ಕಾಂಗ್ರೆಸ್‌ನ ಮಹಿಳಾ ಸಬಲೀಕರಣ ಯೋಜನೆಗಳು ಗೊಂದಲದ ಗೂಡಾಗಿವೆ; ಬಿಜೆಪಿ ಟೀಕೆ

Date:

ಕಾಂಗ್ರೆಸ್ ಜಾರಿ ತರುವ ಮಹಿಳಾ ಸಬಲೀಕರಣ ಅಂಶಗಳು ಗೊಂದಲದ ಗೂಡಾದರೇ, ಬಿಜೆಪಿ ಜಾರಿಗೆ ತರುವ ಮಹಿಳಾ ಸಬಲೀಕರಣ ಅಂಶಗಳು, ಮಹಿಳೆಯರ ಮುಖದಲ್ಲಿ ನೆಮ್ಮದಿಯ ಮಂದಹಾಸವನ್ನು ಮೂಡಿಸುತ್ತದೆ ಎಂದು ಕಾಂಗ್ರೆಸ್‌ ಗ್ಯಾರಂಟಿಗಳನ್ನು ಬಿಜೆಪಿ ಟೀಕಿಸಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ಒಂದು ಸುಳ್ಳನ್ನು ನಿರಂತರವಾಗಿ ಹೇಳುತ್ತಾ, ಸತ್ಯವನ್ನು ಮರೆಮಾಚಿ, ಆ ಸುಳ್ಳನ್ನೇ ಸತ್ಯ ಎಂದು ನಿರೂಪಿಸುವುದು ಕಾಂಗ್ರೆಸ್‌ ಪಕ್ಷದ ಸಾಮಾನ್ಯ ಲಕ್ಷಣವಾಗಿದೆ” ಎಂದು ಕಿಡಿಕಾರಿದೆ.

“ಚುನಾವಣಾ ಅವಧಿಯಲ್ಲಿ ಬೆಲೆಯೇರಿಕೆಯ ಬಗ್ಗೆ ರಾಜ್ಯದ ಮಹಿಳೆಯರ ಹಾದಿ ತಪ್ಪಿಸಲು ಯತ್ನಿಸಿದ ಕಾಂಗ್ರೆಸ್, ಅಧಿಕಾರಕ್ಕೇರಿದ ದಿನದಿಂದ, ನಿತ್ಯವೂ ದಿನ ಬಳಕೆ ವಸ್ತುಗಳ ಬೆಲೆ ಏರಿಸುತ್ತಿದೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲ ಕ್ಯಾಬಿನೆಟ್‌ನಲ್ಲಿಯೇ ನೀಡಬೇಕಾಗಿದ್ದ “ಗೃಹಲಕ್ಷ್ಮಿ” ಯೋಜನೆಯ ₹2000 ಇನ್ನೂ ಮಹಿಳೆಯರ ಅಕೌಂಟ್‌ಗಳಿಗೆ ಜಮೆಯಾಗಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ದಿನದಿಂದ ರಾಜ್ಯದಲ್ಲಿ ಉಂಟಾಗಿರುವ ಬೆಲೆಯೇರಿಕೆಯನ್ನು ಗಮನಿಸಿದರೆ, ಇವರು ನೀಡುವ ₹2000 ದಲ್ಲಿ ಬೇಕಾಗುವಷ್ಟು ದಿನಸಿ ಖರೀದಿಸಲು ಸಾಧ್ಯವಿಲ್ಲ” ಎಂದು ದೂರಿದೆ.

“ಮಹಿಳಾ ಸಬಲೀಕರಣದ ಅಂಶವನ್ನೇ ಕಾಂಗ್ರೆಸ್ ಬುಡಮೇಲು ಮಾಡಿದ್ದು, ಸರ್ವರ್ ಹ್ಯಾಕ್ ಆಗಿದೆ ಎಂಬ ಅಸಂಬದ್ಧ ಸುಳ್ಳುಗಳನ್ನು ಹೇಳುತ್ತಾ, ಕಾಲಹರಣ ಮಾಡುತ್ತಿದೆ. ಸ್ವಾತಂತ್ರ್ಯ ಬಂದು 70 ವರ್ಷಗಳ ಕಾಲ ಹೊಗೆಯೊಂದಿಗೆ ಅಡುಗೆ ಮಾಡಿದ್ದ ಮಹಿಳೆಗೆ, ಉಜ್ವಲಾ ಯೋಜನೆಯ ಮೂಲಕ ಹೊಗೆ ಮುಕ್ತ ಅಡುಗೆ ಮನೆ ನೀಡಿದ್ದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ” ಎಂದು ಕೇಂದ್ರ ಸರ್ಕಾರದ ಉಜ್ವಲ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷ ನಾಯಕನ ಆಯ್ಕೆ ಆಗದಿರಲು ಸಂತೋಷ್-ಬಿಎಸ್‌ವೈ ಆಂತರಿಕ ಯುದ್ಧ ಕಾರಣವೆ: ಕಾಂಗ್ರೆಸ್‌ ಪ್ರಶ್ನೆ

“ದಶಕಗಳ ಕಾಲ ನೀರಿಗಾಗಿ ಹವಣಿಸಿದ್ದ ಮಹಿಳೆಯರಿಗೆ, ಅವರ ಮನೆ ಬಾಗಿಲಿಗೆ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ನಳದ ಸಂಪರ್ಕ ಒದಗಿಸಿದ್ದು ಮೋದಿಯವರ ಸರ್ಕಾರ” ಎಂದು ಕಾಂಗ್ರೆಸ್‌ಗೆ ಟ್ಯಾಂಗ್‌ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...