ಲೆಕ್ಕಪತ್ರವಿಲ್ಲದ 524 ಕೋಟಿ ರೂ. ವಹಿವಾಟು ಆರೋಪ; ಕಾಂಗ್ರೆಸ್‌ಗೆ ಮತ್ತೆ ಆದಾಯ ತೆರಿಗೆ ನೋಟಿಸ್!

Date:

ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಮತ್ತೊಂದು ನೋಟಿಸ್ ನೀಡಿದೆ. ಈಗಾಗಲೇ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸೀಝ್ ಮಾಡಲಾಗಿದ್ದು, ಸುಮಾರು 135 ಕೋಟಿ ರೂಪಾಯಿಯನ್ನು ಐಟಿ ಇಲಾಖೆಯು ಕಾಂಗ್ರೆಸ್‌ ಖಾತೆಯಿಂದ ವಿತ್‌ಡ್ರಾ ಮಾಡಿಕೊಂಡಿದೆ. ಈಗ ಲೆಕ್ಕಪತ್ರವಿಲ್ಲದ 524 ಕೋಟಿ ರೂಪಾಯಿ ವಹಿವಾಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಮತ್ತೊಂದು ನೋಟಿಸ್ ನೀಡಿದೆ. ಅದು ಕೂಡಾ 2014-2021 ಸಾಲಿನ ಲೆಕ್ಕಾಚಾರ ಇದಾಗಿದೆ.

2019ರ ಲೋಕಸಭೆ ಚುನಾವಣೆಗೂ ಮುನ್ನ ಐಟಿ ದಾಳಿಗಳನ್ನು ಮಾಡಲಾಗಿದ್ದು, ಈಗ 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ಗೆ ಮತ್ತೆ ಭಾರೀ ದಂಡ ವಿಧಿಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಈ ನಡುವೆ ವಿಪಕ್ಷಗಳು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ವಿಪಕ್ಷಗಳನ್ನು ಆರ್ಥಿಕವಾಗಿ ದಿವಾಳಿ ಮಾಡಲೆಂದೇ 1994-95ರ ಐಟಿ ರಿಟರ್ನ್ ಸಲ್ಲಿಕೆಯ ಲೆಕ್ಕಾಚಾರ ಹಾಕಲಾಗುತ್ತಿದೆ” ಎಂದು ಆರೋಪಿಸಿದೆ.

ಇದನ್ನು ಓದಿದ್ದೀರಾ?  ₹210 ಕೋಟಿ ದಂಡ ವಿಧಿಸಿ ಕಾಂಗ್ರೆಸ್ ವಿರುದ್ಧ ಕ್ರಿಮಿನಲ್‌ ಕ್ರಮ ತೆಗೆದುಕೊಳ್ಳಲಾಗಿದೆ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಸುಪ್ರೀಂ ಕೋರ್ಟ್ ವಕೀಲ, ಕಾಂಗ್ರೆಸ್ ಮುಖಂಡ ವಿವೇಕ್ ಕೃಷ್ಣ ತನ್ಕಾ “ಈಗ ಆದಾಯ ತೆರಿಗೆಯು 523.87 ಕೋಟಿ ರೂಪಾಯಿ ವಹಿವಾಟಿನ ಮೇಲೆ ಭಾರೀ ಪ್ರಮಾಣದ ದಂಡ ಮತ್ತು ಬಡ್ಡಿ ವಿಧಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.

“ಲೋಕಸಭೆ ಚುನಾವಣೆಗೂ ಮುನ್ನ ನಮ್ಮ ಖಾತೆಯಿಂದ 135 ಕೋಟಿ ರೂಪಾಯಿ ವಿತ್‌ಡ್ರಾ ಮಾಡಿ ನಮ್ಮ ಆರ್ಥಿಕ ಶಕ್ತಿ ಕುಂದಿಸಿದ್ದು ಸಾಕಾಗಿಲ್ಲ ಅನಿಸುತ್ತದೆ. ಈಗ ನಮ್ಮ ಆರ್ಥಿಕ ಶಕ್ತಿಯನ್ನು ಇನ್ನಷ್ಟು ಕುಗ್ಗಿಸಲು ನೋಡುತ್ತಿದೆ. ಆದರೆ ಇನ್ನೇನು ಬಾಕಿ ಉಳಿದಿದೆ” ಎಂದು ವಿವೇಕ್ ಕೃಷ್ಣ ತನ್ಕಾ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ?  ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿ ವಜಾ

ಇತ್ತೀಚೆಗೆ ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಯ ವಿರುದ್ಧವಾಗಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. 2014-15, 2015-16 ಮತ್ತು 2016-17 ಹಣಕಾಸು ವರ್ಷದ ಆದಾಯ ತೆರಿಗೆಯನ್ನು ಮರು ಮೌಲ್ಯಮಾಪನ ಮಾಡುವ ಆದೇಶವನ್ನು ಕಾಂಗ್ರೆಸ್‌ ಪ್ರಶ್ನಿಸಿತ್ತು.

ನಿಯಮವನ್ನು ಉಲ್ಲಂಘಿಸಿ ಹೆಚ್ಚುವರಿ ವರ್ಷಗಳ ಆದಾಯ ತೆರಿಗೆ ಮರು ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಪರ ವಕೀಲ ಹಿರಿಯ ವಕೀಲ ಅಭಿಷೇಕ್ ಸಿಂಗ್ವಿ ಆದಾಯ ತೆರಿಗೆ ಇಲಾಖೆಯು ಆರು ವರ್ಷಕ್ಕಿಂತ ಹಳೆಯ ಆದಾಯ ತೆರಿಗೆಗಳ ಮರು ಮೌಲ್ಯಮಾಪನ ಮಾಡುತ್ತಿದೆ ಎಂದು ದೂರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...