ಕಾಂಗ್ರೆಸ್‌ನವರು ಯಾವತ್ತು ಸತ್ಯ, ಧರ್ಮವನ್ನು ಉಳಿಸಿದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ ಪ್ರಶ್ನೆ

Date:

ಕಾಂಗ್ರೆಸ್‌ನವರು ಇಂದು ಪೇಪರ್‌ಗಳಲ್ಲಿ ಜಾಹೀರಾತು ಕೊಟ್ಟು, ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ ಹೇಳಿದ್ದಾರೆ. ಇವರು ಯಾವತ್ತು ಸತ್ಯ ಹಾಗೂ ಧರ್ಮವನ್ನು ಉಳಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಕರ್ನಾಟಕ ರಾಜ್ಯವನ್ನು ವಾಮಾಮಾರ್ಗ, ಮೋಸದಿಂದ ಅಸ್ಥಿರಗೊಳಿಸುತ್ತಿದ್ದಾರೆ ಎಂದು ಜಾಹೀರಾತಿನಲ್ಲಿ ತಿಳಿಸಿದ್ದಾರೆ. ಆದರೆ, ವಾಮಾಮಾರ್ಗ, ಮೋಸವನ್ನು ಸ್ಥಿರಗೊಳಿಸಲು ಹೊರಟಿರುವ ಸರ್ಕಾರವಿದು” ಎಂದು ಟೀಕಿಸಿದ್ದಾರೆ.

“ಮಹರ್ಷಿ ವಾಲ್ಮೀಕಿ ನಿಗಮದಿಂದ ಬಡವರಿಗೆ ಕೊಡಬೇಕಾದ ಹಣವನ್ನು ನುಂಗಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿ ಮುಡಾ ನಿವೇಶನ ತೆಗೆದುಕೊಂಡಿದ್ದಾರೆ. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ ಕೊಟ್ಟಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ. ಇವರೇ ಆರ್ಥಿಕ ಸಚಿವರು, ಇವರ ಇಲಾಖೆಗೆ ಸಂಬಂಧಪಟ್ಟ ಹಣ ಬಿಡುಗಡೆ ಆಗಿದೆ. ಅದರ ಸತ್ಯಾಂಶಗಳು ಹೊರಬರುವ ಕಾಲ ದೂರವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

“ಸಿದ್ರಾಮಣ್ಣನ ಬಗ್ಗೆ ಹಿನಕಲ್ ಸಾಕಮ್ಮನ ಕೇಳಿದರೆ ಗೊತ್ತಾಗುತ್ತದೆ. ಯಾವ ವಾಮ ಮಾರ್ಗದಲ್ಲಿ ನಿವೇಶನ ಪಡೆದಿದ್ದಾರೆ ಎಂಬುದು ಗೊತ್ತಾಗುತ್ತದೆ. ಇದೆಲ್ಲ ಇತಿಹಾಸ ಇದೆ. ಹಾಗಾಗಿ ಇಲ್ಲಿ ಸ್ಥಿರಗೊಳಿಸುವುದು, ಅಸ್ಥಿರಗೊಳಿಸೊದು ನಮ್ಮ ಕೈಯಲ್ಲಿಲ್ಲ. ಎಲ್ಲ ಚಾಮುಂಡೇಶ್ವರಿ ಅಮ್ಮನ ಕೈಯಲ್ಲಿದೆ” ಎಂದು ತಿರುಗೇಟು ನಿಡಿದರು.

“ಡಿನ್ನರ್ ಮೀಟಿಂಗ್ ಅಥವಾ ಬ್ರೇಕ್ ಫಾಸ್ಟ್ ಮೀಟಿಂಗ್ ಬೆಳವಣಿಗೆಗಳೆಲ್ಲಾ ಕಾಂಗ್ರೆಸ್‌ನವರಿಗೆ ಸೇರಿದ್ದು. ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರ ಪಕ್ಷಕ್ಕೆ ಸೇರಿದ್ದು. ನಾನು ಮುಖ್ಯಮಂತ್ರಿ ಇದ್ದಾಗ ಜಾತಿಗಣತಿ ವರದಿ ಸ್ವೀಕರಿಸಲಿಲ್ಲ ಎಂದು ಆರೋಪ ಮಾಡಿದ್ದರು. ನಾನು 14 ತಿಂಗಳು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಅವರು ಬಂದು 15 ತಿಂಗಳಾಗಿವೆ. ಏಕೆ ವರದಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...