ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

Date:

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

“ಕಾಂಗ್ರೆಸ್‌ ರಾಜ್ಯ ಮತ್ತು ರಾಷ್ಟ್ರದ ಆರ್ಥಿಕತೆಯ ಜೊತೆ ಆಟವಾಡುತ್ತಿದ್ದಾರೆ. ಯುವಕರ ಭವಿಷ್ಯದ ಜತೆ ಆಟವಾಡುತ್ತಿದ್ದಾರೆ. ಕೇವಲ ಅಧಿಕಾರ ಪಡೆಯಲು, ಸ್ವಾರ್ಥಿಗಳಾಗಬಾರದು. ಜನರನ್ನು ದಾರಿ ತಪ್ಪಿಸಬಾರದು. ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗುವುದಿಲ್ಲ. ಆರ್ಥಿಕತೆಯಲ್ಲಿ ಟ್ರಿಲಿಯನ್‌ ಡಾಲರ್‌ಗಳನ್ನು ಹೊಂದಿರುವ ಅಮೆರಿಕದಂತಹ ದೇಶದಲ್ಲಿ ಅವರು ಅಲ್ಲಿನ ನಿರಾಶ್ರಿತರಿಗೆ ಮತ್ತು ಬಡವರಿಗೆ ಏಕೆ ಉಚಿತ ಯೋಜನೆಗಳನ್ನು ನೀಡುತ್ತಿಲ್ಲ? ಯಾವ ದೇಶವೂ ಈ ರೀತಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಲೋಕಸಭೆ ಚುನಾವಣೆ ನಂತರ ಯಾವ ರೀತಿ ಆಡಳಿತ ನಡೆಸುತ್ತಾರೆ ಎಂಬುದನ್ನು ಕಾದು ನೋಡಬೇಕು” ‘ಟಿಎನ್‌ಐಇ’ ಸಂದರ್ಶನದಲ್ಲಿ ಹೇಳಿದ್ದಾರೆ.

“ಸ್ಪರ್ಧೆಗೆ ಟಿಕೆಟ್ ನೀಡದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ರಾಜಕೀಯದಲ್ಲಿ ಟಿಕೆಟ್ ನೀಡದಿದ್ದರೆ ಪಕ್ಷ ತೊರೆಯುತ್ತಾರೆ. ಆದರೆ, ನಾನು ಮೋದಿ ಅವರ ಕೆಲಸವನ್ನು ನೋಡಿ, ಅವರ ನಾಯಕತ್ವದಲ್ಲಿ ನಂಬಿಕೆ ಇಟ್ಟು ಬಿಜೆಪಿಗೆ ಸೇರಿದ್ದೇನೆ” ಎಂದು ಅವರು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ದೇಶಕ್ಕಾಗಿ ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ. ನಾನು ಈಗ ನನ್ನ ಭವಿಷ್ಯದ ಬಗ್ಗೆ ಯೋಚಿಸಬಾರದು ಅಥವಾ ನನಗೆ ಏನು ಸಿಗುತ್ತದೆ ಅಂತ ಯೋಚಿಸಬಾರದು. ನಾನು ಅಂತಹ ವ್ಯಕ್ತಿಯಲ್ಲ. ಮೋದಿ ಅವರ ದೃಷ್ಟಿಕೋನವನ್ನು ನಾನು ಬೆಂಬಲಿಸುತ್ತೇನೆ” ಎಂದು ಹೇಳಿದ್ದಾರೆ.

ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದ ಬಗ್ಗೆ ಮಾತನಾಡಿದ ಸುಮಲತಾ “ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲ್ಲುವುದು ತಮಾಷೆಯಲ್ಲ. ನಾನು ಕರ್ನಾಟಕದಲ್ಲಿ 52 ವರ್ಷಗಳ ನಂತರ ಸ್ವತಂತ್ರ ಸಂಸದೆಯಾಗಿ ಗೆದ್ದಿದ್ದೇನೆ. ಇದು ಐದು ವರ್ಷಗಳಿಗೊಮ್ಮೆ ಮರುಕಳಿಸುವುದಿಲ್ಲ. ಕಳೆದ ಚುನಾವಣೆಯ ರಾಜಕೀಯ ಸನ್ನಿವೇಶವೇ ಬೇರೆ ಇತ್ತು. ಆ ಬಾರಿ ಬಿಜೆಪಿ ನನಗೆ ಬೆಂಬಲ ನೀಡಿತ್ತು, ಮಂಡ್ಯದ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲಿಸಿದರು. ಆದರೆ, ಕಾಂಗ್ರೆಸ್ ನಾಯಕತ್ವ ಬೆಂಬಲಿಸಲಿಲ್ಲ. ಹೀಗಾಗಿಯೇ ನಾನು ಗೆದ್ದೆ. ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿದ್ದು, ಟಿಕೆಟ್ ದೊರೆತಿಲ್ಲ. ನನಗೆ ಸರಿಯಾದ ಗೌರವ ಸಿಗದ ಕಾರಣ ಕಾಂಗ್ರೆಸ್‌ಗೆ ಹೋಗಲು ನನಗೆ ಇಷ್ಟವಿರಲಿಲ್ಲ” ಎಂದು ಹೇಳಿದ್ದಾರೆ.

“ಹಳೇ ಮೈಸೂರು ಭಾಗದಲ್ಲಿ ಅದರಲ್ಲೂ ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸಲು ಕೆಲಸ ಮಾಡುತ್ತೇನೆ. ರಾಜ್ಯಾದ್ಯಂತ ಪಕ್ಷವನ್ನು ಬಲಪಡಿಸಲು ನನ್ನ ಉಪಸ್ಥಿತಿಯ ಅಗತ್ಯವಿದೆ. ಕನಿಷ್ಠ ಪಕ್ಷ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನ ಮಾಡಬೇಕೆಂದಿದ್ದೇನೆ” ಎಂದು ಸುಮಲತಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...