ಕಾಂಗ್ರೆಸ್‌ನಿಂದ ಎನ್‌ಆರ್‌ಐ ಘಟಕ ಸ್ಥಾಪಿಸಲು ಚರ್ಚೆ ನಡೆದಿದೆ: ಡಿ ಕೆ ಶಿವಕುಮಾರ್

Date:

  • ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನ
  • ವರ್ಚುವಲ್ ಮೂಲಕ ಭಾಗವಹಿಸಿದ ಉಪ ಮುಖ್ಯಮಂತ್ರಿ

ಕಾಂಗ್ರೆಸ್‌ ಪಕ್ಷದಲ್ಲಿ ಎನ್‌ಆರ್‌ಐ ಘಟಕ ಸ್ಥಾಪಿಸಲು ಚರ್ಚೆ ಮಾಡುತ್ತಿದ್ದೇವೆ. ನೀವು ಮತ್ತೆ ನಿಮ್ಮ ಊರುಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ನಿರ್ಧರಿಸಿದರೆ ನಿಮಗೆ ನೆರವು ನೀಡುತ್ತೇವೆ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು.

“ಇದೊಂದು ಐತಿಹಾಸಿಕ ದಿನ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಪ್ರಗತಿ ಎಂಬ ಮಾತನ್ನು ಆಗಾಗ್ಗೆ ಹೇಳುತ್ತಿರುತ್ತೇನೆ. ಆದೇ ರೀತಿ ನೀವು 1991ರಿಂದ ಒಕ್ಕಲಿಗ ಸಮುದಾಯದ ಜನ ಅಮೆರಿಕದಲ್ಲಿ ಸಂಘಟನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದೀರಿ. ಈ ವಿಶಿಷ್ಟ ಪ್ರಯತ್ನಕ್ಕೆ ಮುಂದಾದವರಿಗೆ ನಾನು ಅಭಿನಂದಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ನಮ್ಮ ರಾಯಭಾರಿಗಳು. ನಮ್ಮ ನೆಲ ಜಲದ ಬಗ್ಗೆ ತೋರುವ ಪ್ರೀತಿ ಮರೆಯಲಾಗದ್ದು. ಮನುಷ್ಯನಿಗೆ ನಂಬಿಕೆ ಬಹಳ ಮುಖ್ಯ. ನಮ್ಮ ಸಮಾಜ, ಮಠ, ಭಾಷೆ, ನೆಲ ಜಲ ಕಾಪಾಡಲು ಶ್ರಮಿಸಿ, ಹೊರ ದೇಶದಲ್ಲಿ ನಮಗೆ ಹೆಸರು ತಂದಿದ್ದೀರಿ. ಕೆಲ ದಿನಗಳಲ್ಲಿ ಅಧಿವೇಶನ ನಡೆಯಲಿದ್ದು, ಬಜೆಟ್ ಮಂಡನೆ ಆಗಲಿದೆ. ಹೀಗಾಗಿ ನಾನು ಈ ಕಾರ್ಯಕ್ರಮಕ್ಕೆ ನೇರವಾಗಿ ಭಾಗವಹಿಸಲು ಆಗಿಲ್ಲ. ಮುಂದಿನ ಬಾರಿ ನೇರವಾಗಿ ಭಾಗಿಯಾಗುವೆ” ಎಂದು ಡಿ ಕೆ ಶಿವಕುಮಾರ್ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಮಾಜಿ ಸಚಿವ ಸುಧಾಕರ್‌

“ಬೆಂಗಳೂರು ನಗರವನ್ನು ಇಡೀ ವಿಶ್ವ ಗಮನಿಸುತ್ತಿದೆ. ಬೆಂಗಳೂರಿನ ಅಭಿವೃದ್ಧಿಗೆ ನೀವು ನಾವುಗಳು ಒಟ್ಟಾಗಿ ಕೆಲಸ ಮಾಡಬೇಕು. ಇಲ್ಲಿ ತಯಾರಾದ ವೈದ್ಯರು, ಇಂಜಿನಿಯರ್‌ಗಳು ವಿಶ್ವದ ಎಲ್ಲಾ ಜಾಗದಲ್ಲಿ ಸಾಧನೆ ಮಾಡುತ್ತಿದ್ದಾರೆ. ಬೆಂಗಳೂರು ನಗರವನ್ನು ಗ್ಲೋಬಲ್ ಬೆಂಗಳೂರು ಆಗಿ ಪರಿವರ್ತಿಸಲು, ಕರ್ನಾಟಕ ರಾಜ್ಯ ಹಾಗೂ ಬೆಂಗಳೂರು ಹಿರಿಮೆ ಮರುಸ್ಥಾಪಿಸಬೇಕು. ಇದಕ್ಕಾಗಿ ನಾವು ಸಾರ್ವಜನಿಕರ ಸಲಹೆ ಕೇಳುತ್ತಿದ್ದು, ನೀವು ಕೂಡ ನಿಮ್ಮ ಸಲಹೆಗಳನ್ನು ನೀಡಬೇಕು” ಎಂದು ತಿಳಿಸಿದರು.

“ಬೆಂಗಳೂರಿನ ವಿಚಾರದಲ್ಲಿ ಮೂರು ‘K’ ಗಳನ್ನು ಮರೆಯಬಾರದು. ಬೆಂಗಳೂರು ಕಟ್ಟಿದ ಕೆಂಪೇಗೌಡ, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಹಾಗೂ ಐಟಿ ಬಿಟಿ ನಗರ ಮಾಡಿದ ಎಸ್.ಎಂ ಕೃಷ್ಣ ಅವರನ್ನು ಸದಾ ಸ್ಮರಿಸಬೇಕು. ನಾವು ವ್ಯವಸಾಯ ಸಮುದಾಯ. ಭೂಮಿಯ ಮಕ್ಕಳು ಎಂಬ ಹೆಸರು ಸಿಕ್ಕಿದೆ. ನಾವು ಎಲ್ಲಾ ಸಮುದಾಯದ ಜೊತೆ ಸಾಮರಸ್ಯದಿಂದ ಬದುಕುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಸ್ವಾಮೀಜಿ, ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೂಡ ವರ್ಚುವಲ್ ಆಗಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...