ಎಚ್‌ಡಿಕೆ ಮಣಿಸಲು ಕಾಂಗ್ರೆಸ್‌ ಪಣ; ಮಂಡ್ಯ ಅಖಾಡಕ್ಕೆ ಸ್ಟಾರ್‌ ಪ್ರಚಾರಕರು

Date:

ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರ ಮತ್ತೆ ರಾಜ್ಯದ ಗಮನ ಸೆಳೆಯುತ್ತಿದೆ. ಬಿಜೆಪಿ ಟಿಕೆಟ್‌ ದೊರೆಯದ ಸಂಸದೆ ಸುಮಲತಾ ನಡೆ ಕುರಿತು ಭಾರೀ ಚರ್ಚೆಗಳು ನಡೆದಿದ್ದವು. ಸದ್ಯ, ಅವರು ಬಿಜೆಪಿ ಸೇರಿ, ಸ್ಪರ್ಧೆಯಿಂದ ದೂರ ಉಳಿದಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಣದಲ್ಲಿದ್ದು, ಅವರ ಗೆಲುವು-ಸೋಲಿನ ವಿಚಾರವಾಗಿ ಕ್ಷೇತ್ರ ಚರ್ಚೆಯಲ್ಲಿಯೇ ಉಳಿದಿದೆ. ಈ ನಡುವೆ, ಕುಮಾರಸ್ವಾಮಿ ಅವರನ್ನು ಮಣಿಸಿ, ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಲು ಕಾಂಗ್ರೆಸ್‌ ನಾನಾ ರೀತಿಯಲ್ಲಿ ತಂತ್ರ ಎಣೆಯುತ್ತಿದೆ.

ಕಾಂಗ್ರೆಸ್‌ ಪರ ಮತಯಾಚನೆಗೆ ಸ್ಟಾರ್‌ ಪ್ರಚಾರಕರು ಮಂಡ್ಯ ಕಣಕ್ಕೆ ಇಳಿಯಲಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸಲು ಮುಂದಾಗಿದ್ದಾರೆ.

ರಮ್ಯಾ ಅವರು ಅವರು ಏಪ್ರಿಲ್ 14 ಮತ್ತು 15ರಂದು ಮಂಡ್ಯದಲ್ಲಿ ಪ್ರಚಾರ ಮತ್ತು ರೋಡ್‌ ಶೋ ನಡೆಸಲಿದ್ದಾರೆ. ಏಪ್ರಿಲ್ 17ರಂದು ಮಂಡ್ಯಕ್ಕೆ ರಾಹುಲ್‌ ಗಾಂಧಿ ಬರಲಿದ್ದು, ಅಂದು ಬೃಹತ್ ಸಮಾವೇಶ ನಡೆಯಲಿದೆ. ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ಆರ್ ಪೇಟೆ, ನಾಗಮಂಗಲದಲ್ಲಿ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಜಿಲ್ಲೆಯವರೇ ಆದ ಸಚಿವ ಚಲುವರಾಯಸ್ವಾಮಿ ಕೂಡ ಜಿಲ್ಲೆ ನಾನಾ ಭಾಗಗಳಲ್ಲಿ ನಿರಂತರ ಪ್ರಚಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ ವಿರುದ್ಧ ಬಂಡೆದ್ದು, ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಚಲುವರಾಯಸ್ವಾಮಿ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯ ಕ್ಷೇತ್ರವಾಗಿದೆ. ತಮ್ಮ ಜಿಲ್ಲೆಯಲ್ಲಿ ಕುಮಾರಸ್ವಾಮಿ ಅವರನ್ನು ಮಣಿಸಬೇಕು. ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಚಲುವರಾಯಸ್ವಾಮಿ ಪಣತೊಟ್ಟಿದ್ದಾರೆ. ಜಿಲ್ಲೆಯ ಎಲ್ಲ ಭಾಗಗಳಲ್ಲಿಯೂ ನಾನಾ ಸಭೆಯಗಳನ್ನು ನಡೆಸುತ್ತಿದ್ದಾರೆ.

ಬಿಜೆಪಿ-ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿರುವ ಚಲುವರಾಯಸ್ವಾಮಿ, “ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಜನರ ಸಮ್ಮತಿ ಇಲ್ಲ. ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಚಾರವಾಗಿ ಯಾವ ರೀತಿ ಅಸಮಾಧಾನ ಇತ್ತೋ, ಅದೇ ರೀತಿ ಈಗಲೂ ಅಸಮಾಧಾನವಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ಕ್ಷೇತ್ರದಲ್ಲಿ ನಾಲ್ಕು ಸುತ್ತಿನ ಪ್ರಚಾರ ಮಾಡಿದ್ದೇವೆ. ಜನರ ಉತ್ಸಹ ಕೂಡ ಕಾಂಗ್ರೆಸ್ ಪರವಾಗಿದೆ. ಜೆಡಿಎಸ್-ಬಿಜೆಪಿಯಿಂದ ಸಾಕಷ್ಟು ಮಂದಿ ಕಾಂಗ್ರೆಸ್‌ಗೆ ಬರುತ್ತಿದ್ದಾರೆ. ನಮಗೆ ಜನ ಬೆಂಬಲವಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...