ಕಾಂಗ್ರೆಸ್‌ಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲ: ಸಿಎಂ ಬೊಮ್ಮಾಯಿ

Date:

  • ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ
  • ನಾವು ಬಹುಮತದ ಗಡಿ ದಾಟುತ್ತೇವೆ

“ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಆರ್.ಟಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ” ಎಂದರು.

“ನಾನೇ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಸಹ ಗೆಲ್ಲುವ ವಿಶ್ವಾಸದಲ್ಲಿದ್ದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ” ಎಂದು ಬೊಮ್ಮಾಯಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಷರತ್ತು ಒಪ್ಪಿಕೊಳ್ಳುವ ಪಕ್ಷಕ್ಕೆ ಬೆಂಬಲ; ಬಿಜೆಪಿ, ಕಾಂಗ್ರೆಸ್‌ಗೆ ಆಹ್ವಾನ ನೀಡಿದ ಎಚ್‌ ಡಿ ಕುಮಾರಸ್ವಾಮಿ

“ಈಗ ನಮ್ಮ ಮುಂದೆ ಮೈತ್ರಿಯ ಪ್ರಶ್ನೆ ಇಲ್ಲ. ನಾವು ಬಹುಮತ ದಾಟುತ್ತೇವೆ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ. ಎಲ್ಲ ಪಕ್ಷಗಳೂ ಸಭೆ ಮಾಡುತ್ತಾರೆ. ಅದನ್ನು ದೊಡ್ಡದಾಗಿ ಬಿಂಬಿಸುವ ಅವಶ್ಯಕತೆ ಇಲ್ಲ” ಎಂದರು.

ಇದಾದ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಸಭೆ ಸೇರಿದ ಸಿಎಂ, ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...