ಪೆನ್‌ಡ್ರೈವ್ ಪ್ರಕರಣ| ಪ್ರಜ್ವಲ್‌ ರೇವಣ್ಣ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Date:

ಹಾಸನ ಜಿಲ್ಲೆಯಲ್ಲಿ ಮುಗ್ಧ ಮಹಿಳೆಯರ ಮೇಲೆ ಮಾನಸಿಕವಾಗಿ ಚಿತ್ರಹಿಂಸೆ ನೀಡಿ ಮಹಿಳೆಯರನ್ನು ಮಹಿಳೆಯರ ಹಕ್ಕುಗಳ ಕಗ್ಗೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಾಸನ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯರನ್ನು ಬೆತ್ತಲೆಗೊಳಿಸಿರುವ ಎಲ್ಲಾ ವಿಡಿಯೋ ಚಿತ್ರಣಗಳು ರಾಜ್ಯದ ಎಲ್ಲಾ ಕಡೆ ಹರಿದಾಡುತ್ತಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ದ ಕೂಡಲೇ ಅತ್ಯಂತ ಕಠಿಣ ಕ್ರಮ ಕೈಗೊಂಡು ಮಹಿಳೆಯರನ್ನು ರಕ್ಷಿಸಬೇಕು ಎಂದು ದೂರನ್ನು ಸಲ್ಲಿಸಲಾಗಿದೆ.

ಇದನ್ನು ಓದಿದ್ದೀರಾ?  ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಕರ್ನಾಟಕ ರಾಜ್ಯ ಹಾಗೂ ದೇಶದ ಎಲ್ಲಾ ಭಾಗದಲ್ಲೂ ಹಾಸನದ ಮಹಿಳೆಯರ ಬೆತ್ತಲೆ ಪ್ರಕರಣ ಬಹಿರಂಗವಾಗಿದೆ. ಇದರ ಬಗ್ಗೆ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಹಿಳಾ ಆಯೋಗವು ಸಹ ದೂರನ್ನು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿದೆ. ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ಕಾನೂನು ಕ್ರಮಕ್ಕೆ ಮುಂದಾಗಿದೆ. ಆದರೆ ಮಾನವ ಹಕ್ಕು ಉಲ್ಲಂಘನೆ ಬಹಿರಂಗವಾದರೂ ಸಹ ಇಲ್ಲಿಯವರೆಗೂ ಯಾವುದೇ ರೀತಿಯ ಕಾನೂನಾತ್ಮಕ ಕ್ರಮ ಕೈಗೊಳ್ಳದೆ ಇರುವುದು ಅತ್ಯಂತ ದುರದೃಷ್ಟಕರ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಾಗೆಯೇ ಕೂಡಲೇ ರಾಜ್ಯ ಮಾನವ ಹಕ್ಕು ಆಯೋಗದ ತಂಡ ಹಾಸನಕ್ಕೆ ಭೇಟಿ ನೀಡಿ ನಡೆದಿರುವ ಅನ್ಯಾಯದ ಬಗ್ಗೆ ಮಾನವ ಹಕ್ಕು ಉಲ್ಲಂಘನೆ ಆಗಿರುವ ಬಗ್ಗೆ ತನಿಖೆ ನಡೆಸಬೇಕು. ಯಾರು ಮುಗ್ಧ ಮಹಿಳೆಯರನ್ನು ದುರುಪಯೋಗಪಡಿಸಿಕೊಂಡು ಲೈಂಗಿಕವಾಗಿ ಚಿತ್ರಹಿಂಸೆ ನೀಡಿದ್ದಾರೋ ಆ ಅರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಇದನ್ನು ಓದಿದ್ದೀರಾ?  ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡು ಹೋಗಲು ಬಿಜೆಪಿ ಸರ್ಕಾರ ಮತ್ತು ಮೋದಿಯವರೇ ನೇರ ಕಾರಣ | ಪುಷ್ಪಾ ಅಮರನಾಥ್

ಇನ್ನು ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್, “ಕೋಮುವಾದವನ್ನು ವಿರೋಧಿಸುತ್ತಿದ್ದ ದೇವೇಗೌಡರು, ಯಾವ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಪ್ರಜ್ವಲ್‌ ರೇವಣ್ಣನನ್ನು ರಕ್ಷಿಸಲೆಂದೇ ಜನತಾದಳ ಬಿಜೆಪಿಯೊಂದಿಗೆ ಕೈ ಜೋಡಿಸಿದೆ” ಎಂದು ಆರೋಪಿಸಿದರು.

“ತಮ್ಮ ಕುಟುಂಬದ ರಕ್ಷಣೆಗಾಗಿ ದೇವೇಗೌಡರು ಈ ರೀತಿ ಮೈತ್ರ ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಕೇಂದ್ರ ಸರಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಲು ಮುಖ್ಯ ಕಾರಣ. ಪ್ರಜ್ವಲ್ ಇಂತಹ ಕೆಟ್ಟ ಕೆಲಸ ಮಾಡಿರುವುದು ಮೊದಲೇ ಇವರೆಲ್ಲರಿಗೂ ತಿಳಿದಿತ್ತು” ಎಂದು ವಿ.ಮನೋಹರ್ ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...