ಚುನಾವಣೆ 2023 | ಕಾಂಗ್ರೆಸ್ ನಾಯಕ ಮನೋಹರ್ ತಹಶೀಲ್ದಾರ್‌ ಏ. 7ಕ್ಕೆ ಜೆಡಿಎಸ್‌ ಸೇರ್ಪಡೆ

Date:

  • ಕಾಂಗ್ರೆಸ್ ಪಕ್ಷ ದ್ರೋಹ ಬಗೆದಿದೆ ಎಂದ ಮನೋಹರ್
  • ಪಂಚರತ್ನ ರಥಯಾತ್ರೆ ವೇಳೆ ಜೆಡಿಎಸ್‌ ಸೇರ್ಪಡೆ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪಕ್ಷಾಂತರ ಪರ್ವ ಜೋರಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರುವುದಾಗಿ ಘೋಷಿಸಿದ್ದಾರೆ.

ಹಾನಗಲ್‌ನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಹಿರಿಯ ನಾಯಕ ಮನೋಹರ್ ತಹಶೀಲ್ದಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ಏಪ್ರಿಲ್‌ 7ರಂದು ಜೆಡಿಎಸ್‌ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಯ ವೇಳೆ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಕಾಂಗ್ರೆಸ್ ತೊರೆಯುತ್ತಿರುವ ಕುರಿತು ಮಾತನಾಡಿದ ಅವರು, “ಕಾಂಗ್ರೆಸ್‌ ನನಗೆ ದ್ರೋಹ ಬಗೆಗಿದೆ. ಆದ್ದರಿಂದಲೇ ನಾನು ಈ ನಿರ್ಧಾರಕ್ಕೆ ಬಂದಿರುವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐದು ದಶಕಗಳ ಕಾಲ ನಾನು ಕಾಂಗ್ರೆಸ್‌ನಲ್ಲಿದ್ದೆ. ಶಾಸಕನಾಗಿ, ಸಚಿವನಾಗಿ ಮತ್ತು ವಿಧಾನಸಭೆಯ ಉಪಸಭಾಪತಿಯಾಗಿ ಕೆಲಸ ಮಾಡಿದ್ದೇನೆ. ಆದರೂ ಪಕ್ಷ ನನಗೆ ದ್ರೋಹ ಬಗೆದಿದೆ. ಮತ್ತೆಂದೂ ನಾನು ಕಾಂಗ್ರೆಸ್ ಕಡೆ ತಲೆ ಹಾಕುವುದಿಲ್ಲ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಹಿಟ್ಲರ್‌, ಮುಸಲೋನಿ ನಾಯಕತ್ವ ಒಪ್ಪಿಕೊಂಡವರು ದೇಶ ನಡೆಸುತ್ತಿದ್ದಾರೆ: ಸಿದ್ದರಾಮಯ್ಯ

“ಈ ಬಾರಿ ನನಗೆ ಹಾನಗಲ್‌ನಿಂದ ಟಿಕೆಟ್ ನೀಡುವಂತೆ ದೆಹಲಿಯವರೆಗೂ ಹೋಗಿ ಮನವಿ ಮಾಡಿದೆ. ಆದರೆ, ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಸೌಜನ್ಯಕ್ಕಾದರೂ ಕಾಂಗ್ರೆಸ್ ನಾಯಕರು ನನ್ನ ಸಂಪರ್ಕ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷ ನನಗೆ ತಾಯಿಯಾಗಿತ್ತು, ಪಕ್ಷವನ್ನು ತಾಯಿಯಂತೆ ನೋಡಿಕೊಂಡ ನನಗೆ ತಾಯಿಯ ಹಾಲು ವಿಷವಾಗಿ ಪರಿಣಮಿಸಿದೆ” ಎಂದಿದ್ದಾರೆ.

ಹಾನಗಲ್ ಕಾಂಗ್ರೆಸ್​​ ಟಿಕೆಟ್ ಆಕಾಂಕ್ಷಿಯಾಗಿದ್ದ ಮನೋಹರ್​​ ತಹಶೀಲ್ದಾರ್​​ ದೆಹಲಿ ನಾಯಕರನ್ನು ಭೇಟಿಯಾಗಿ ಟಿಕೆಟ್​ಗಾಗಿ ಲಾಭಿ ನಡೆಸಿದ್ದರು.

ಮನೋಹರ್ ತಹಶೀಲ್ದಾರ್ ಅವರು 1978 ರಿಂದ 2013ರವರೆಗಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಾನಗಲ್‌ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದಾರೆ. 1978, 1989, 1999 ಮತ್ತು 2013ರಲ್ಲಿ ಶಾಸಕಾಗಿ ಆಯ್ಕೆಯಾಗಿದ್ದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮನೋಹರ್‌ ತಹಶೀಲ್ದಾರ್ ಅವರು ಅಬಕಾರಿ ಮತ್ತು ಮುಜರಾಯಿ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇನ್ನೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನ ಅಭ್ಯರ್ಥಿಗಳ ಪೂರ್ಣ ಪ್ರಮಾಣದ ಪಟ್ಟಿ ಬಿಡುಗಡೆಯಾಗಿಲ್ಲ. ಪಟ್ಟಿ ಬಿಡುಗಡೆ ನಂತರ ಮತ್ತಷ್ಟು ಮುಖಂಡರು ತಮ್ಮ ಪಕ್ಷಗಳನ್ನು ತೊರೆಯುವ ಸಾಧ್ಯತೆ ಹೆಚ್ಚಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...