ಚಂದ್ರಯಾನ 3 ಉಡಾವಣೆ| ಎಲ್ಲ ಮಾಜಿ ಪ್ರಧಾನಿಗಳ ದೂರದೃಷ್ಟಿಗೆ ಸಾಕ್ಷಿ: ಖರ್ಗೆ ಶ್ಲಾಘನೆ

Date:

ಚಂದ್ರಯಾನ 3 ಉಡಾವಣೆಗೆ ಇಸ್ರೋವನ್ನು ಶ್ಲಾಘಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್‌ ಸಿಂಗ್‌ ಸೇರಿದಂತೆ ಎಲ್ಲ ಮಾಜಿ ಪ್ರಧಾನಿಗಳ ದೂರದೃಷ್ಟಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಚಂದ್ರಯಾನ 3 ಉಡಾವಣೆಯು ನಮ್ಮ ವಿಜ್ಞಾನಿಗಳು, ಎಂಜಿನಿಯರ್‌ಗಳು ಮತ್ತು ಚಂದ್ರಯಾನ 3 ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರ ಪ್ರಚಂಡ ಜಾಣ್ಮೆ, ಸಮರ್ಪಣೆ, ಕೌಶಲ್ಯ ಮತ್ತು ಕಠಿಣ ಪರಿಶ್ರಮಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.  

“ಈ ಅಭೂತಪೂರ್ವ ಯೋಜನೆಯು ಜನರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಂಖ್ಯಾತ ವಿಜ್ಞಾನಿಗಳ ಪರಿಶ್ರಮವಾಗಿದೆ. ಇದು ಭಾರತೀಯರಿಗೆ ಹೆಮ್ಮೆಯ ವಿಷಯ. ಭಾರತದ ಚಂದ್ರಯಾನ ಯೋಜನೆಯು 2008 ರಲ್ಲಿ ಚಂದ್ರಯಾನ 1 ರೊಂದಿಗೆ ಪ್ರಾರಂಭವಾಗಿ ಚಂದ್ರನ ಮೇಲೆ ನೀರಿನ ಅಣುಗಳ ಉಪಸ್ಥಿತಿಯನ್ನು ದೃಢಪಡಿಸಿತು. ಇದು ನಮ್ಮ ದೇಶದ ಐತಿಹಾಸಿಕ ಸಾಧನೆ!” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಂದ್ರಯಾನ 2 ರಿಮೋಟ್ ಸೆನ್ಸಿಂಗ್ ಮೂಲಕ ಮೊದಲ ಬಾರಿಗೆ ಕ್ರೋಮಿಯಂ, ಮ್ಯಾಂಗನೀಸ್ ಮತ್ತು ಸೋಡಿಯಂ ಇರುವಿಕೆಯನ್ನು ಪತ್ತೆ ಮಾಡಿದೆ. ನಮ್ಮ ವಿಜ್ಞಾನಿಗಳ ಪರಿಶ್ರಮ ವ್ಯರ್ಥವಾಗಲಿಲ್ಲ. ಇಂದು ಚಂದ್ರಯಾನದ ಯಶಸ್ವಿ ಉಡಾವಣೆಯು ಪಂಡಿತ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ, ಪಿ ವಿ ನರಸಿಂಹರಾವ್, ರಾಜೀವ್ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ ಮನಮೋಹನ್ ಸಿಂಗ್ ಸೇರಿದಂತೆ ನಮ್ಮ ಹಿಂದಿನ ಎಲ್ಲ ಪ್ರಧಾನ ಮಂತ್ರಿಗಳ ದೂರದೃಷ್ಟಿ, ಸಂಕಲ್ಪ ಮತ್ತು ಸಾಧನೆಗೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದ ಐತಿಹಾಸಿಕ ‘ಚಂದ್ರಯಾನ 3’ ಯಶಸ್ವಿ ಉಡಾವಣೆ; 20 ವರ್ಷದ ಹಿಂದೆ ಆರಂಭವಾದ ಯೋಜನೆ ಸಾಗಿದ್ದು ಹೇಗೆ?

“ಇತಿಹಾಸದ ಸುದೀರ್ಘ ಹಾದಿಯಲ್ಲಿ ವಿಜ್ಞಾನದ ಸಾಧನೆಗಳು ಎಲ್ಲಕ್ಕಿಂತ ಹೆಚ್ಚಾಗಿ ಮಾನವ ಜೀವನವನ್ನು ಕ್ರಾಂತಿಗೊಳಿಸಿವೆ ಮತ್ತು ಮತ್ತಷ್ಟು ಮತ್ತು ಹೆಚ್ಚು ಆಮೂಲಾಗ್ರ ಬದಲಾವಣೆಯ ಬಾಗಿಲುಗಳು ಮತ್ತು ಮಾರ್ಗಗಳನ್ನು ತೆರೆದಿವೆ ಎಂದು ನನಗೆ ಮನವರಿಕೆಯಾಗಿದೆ” ಎಂದು ಪಂಡಿತ್ ನೆಹರು ಹೇಳಿರುವ ಮಾತನ್ನು ಖರ್ಗೆ ಉಲ್ಲೇಖಿಸಿದ್ದಾರೆ.

ನೂರಾರು ಕೋಟಿ ಜನರು ನಮ್ಮನ್ನು ನೋಡುತ್ತಿದ್ದಾರೆ

ಇಂದು ನಮ್ಮ ಸಾಧನೆಯನ್ನು ವಿಶ್ವದ ನೂರಾರು ಕೋಟಿಗೂ ಹೆಚ್ಚು ಜನರು ನೋಡುತ್ತಿದ್ದಾರೆ. ನಾವು ಪ್ರಕಾಶಿಸುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

“1962 ರಲ್ಲಿ ಭಾರತದ ಬಾಹ್ಯಾಕಾಶ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ವೈಜ್ಞಾನಿಕ ಸಮುದಾಯದ ದಶಕಗಳ ಶ್ರಮದ ಫಲವಾಗಿದೆ. ನಂತರದಲ್ಲಿ 1969 ರಲ್ಲಿ ಇಸ್ರೋ ರಚನೆಯಾಯಿತು. ಚಂದ್ರಯಾನ 3 ನಿಜವಾಗಿಯೂ ನಂಬಲಾಗದ ಸಾಧನೆ. ಇಸ್ರೋದಲ್ಲಿನ ಇಡೀ ತಂಡಕ್ಕೆ ಅಭಿನಂದನೆಗಳು” ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...