ಪಿಣರಾಯಿ ವಿಜಯನ್ ಮತ್ತೆ ಕೇರಳ ಸಿಎಂ ಆಗುವುದು ಖಚಿತ: ಹಿರಿಯ ಕಾಂಗ್ರೆಸ್ ನಾಯಕ ಅಯ್ಯರ್!

Date:

ಕೇರಳದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ಮತ್ತೆ ಎಲ್‌ಡಿಎಫ್ ಅಧಿಕಾರ ಪಡೆಯಬಹುದೇ ಅಥವಾ ಯುಡಿಎಫ್ ಗೆಲ್ಲಬಹುದೇ ಎಂಬ ಕಾತುರವಿದೆ. ಸಿಎಂ ಗದ್ದುಗೆಯನ್ನು ಎಲ್‌ಡಿಎಫ್‌ನಿಂದ ಕಸಿದುಕೊಳ್ಳುವ ವಿಶ್ವಾಸವನ್ನು ಯುಡಿಎಫ್‌ ಹೊಂದಿದೆ. ಈ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ನೀಡಿರುವ ಹೇಳಿಕೆಯು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕೇರಳ ರಾಜ್ಯ ಯೋಜನಾ ಮಂಡಳಿಯು ಭಾನುವಾರ ತಿರುವನಂತಪುರದಲ್ಲಿ ಆಯೋಜಿಸಿದ್ದ ‘ವಿಷನ್ 2031: ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಅಂತಾರಾಷ್ಟ್ರೀಯ ಸಮ್ಮೇಳನ’ದಲ್ಲಿ ಮಾತನಾಡಿದ ಅಯ್ಯರ್, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಹಾಡಿಹೊಗಳಿದ್ದಾರೆ. “ಪಿಣರಾಯಿ ವಿಜಯನ್ ಮತ್ತೆ ಕೇರಳ ಮುಖ್ಯಮಂತ್ರಿಯಾಗುವುದು ಖಚಿತ” ಎಂದೂ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕೇರಳದ ಅಸಲಿ ಕಥೆಯೇ ಬೇರೆ : ಪಿಣರಾಯಿ ವಿಜಯನ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಚಾಯತ್ ರಾಜ್‌ನಲ್ಲಿ ಕೇರಳ ಭಾರತದ ನಾಯಕ ಎಂದಿರುವ ಅಯ್ಯರ್, ಈ ಕಾರ್ಯಕ್ರಮದಲ್ಲಿ ಇತರೆ ಕಾಂಗ್ರೆಸ್ ನಾಯಕರ ಅನುಪಸ್ಥಿತಿಯನ್ನು ಟೀಕಿಸಿದ್ದಾರೆ. “ದೇಶದಲ್ಲಿ ಪಂಚಾಯತಿ ರಾಜ್‌ಗೆ ಯಾವುದೇ ಪ್ರತಿಪಾದಕರು ಉಳಿದಿಲ್ಲ ಎಂದು ನನಗೆ ಭಯವಾಗಿದೆ. ಆದ್ದರಿಂದ, ಪಿಣರಾಯಿ ವಿಜಯನ್, ನಾನು ನಿಮ್ಮ ಪಾದಗಳಿಗೆ ಬಿದ್ದು ಕೇಳುತ್ತೇನೆ. ದಯವಿಟ್ಟು, ಸರ್, ಕಾಂಗ್ರೆಸ್ ಬೀಳಿಸಿದ ಲಾಠಿಯನ್ನು ಎತ್ತಿಕೊಳ್ಳಿ” ಎಂದು ಕಾಂಗ್ರೆಸ್‌ ಅನ್ನು ಅಯ್ಯರ್ ಟೀಕಿಸಿದ್ದಾರೆ.

“ಪಂಚಾಯತಿ ರಾಜ್‌ನಲ್ಲಿ ಕೇರಳ ಭಾರತದ ನಾಯಕ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ನಿರೀಕ್ಷೆಗಳನ್ನು ನೋಡಿದಾಗ ರಾಜ್ಯವು ಬೇರೆ ರಾಜ್ಯಗಳಿಗಿಂತ ಹೆಚ್ಚಿನದನ್ನು ಸಾಧಿಸುತ್ತಿದೆ. ಬಡವರು ರಾಷ್ಟ್ರದ ಅಭಿವೃದ್ಧಿಯಲ್ಲಿ ಧ್ವನಿ ಹೊಂದಿರಬೇಕು ಎಂಬ ಮಹಾತ್ಮ ಗಾಂಧೀಜಿಯವರ ನಿರ್ದೇಶನದಲ್ಲಿ ಪ್ರಗತಿ ಸಾಧಿಸಿದ ಏಕೈಕ ರಾಜ್ಯವೆಂದರೆ ಮಾರ್ಕ್ಸ್‌ವಾದಿ-ಲೆನಿನ್‌ವಾದ ಪಕ್ಷಗಳು ಆಳುವ ಕೇರಳ” ಎಂದೂ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕೋಮುವಾದ ಹರಡುವ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಪಿಣರಾಯಿ ವಿಜಯನ್ ಆಕ್ರೋಶ

ಕಾಂಗ್ರೆಸ್ ನಾಯಕರ ಹೇಳಿಕೆ ರಾಜಕೀಯವಾಗಿ ತೀವ್ರ ಚರ್ಚೆಗೆ ಒಳಗಾಗುತ್ತಿದ್ದಂತೆ, “ಕಳೆದ ಕೆಲವು ವರ್ಷಗಳಿಂದ ಅಯ್ಯರ್ ಅವರಿಗೆ ಕಾಂಗ್ರೆಸ್ ಜತೆ ಯಾವುದೇ ಸಂಬಂಧ ಹೊಂದಿಲ್ಲ” ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಅಯ್ಯರ್ ಅವರು ಸಂಪೂರ್ಣವಾಗಿ ತಮ್ಮ ವೈಯಕ್ತಿಕ ವಿಚಾರವನ್ನು ಮಾತನಾಡುವುದು, ಬರೆಯುವುದು. ಅವರು ಈಗ ಕಾಂಗ್ರೆಸ್‌ನೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ” ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ, “ಇದು ಚುನಾವಣಾ ಪೂರ್ವ ಪ್ರಚಾರ ಕಾರ್ಯಕ್ರಮ. ಅಯ್ಯರ್ ಮತ್ತು ಅಮರ್ತ್ಯ ಸೇನ್ ಅವರಂತಹ ಇತರ ಗಣ್ಯ ವ್ಯಕ್ತಿಗಳನ್ನು ಈ ಕಾರ್ಯಕ್ರಮದಿಂದ ದೂರವಿರಬೇಕು” ಎಂದು ಒತ್ತಾಯಿಸಿದ್ದಾರೆ.

ಕೇರಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ವಿಜಯನ್ ಅವರನ್ನು ಕಾಂಗ್ರೆಸ್ ನಾಯಕರೇ ಹೊಗಳಿರುವುದು, ವಿಜಯನ್ ಅಧಿಕಾರವನ್ನು ಉಳಿಸಿಕೊಳ್ಳುತ್ತಾರೆ ಎಂದು ಹೇಳಿರುವುದು ಕಾಂಗ್ರೆಸ್‌ಗೆ ಮುಜುಗರ ಉಂಟುಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...