ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

Date:

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಆರೋಪ-ಪ್ರತ್ಯಾರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್‌ 13ರಂದು ಗುರು ರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಹಗರಣದಿಂದಾಗಿ ಠೇವಣಿ ಕಳೆದುಕೊಂಡಿದ್ದ ಸಂತ್ರಸ್ತರ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಈ ಸಭೆಯಲ್ಲಿ ಠೇವಣಿದಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತೇಜಸ್ವಿ ಸೂರ್ಯ ಪರಾರಿಯಾದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ‘ಸೂರ್ಯ ಬಂಡಲ್ ಬ್ಯಾಂಕ್’ ಎಂಬ ವಿಶಿಷ್ಟ ಕ್ಯಾಂಪೇನ್ ಆರಂಭಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ 40 ಪಸೆಂಟ್ ಕಮಿಷನ್ ವಿಚಾರವನ್ನು ಇಟ್ಟುಕೊಂಡು, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಫೋಟೋ ಬಳಸಿಕೊಂಡು, ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದರ ಪರಿಣಾಮ ಚುನಾವಣೆಯ ಫಲಿತಾಂಶದಲ್ಲೂ ಕಂಡು ಬಂದಿತ್ತು. ಈಗ ಅಂಥದ್ದೇ ಹೊಸ ಪ್ರಯೋಗವನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಪ್ರಯೋಗಿಸಿದ್ದಾರೆ.

ಎಟಿಎಂ ಕಾರ್ಡ್‌ನ ರೂಪದಲ್ಲೇ, ‘ಸೂರ್ಯ ಬಂಡಲ್ ಬ್ಯಾಂಕ್’ ಎಂಬ ಕಾರ್ಡ್‌ನ್ನು ಮುದ್ರಿಸಲಾಗಿದ್ದು, ಅದನ್ನು ಮತದಾರರಿಗೆ ವಿತರಿಸುವ ಮೂಲಕ, ಕಾಂಗ್ರೆಸ್ ಮತ ಬ್ಯಾಂಕ್ ಗಟ್ಟಿ ಮಾಡಲು ವಿನೂತನ ಪ್ರಯೋಗಕ್ಕೆ ‘ಕೈ’ ಹಾಕಿದೆ.

ಗುರು ರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಹಗರಣದಿಂದಾಗಿ ಠೇವಣಿ ಕಳೆದುಕೊಂಡಿದ್ದವರ ₹2500 ಕೋಟಿ ಸಂತ್ರಸ್ತರಿಗೆ ಮತ್ತೆ ಸಿಗುವಂತಾಗಲು ತೇಜಸ್ವಿ ಸೂರ್ಯ ವಿಫಲವಾಗಿದ್ದರು. ಇದು ಈಗ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ವಿಚಾರವಾಗಿ ಮಾರ್ಪಟ್ಟಿದೆ. ಹೀಗಾಗಿಯೇ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ವಿನೂತನ ಪ್ರಚಾರದ ಐಡಿಯಾವನ್ನು ಮಾಡಿದೆ.

ಎಸ್‌ಬಿಐ ಬ್ಯಾಂಕ್‌ನಂತೆಯೇ ಕಾಣುವ ಲೋಗೋ ಹಾಗೂ ಎಸ್‌ಬಿಬಿ ಎಂದು ಇಂಗ್ಲಿಷ್‌ನಲ್ಲಿ ಈ ಕಾರ್ಡ್‌ನ ಮೇಲೆ ಬರೆಯಲಾಗಿದೆ. ಅಲ್ಲದೇ, #DontBankOnSurya ಎಂಬ ಇಂಗ್ಲಿಷ್ ಪದವನ್ನು ಹ್ಯಾಷ್‌ಟ್ಯಾಗ್ ಬಳಸಿ ಬರೆಯಲಾಗಿದೆ. ಅಲ್ಲದೇ, ಈ ಕಾರ್ಡ್‌ನ ಮಾನ್ಯತೆ ಇರುವುದು 2024ರ ಜೂನ್ 4ರವರೆಗೆ ಮಾತ್ರ ಎಂದು ನಮೂದಿಸಿದ್ದು, “ಏನಿಲ್ಲ, ಏನಿಲ್ಲ, ನಿಮ್ಮ ದುಡ್ಡು ವಾಪಸ್ ಬರಲ್ಲ” ಎಂದು ಕೂಡ ಬರೆಯಲಾಗಿದೆ.

ಇದನ್ನು ಓದಿದ್ದೀರಾ? ಬ್ಯಾಂಕ್‌ ಹಣ ಕಳಕೊಂಡಿದ್ದವರ ಪ್ರಶ್ನೆಗೆ ಉತ್ತರಿಸಲಾಗದೆ ಓಡಿ ಹೋದ ತೇಜಸ್ವಿ ಸೂರ್ಯ: ವಿಡಿಯೋ ವೈರಲ್

ತೇಜಸ್ವಿ ಸೂರ್ಯ ಅವರ ಅರ್ಧ ಫೋಟೋ ಬಳಸಿ, ಅವರ ಬಾಯಲ್ಲಿ ₹500 ರೂಪಾಯಿಯ ನೋಟಿನ ಕಂತೆಯನ್ನು ಕೂಡ ‘ಸೂರ್ಯ ಬಂಡಲ್ ಬ್ಯಾಂಕ್’ ಎಂಬ ಕಾರ್ಡ್‌ನ ಮೇಲೆ ಮುದ್ರಿಸಿದ್ದಲ್ಲದೇ, ಅದನ್ನು ಮತದಾರರಿಗೆ ಹಂಚುವ ಮೂಲಕ ವಿನೂತನ ಕ್ಯಾಂಪೇನ್ ಆರಂಭಿಸಿದೆ. ಇದು ಎಷ್ಟರಮಟ್ಟಿಗೆ ಕಾಂಗ್ರೆಸ್‌ಗೆ ಲಾಭ ತಂದುಕೊಡಲಿದೆ ಎಂಬುದು ಜೂ.4ರಂದು ತಿಳಿದುಬರಲಿದೆ. ಬಿಜೆಪಿಯ ತೇಜಸ್ವಿ ಸೂರ್ಯ ಅವರ ವಿರುದ್ಧ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ.

ಈ ಬೆಳವಣಿಗೆಯ ನಡುವೆಯೇ ಕನ್ನಡ ಚಿತ್ರರಂಗದ ಗಾಯಕ ಗುರು ಕಿರಣ್ ಅವರು ವಿಷ್ಣುವರ್ಧನ್, ರಮೇಶ್ ಅರವಿಂದ್ ನಟನೆಯ “ಏಕದಂತ” ಸಿನಿಮಾಕ್ಕಾಗಿ ಹಾಡಿರುವ ‘ಬಂಡಲ್ ಬಡಾಯಿ ಮಹಾದೇವ’ ಎಂಬ ಹಾಡಿನ ಶೈಲಿಯಲ್ಲೇ ‘ಬಂಡಲ್ ಬಡಾಯಿ ಸೂರ್ಯ’ ಎನ್ನುವ ಹಾಡು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಇದನ್ನು ರಚಿಸಿದವರು ಯಾರು ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಹಾಡನ್ನು ಕಾಂಗ್ರೆಸ್‌ನವರು ಸೇರಿದಂತೆ ಹಲವರು ತಮ್ಮ ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...