ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

Date:

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು ಬಿಜೆಪಿಯ ಒತ್ತಡದಿಂದ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಬಿಜೆಪಿ ಸೋಲುವ ಭಯದಲ್ಲಿ ಇಂತಹ ಕೃತ್ಯಕ್ಕೆ ಇಳಿದಿದೆ. ನಾವು ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೋಗುತ್ತೇವೆ ಎಂದು ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಶಕ್ತಿಸಿನ್ಹ್ ಗೋಹಿಲ್ ಹೇಳಿದ್ದಾರೆ.

ರಾಜಕೀಯ ಒತ್ತಡದಿಂದ ನಾಮಪತ್ರ ತಿರಸ್ಕರಿಸಿರುವ ಬೆಳವಣಿಗೆಯನ್ನು ಗೋಹಿಲ್ ಅವರು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಕರೆದಿದ್ದಾರೆ. ಸೂರತ್‌ನಲ್ಲಿ ಬದಲಿ ಅಭ್ಯರ್ಥಿಯಾಗಿ ಸುರೇಶ್ ಪಡಸಾಲ ಅವರ ನಾಮಪತ್ರವೂ ಅಸಿಂಧುಗೊಂಡಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್‌ ಚುನಾವಣಾ ಕಣದಿಂದ ಹೊರಬಿದ್ದಂತಾಗಿದೆ.

ನಾಮಪತ್ರವನ್ನು ತಿರಸ್ಕರಿಸಿರುವ ಚುನಾವಣಾಧಿಕಾರಿ ಸೌರಭ್ ಪಾರ್ಧಿ ಅವರು ತಮ್ಮ ಆದೇಶದಲ್ಲಿ, “ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ ನಾಲ್ಕು ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ಅವರ ಸಹಿಗಳಲ್ಲಿ ವ್ಯತ್ಯಾಸಗಳು ಕಂಡುಬಂದಿವೆ. ಆ ಸಹಿಗಳು ನೈಜ ಸಹಿಗಳೆಂದು ತೋರುತ್ತಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಾರಿ ಚುನಾವಣೆಯಲ್ಲಿ ಪರಿಸ್ಥಿತಿ ತಮ್ಮ ಗೆಲುವಿಗೆ ಅನುಕೂಲಕರವಾಗಿಲ್ಲ ಎಂಬುದನ್ನು ಮನಗಂಡಿರುವ ಬಿಜೆಪಿ ಕಂಗಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರವನ್ನು ರದ್ದು ಮಾಡಲು ಸಂಚು ರೂಪಿಸಿದೆ. ಸೂರತ್ ಕ್ಷೇತ್ರದಲ್ಲಿ ಬಿಜೆಪಿ ಸೋಲನ್ನು ಅನುಭವಿಸುವುದು ಖಚಿತವಾದ್ದರಿಂದ, ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಲಾಗಿದೆ” ಎಂದು ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಶಕ್ತಿಸಿನ್ಹ್ ಗೋಹಿಲ್ ಆರೋಪಿಸಿದ್ದಾರೆ.

“ನಾಮಪತ್ರದಲ್ಲಿ ಸಹಿಗಳು ವ್ಯತ್ಯಾಸ ಬಂದ ಮಾತ್ರಕ್ಕೆ, ಅವುಗಳನ್ನು ತಿರಸ್ಕರಿಸಲು ಸಾಧ್ಯವಿಲ್ಲ. ಅಲ್ಲದೆ, ಕುಂಭಣಿ ಅವರಿಗೆ ಬೆದರಿಕೆಗಳೂ ಬಂದಿವೆ” ಎಂದು ಅವರು ದೂರಿದ್ದಾರೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಸೂರತ್-ಪೂರ್ವ ವಿಧಾನಸಭಾ ಕ್ಷೇತ್ರದಿಂದ ಎಎಪಿ ಅಭ್ಯರ್ಥಿ ಕೂಡ ನಾಮಪತ್ರದಲ್ಲಿ ಸಹಿ ಮಾಡಿರಲಿಲ್ಲವೆಂದು ಸ್ವತಃ ಅವರೇ ಹೇಳಿಕೊಂಡಿದ್ದರು. ಆದರೂ, ಅವರ ನಾಮಪತ್ರವನ್ನು ತಿರಸ್ಕರಿಸಲು ಚುನಾವಣಾಧಿಕಾರಿ ನಿರಾಕರಿಸಿದ್ದರು. ಆ ಸಮಯದಲ್ಲಿ, ಎಎಪಿ ಅಭ್ಯರ್ಥಿಯು ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ಸಹಾಯವಾಗುತ್ತದೆ ಎಂಬ ಕಾರಣಕ್ಕೆ ಆಗ ನಾಮಪತ್ರ ತಿರಸ್ಕರಿಸಿರಲಿಲ್ಲ. ಆದರೆ, ಈಗ ಅದೇ ಸಹಿಯ ನೆಪವೊಡ್ಡಿ, ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ವಿಚಾರದಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು. ಇದು ಪ್ರಜಾಪ್ರಭುತ್ವದ ಕೊಲೆಯಾಗಿದೆ. ಈ ಆದೇಶದ ವಿರುದ್ಧ ನಾವು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತೇವೆ. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ಗೂ ಹೋಗುತ್ತೇವೆ” ಎಂದು ಗೋಹಿಲ್ ಹೇಳಿದ್ದಾರೆ.

ಸೂರತ್‌ನ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರ ಚುನಾವಣಾ ಏಜೆಂಟ್ ದಿನೇಶ್ ಜೋಧಾನಿ ಅವರು ಕುಂಭಣಿ ಅವರ ನಾಮಪತ್ರದ ವಿರುದ್ಧ ಶನಿವಾರ ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ಚುನಾವಣಾಧಿಕಾರಿ ಭಾನುವಾರ ಬೆಳಿಗ್ಗೆ ಕಾಂಗ್ರೆಸ್ ಅಭ್ಯರ್ಥಿಗೆ ಹಾಜರಾಗಲು ಸಮಯ ನೀಡಿದ್ದರು. ಬಳಿಕ, ಅವರ ನಾಮಪತ್ರವನ್ನು ಅಧಿಕಾರಿಗಳು ತಿರಸ್ಕರಿಸಿದ್ದಾರೆ.

‘ಬಿಜೆಪಿ ಅಭ್ಯರ್ಥಿಯನ್ನು ವಿಜಯಿ’ ಎಂದು ಘೋಷಿಸಿದ ಚುನಾವಣಾಧಿಕಾರಿ

ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕಾರಗೊಂಡರೆ, ಉಳಿದಿದ್ದ ಎಂಟು ಮಂದಿ ಅಭ್ಯರ್ಥಿಗಳು ಕೂಡ ನಾಮಪತ್ರ ಹಿಂದೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರನ್ನು ಚುನಾವಣಾಧಿಕಾರಿ ವಿಜಯಿ ಎಂದು ಘೋಷಿಸಿದ್ದಾರೆ.

ಅಲ್ಲದೇ, ಪ್ರಮಾಣ ಪತ್ರವನ್ನೂ ಕೂಡ ನೀಡಿದ್ದಾರೆ. ಮುಂದಿನ ಮೇ 7ರಂದು ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ನಡೆಯುವುದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...