ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರ್ಕಾರ: ಎ ಎಸ್ ಪಾಟೀಲ ನಡಹಳ್ಳಿ ವಾಗ್ದಾಳಿ

Date:

ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ ಬರಗಾಲದ ಪರಿಹಾರವನ್ನು ಕೊಟ್ಟಿದ್ದರೂ ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇವತ್ತಿಗೂ ನೀಡಿಲ್ಲ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

ಬೆಂಗಳುರು ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ. ಬರಗಾಲದ ಪರಿಹಾರಧನ ಕೊಟ್ಟಿದೆ. ಆದರೂ, ದೇವರು ಕೊಟ್ಟರೂ ಕೂಡ ಪೂಜಾರಿ ಕೊಡಲು ತಯಾರಿಲ್ಲ” ಎಂದರು.

“ಬರಗಾಲದಿಂದ ಬೆಂದಿರುವ ರೈತರಿಗೆ ಅತ್ಯಂತ ಕಡಿಮೆ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ಈ ಸರ್ಕಾರ ಮಾಡಬೇಕಿತ್ತು. ಸರಕಾರವು ಬಿತ್ತನೆ ಬೀಜಕ್ಕೂ ಅತಿ ಹೆಚ್ಚು ದರ ವಿಧಿಸುತ್ತಿದೆ. ಈಗ ಮುಂಗಾರು ಸಂದರ್ಭದಲ್ಲಿ ಬೆಳೆಯುವ ಹೆಸರು, ಶೇಂಗಾ, ಉದ್ದು, ಮೆಕ್ಕೆಜೋಳ ಮೊದಲಾದವುಗಳ ದರವನ್ನು ಅತಿ ಹೆಚ್ಚು ಪ್ರಮಾಣದಲ್ಲಿ ಏರಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ದು ಪ್ರತಿ ಕೆಜಿಗೆ 43 ರೂ, ತೊಗರಿಗೆ 48 ರೂ., ಮೆಕ್ಕೆಜೋಳ 5 ಕೆಜಿ ಪೊಟ್ಟಣಕ್ಕೆ 24 ರೂ. ಹೆಚ್ಚಿಸಿದ್ದಾರೆ. ಸರಕಾರ ಈ ಹಿಂದಿನ ಬಿತ್ತನೆ ಬೀಜದ ದರವನ್ನೇ ಮುಂದುವರಿಸಬೇಕು. ಬಿತ್ತನೆ ಬೀಜ, ಗೊಬ್ಬರ ಸಮರ್ಪಕವಾಗಿ ಎಲ್ಲ ರೈತರಿಗೆ ಸಿಗುವಂತೆ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ಕೊಬ್ಬರಿಯನ್ನು ಎಂಎಸ್‍ಪಿ ಅಡಿ ಖರೀದಿ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಪ್ರತಿ ಕ್ವಿಂಟಲ್‍ಗೆ ಸುಮಾರು 12 ಸಾವಿರ ರೂ. ಕೊಟ್ಟು ಖರೀದಿ ಅವಕಾಶ ನೀಡಿದ್ದು, ಈ ಸರಕಾರ ಚೀಲ ಇಲ್ಲ ಎಂಬ ನೆಪ ಹೇಳುತ್ತಿದೆ. ಇದು ಅತ್ಯಂತ ನಾಚಿಕೆಗೇಡು. ಈಗಾಗಲೇ ಖರೀದಿಸಿದ 35 ಸಾವಿರ ಟನ್ ಕೊಬ್ಬರಿಗೆ ಹಣವನ್ನೂ ನೀಡಿಲ್ಲ” ಎಂದು ದೂರಿದರು.

“ರೈತರು ಹಣ ಕೇಳಿದರೆ ಕೊಬ್ಬರಿ ತೆಗೆದುಕೊಂಡು ಹೋಗುವಂತೆ ಅಧಿಕಾರಿಗಳು ದರ್ಪದಿಂದ ಮಾತನಾಡುತ್ತಿದ್ದಾರೆ. ಕೊಬ್ಬರಿಗೆ ಸಂಬಂಧಿಸಿ ರೈತರಿಗೆ ಹಣ ನೀಡಬೇಕು. ಚೀಲ ಇಲ್ಲ ಎಂಬ ಕುಂಟು ನೆಪ ಬಿಟ್ಟು ಕೊಬ್ಬರಿ ಖರೀದಿ ಮುಂದುವರಿಸಬೇಕು” ಎಂದು ಒತ್ತಾಯಿಸಿದರು.

“ಹಿಂದೆ ಹೈನುಗಾರರಿಗೆ ನಮ್ಮ ಸರಕಾರ ಹಾಲು ಉತ್ಪಾದನೆಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಈಗ ಹೈನುಗಾರಿಕೆಗೆ ಸಂಬಂಧಿಸಿ ಪ್ರತಿ ಲೀಟರಿಗೆ 5 ರೂ. ಪ್ರೋತ್ಸಾಹಧನ ಸ್ಥಗಿತಗೊಂಡಿದೆ ಎಂದರಲ್ಲದೆ, ರೈತರಿಗೆ ಬಾಕಿ ಇರುವ 700ರಿಂದ 800 ಕೋಟಿ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...