ಬಿಜೆಪಿಗರೇ ಕನ್ನಡಿಗರ ಮುಂದೆ ಮೋದಿ ಹೆಸರು ಹೇಳುವ ಮುಂಚೆ ನೂರು ಬಾರಿ ಯೋಚಿಸಿ: ಕಾಂಗ್ರೆಸ್ ತಿರುಗೇಟು

Date:

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್‌ ವಾರ್ ಶುರುವಾಗಿದೆ. “ಅಯೋಗ್ಯ ಕರ್ನಾಟಕ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ” ಎಂದ ಬಿಜೆಪಿ ಟ್ವೀಟ್‌ಗೆ ತಿರುಗೇಟು ನೀಡಿರುವ ಕಾಂಗ್ರೆಸ್‌ ಪಕ್ಷವು “ಕನ್ನಡಿಗರ ಎದುರು ಮೋದಿಯ ಹೆಸರನ್ನು ಹೇಳುವ ಮುಂಚೆ ನೂರು ಬಾರಿ ಯೋಚಿಸಿ” ಎಂದು ತಿರುಗೇಟು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ಶಿವರಾಜ್‌ ತಂಗಡಗಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ಬಿಜೆಪಿ, “ಅಯೋಗ್ಯ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಹಿಡಿದು ನಾಲಾಯಕ್ ಕೈ ಶಾಸಕರು ನಾಲಿಗೆ ಹರಿಬಿಡುತ್ತಿದ್ದಾರೆ” ಎಂದು ಹೇಳಿದೆ.

“ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಕೊಪ್ಪಳದಲ್ಲಿ ಸಚಿವ ಶಿವರಾಜ್‌ ತಂಗಡಗಿ ಅವರು ಹತಾಶೆಗೊಂಡು ತಮ್ಮ ವ್ಯಕ್ತಿತ್ವವನ್ನು ಬೆತ್ತಲಾಗಿಸಿಕೊಂಡಿದ್ದಾರೆ. ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವರ ಕಪಾಳಕ್ಕೆ ಜನತೆ ಲೋಕಸಭಾ ಚುನಾವಣೆಯಲ್ಲಿ ಬಾರಿಸುವುದು ಶತಸಿದ್ಧ” ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಕ್ಕೆ ಬಂದು ಹತ್ತು ತಿಂಗಳಾದರೂ ಬರ ಪರಿಹಾರ ಕೊಡದೆ, ಅಭಿವೃದ್ಧಿಯೂ ಮಾಡದೆ, ಕುಡಿಯುವುದಕ್ಕೆ ನೀರು ಕೊಡಲಾಗದೆ ಇರುವ ಅಯೋಗ್ಯರು, ಜನರಿಂದ ಆಯ್ಕೆಯಾದ ಪ್ರಧಾನಿ ಮೋದಿ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ” ಎಂದು ಬಿಜೆಪಿ ಹೇಳಿದೆ.

ಬಿಜೆಪಿಯ ಈ ಟ್ವೀಟ್‌ಗೆ ತಿರುಗೇಟು ನೀಡಿರುವ ಕಾಂಗ್ರೆಸ್, “ಅಯೋಗ್ಯತನವನ್ನೇ ಮೈಗೂಡಿಸಿಕೊಂಡಿರುವ ಕರ್ನಾಟಕ ಬಿಜೆಪಿಗರೇ ವಿಧಾನಸಭೆ ಚುನಾವಣೆಯಲ್ಲಿ ಮೋದಿಯನ್ನು ಗಲ್ಲಿ ಗಲ್ಲಿಯಲ್ಲಿ ಅಲೆಸಿದಿರಿ, ಆದರೆ ಕನ್ನಡಿಗರು ಮೋದಿಯನ್ನು ಹಾಗೂ ಬಿಜೆಪಿಯನ್ನು ತಿರಸ್ಕರಿಸಿ ಕಪಾಳಮೋಕ್ಷ ಮಾಡಿ ಕಳಿಸಿದ್ದಾರೆ” ಎಂದು ಛೇಡಿಸಿದೆ.

“ಸ್ಮಾರ್ಟ್ ಸಿಟಿಯಾಗಲಿಲ್ಲ, 2 ಕೋಟಿ ಉದ್ಯೋಗ ನೀಡಲಿಲ್ಲ, ಕಪ್ಪು ಹಣ ತರಲಿಲ್ಲ,
15 ಲಕ್ಷ ಬರಲಿಲ್ಲ, ಹೇಳಿದ ಯಾವ ಭರವಸೆಗಳನ್ನೂ ಈಡೇರಿಸದೆ ಮೋದಿ ಮೋದಿ ಎನ್ನುತ್ತಾ ಮತದಾರರೆದುರು ಹೋದರೆ ಬಿಜೆಪಿಗರು ಜನರಿಂದ ತಿರಸ್ಕಾರದ ಕಪಾಳಮೋಕ್ಷ ಎದುರಿಸುವುದು ನಿಶ್ಚಿತ” ಎಂದು ಕಾಂಗ್ರೆಸ್ ಹೇಳಿದೆ.

“ಮೋದಿ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡಲಿಲ್ಲ, ಜಿಎಸ್‌ಟಿ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದಾರೆ. ಬರ ಪರಿಹಾರ ನೀಡದೆ ವಂಚಿಸಿದ್ದಾರೆ. ಮೋದಿ ವಂಚನೆಗಳಿಂದ ಬೇಸತ್ತಿರುವ ಕನ್ನಡಿಗರ ಎದುರು ಮೋದಿಯ ಹೆಸರನ್ನು ಹೇಳುವ ಮುಂಚೆ ನೂರು ಬಾರಿ ಯೋಚಿಸಬೇಕು ಬಿಜೆಪಿಗರು” ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...