ಬಿಹಾರ ಸಿಎಂ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ; ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಪೊಲೀಸ್ ವಶಕ್ಕೆ

Date:

ಕಾಂಗ್ರೆಸ್ ನಾಯಕ ಮತ್ತು ಎನ್‌ಎಸ್‌ಯುಐ (ಭಾರತೀಯ ವಿದ್ಯಾರ್ಥಿ ಒಕ್ಕೂಟ) ಉಸ್ತುವಾರಿ ಕನ್ಹಯ್ಯ ಕುಮಾರ್ ಅವರನ್ನು ಶುಕ್ರವಾರ ಪಾಟ್ನಾದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭನ್ ಮತ್ತು ಅವರ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂಗೆ ಮನವಿ ಪತ್ರ ಸಲ್ಲಿಸಲು ತೆರಳುತ್ತಿದ್ದಾಗ ಬಂಧಿಸಲಾಗಿದೆ.

ಕಾಂಗ್ರೆಸ್ ನಿಯೋಗ ನಿತೀಶ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿ ಜಲಫಿರಂಗಿ ಬಳಸಿದ್ದಾರೆ. ನಿತೀಶ್ ಆಡಳಿತವು ಯುವಕರಿಗೆ ಉದ್ಯೋಗ ನೀಡುವಲ್ಲಿ ಅಸಮರ್ಥವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ನಾಯಕರ ನಡುವೆ ಘರ್ಷಣೆ ನಡೆದಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ವಿಚಾರಣೆಯೂ ಇಲ್ಲ – ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಉಮರ್ ಖಾಲಿದ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ನಿವಾಸದ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಈ ವೇಳೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಜಲಫಿರಂಗಿಗಳನ್ನೂ ಬಳಸಿದ್ದಾರೆ. ನಂತರ ಕನ್ಹಯ್ಯ ಮತ್ತು ಇತರ 30 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಕನ್ಹಯ್ಯ ಅವರನ್ನು ಬಿಡುಗಡೆ ಮಾಡಲಾಗಿದೆ.

“ನಮಗೆ ಲಾಠಿ ಅಥವಾ ನೀರಿನ ಫಿರಂಗಿ ಬೇಡ. ನಮ್ಮ ನಲ್ಲಿಗಳಿಗೆ ನೀರು ಬರಬೇಕು, ಅಷ್ಟೇ ನಮಗೆ ಬೇಕು. ನಮ್ಮ ಮೇಲೆ ನೀರು ಸಿಂಪಡಿಸುವುದು ಬೇಡ, ಬದಲಾಗಿ ‘ನಲ ಜಲ ಯೋಜನೆ’ (ಕುಡಿಯುವ ನೀರಿನ ಯೋಜನೆ) ಅಡಿಯಲ್ಲಿ ನೀರು ಸರಿಯಾಗಿ ನೀಡಿ. ಸರ್ಕಾರ ನಲ್ಲಿಗಳಲ್ಲಿ ನೀರು ಒದಗಿಸದೆ ಅದನ್ನು ವಿದ್ಯಾರ್ಥಿಗಳು ಮತ್ತು ಯುವಕರ ಮೇಲೆ ಜಲಫಿರಂಗಿ ಪ್ರಯೋಗಿಸಲು ಬಳಸುತ್ತಿದೆ” ಎಂದು ಬಂಧನಕ್ಕೊಳಗಾಗುವಾಗ ಕನ್ಹಯ್ಯ ಹೇಳಿದರು.

ಮಾರ್ಚ್ 16 ರಂದು ಚಂಪಾರಣ್‌ನ ಭಿತಿಹರ್ವ ಆಶ್ರಮದಲ್ಲಿ ‘ಪಳಯನ್ ರೋಕೋ, ನೌಕ್ರಿ ದೋ’ (ವಲಸೆ ನಿಲ್ಲಿಸಿ, ಉದ್ಯೋಗ ನೀಡಿ) ಪಾದಯಾತ್ರೆಯನ್ನು ಪ್ರಾರಂಭಿಸಿದ ಜೆಎನ್‌ಯುಎಸ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ)ದ ಮಾಜಿ ಅಧ್ಯಕ್ಷ ಕನ್ಹಯ್ಯ, ಇಂದು ಅನೇಕ ಜಿಲ್ಲೆಗಳು ಮತ್ತು ನೂರಾರು ಕಿಲೋಮೀಟರ್‌ಗಳನ್ನು ಕ್ರಮಿಸಿ ತಮ್ಮ ಮೆರವಣಿಗೆಯನ್ನು ಕೊನೆಗೊಳಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಏಪ್ರಿಲ್ 7ರಂದು ಕನ್ಹಯ್ಯ ಅವರೊಂದಿಗೆ ಸೇರಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...