ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಜಾರಿ ತಂದಿದ್ದ ಜನಪ್ರಿಯ ಅನ್ನಭಾಗ್ಯ ಯೋಜನೆಯನ್ನು ಮರಳಿ ಅಧಿಕಾರಕ್ಕೆ ಬಂದರೆ ಪುನರಾರಂಭಿಸುವುದಾಗಿ ಕಾಂಗ್ರೆಸ್ ಮೂರನೇ ಯೋಜನೆ ರೂಪದಲ್ಲಿ ವಾಗ್ದಾನ ನೀಡಿದೆ.

‘ಅನ್ನ ಭಾಗ್ಯ’ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಜನರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಿದೆ.

ಈ ಸುದ್ದಿ ಓದಿದ್ದೀರಾ? : ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಯುವ ನಿಧಿ

ನಿರುದ್ಯೋಗಿ ಯುವಕರಿಗೆ ನೆರವಾಗಲು ಯುವ ನಿಧಿ ಯೋಜನೆಯನ್ನು ಜಾರಿ ತರಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಯೋಜನೆ ಅಡಿಯಲ್ಲಿ ಪದವಿ ಪಡೆದಿರುವ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಲಾಗುತ್ತದೆ.

ಜೊತೆಗೆ ರಾಜ್ಯದಲ್ಲಿ ಡಿಪ್ಲೊಮಾ ಪದವಿ ಪಡೆದ ನಿರುದ್ಯೋಗಿಗಳಿಗೆ ಭತ್ಯೆಯಾಗಿ ಪ್ರತಿ ತಿಂಗಳು 1500 ರೂಪಾಯಿ ನೀಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...