ಕಾಂಗ್ರೆಸ್‌ ಸರ್ಕಾರ ಮಾಡಿದ್ದು ಜಾತಿ ಗಣತಿ, ಅನುಮಾನ ನಿಜವಾಗಿದೆ: ಹೆಚ್‌ ಡಿ ಕುಮಾರಸ್ವಾಮಿ

Date:

ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡಿದ್ದು ಜಾತಿ ಗಣತಿ! ಮುಖ್ಯಮಂತ್ರಿ ಮಹೋದಯರ ಪ್ರಕಾರ ಅದು ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ! ಸಿದ್ದರಾಮಯ್ಯ ಅವರು ಈಗ ಉಲ್ಟಾ ಹೊಡೆದಿದ್ದಾರೆ! ‘ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ’ ಎಂದು ಹೊಸ ಪೀಪಿ ಊದುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

“ಹಾಗಾದರೆ ಹಾದಿ ಬೀದಿಯಲ್ಲಿ ತೇಲಾಡುತ್ತಿರುವ, ಬಿದ್ದೂಬಿದ್ದು ಹೊರಳಾಡುತ್ತಿರುವ ಅಂಕಿ ಸಂಖ್ಯೆಗಳು ಏನು? ಸೋರಿಕೆಯಾಗಿರುವ ದತ್ತಾಂಶ ಮತ್ತು ಸಿಎಂ ಅವರು ಹೇಳಿದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ದತ್ತಾಂಶವು ಎರಡೂ ಒಂದೇನಾ ಅಥವಾ ಅಲ್ಲವಾ” ಎಂದು ಎಕ್ಸ್‌ ತಾಣದಲ್ಲಿ ಪ್ರಶ್ನಿಸಿದ್ದಾರೆ.

“ವರದಿ ಬಹಿರಂಗಕ್ಕೆ ಮೊದಲೇ ವ್ಯವಸ್ಥಿತವಾಗಿ ಸೋರಿಕೆ ಮಾಡಿದ್ದು ಯಾರು? ಅದರ ಹಿಂದಿರುವ ಕಳ್ಳ ಕೈ ಯಾವುದು? ಬೀದಿಪಾಲಾದ ದತ್ತಾಂಶ ಇಟ್ಟುಕೊಂಡು ಏನು ಮಾಡುತ್ತೀರಿ? ಸಿಎಂ ಸಾಹೇಬರೇ, ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ. ಅದು ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ ಸೇರಿದ ಮೇಲೆ ಸೋರಿಕೆ ಆಯಿತಾ? ಅಥವಾ ನಿಮ್ಮ ಗ್ಯಾಂಗ್ ಕೈ ಚಳಕವಾ? ತನಿಖೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೀರಾ? ನೀವೇ ಹೇಳಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋರಿಕೆಗೆ ನಿಮ್ಮ ಸರಕಾರವೇ ಹೊಣೆ, ಸಂಶಯವೇ ಇಲ್ಲ. ಯಾವುದೇ ಕಾರಣಕ್ಕೂ ಸೋರಿಕೆಯಾದ ಈ ವರದಿಯನ್ನು ಸಂಪುಟದಲ್ಲಿ ಮಂಡಿಸಲೇಬಾರದು. ಮಂಡಿಸಿ ಸಂಪುಟದ ಪಾವಿತ್ರ್ಯತೆ ಹಾಳು ಮಾಡಬೇಡಿ” ಎಂದಿದ್ದಾರೆ.

“ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...