ಬಿಜೆಪಿಗೆ ಕಾಂಗ್ರೆಸ್‌ ಮುಖಂಡರು; ಗುಜರಾತ್ ಬಿಜೆಪಿಯಲ್ಲಿ ಬಂಡಾಯ

Date:

ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಗುಜರಾತ್ ಬಿಜೆಪಿಗೆ ಕಾಂಗ್ರೆಸ್‌ನ ಕೆಲವು ನಾಯಕರು ಸೇರಿದ್ದಾರೆ. ಇದರಿಂದಾಗಿ, ಸ್ಥಳೀಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ಉಲ್ಬಣಗೊಂಡಿವೆ. ಅಂತಹ ಬಂಡಾಯದಿಂದಲೇ ಗುಜರಾತ್‌ನ ಮೂರು ಅವಧಿಯ ಬಿಜೆಪಿ ಶಾಸಕ ಕೇತನ್ ಇನಾಮದಾರ್ ಅವರು ಮಂಗಳವಾರ ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.

ಇನಾಮ್‌ದಾರ್ ಅವರು ತಮ್ಮ ರಾಜೀನಾಮೆ ನಿರ್ಧಾರಕ್ಕೆ “ನಾನು ನನ್ನ ಒಳದನಿ ಏನು ಹೇಳುತ್ತದೋ ಅದನ್ನು ಮಾಡಿದ್ದೇನೆ. ಆತ್ಮಗೌರವಕ್ಕಿಂತ ಯಾವುದೂ ದೊಡ್ಡದಲ್ಲ” ಕಾರಣ ನೀಡಿದ್ದಾರೆ. ಸ್ವಾಭಿಮಾನದ ಬಗ್ಗೆ ಒತ್ತಿ ಹೇಳಿದ್ದಾರೆ. ಅದಾಗ್ಯೂ, ಪಕ್ಷದ ರಾಜ್ಯ ಮುಖ್ಯಸ್ಥರು ಮನವೊಲಿಸಿದ ನಂತರ, ಅವರು ಕೆಲವೇ ಗಂಟೆಗಳಲ್ಲಿ ತಮ್ಮ ರಾಜೀನಾಮೆಯನ್ನು ಹಿಂಪಡೆದ್ದಾರೆ.

ಬಿಜೆಪಿಗೆ ಕಾಂಗ್ರೆಸ್ ನಾಯಕರು ಮತ್ತು ಇತರ ಪಕ್ಷದ ಸದಸ್ಯರು ನಿರಂತರವಾಗಿ ವಲಸೆ ಬರುತ್ತಿದ್ದಾರೆಂದು ಹತಾಶೆಗೊಂಡು ಇನಾಮದಾರ್ ರಾಜೀನಾಮೆ ನೀಡಿದ್ದರು. ಅವರನ್ನು ಭೇಟಿ ಮಾಡಿದ್ದ ವಡೋದರಾ ಜಿಲ್ಲಾ ಉಸ್ತುವಾರಿ ಸಚಿವ ಅವರನ್ನು ಗಾಂಧಿನಗರಕ್ಕೆ ಕರೆದೊಯ್ದರು. ಅಲ್ಲಿ, ಅವರು ರಾಜ್ಯ ಪಕ್ಷದ ಮುಖ್ಯಸ್ಥ ಸಿಆರ್ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ಬಳಿಕ, ರಾಜೀನಾಮೆ ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಸಮಸ್ಯೆ ಮತ್ತು ಕಳವಳವನ್ನು ಸಿಆರ್ ಪಾಟೀಲ್ ಜೊತೆ ಹಂಚಿಕೊಂಡಿದ್ದೇನೆ. ನಾನು ಆತ್ಮಾವಲೋಕನದಲ್ಲಿ ತೊಡಗಿದೆ. ನಾನು ಹೃದಯದಿಂದ ಮಾತನಾಡಿದೆ. ನಿಷ್ಠಾವಂತ ಪಕ್ಷದ ಕಾರ್ಯಕರ್ತರ ಸಮರ್ಪಣೆಯನ್ನು ಗೌರವಿಸುವುದು ಚರ್ಚೆಯ ಮುಖ್ಯ ವಿಷಯವಾಗಿತ್ತು. ಪ್ರತಿಯೊಬ್ಬ ವ್ಯಕ್ತಿಯು ಕೆಲಸ ಮಾಡಲು ತನ್ನದೇ ಆದ ವಿಧಾನವನ್ನು ಹೊಂದಿದ್ದಾನೆ. ಯಾರ ಮೇಲೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ನಾನು ನನ್ನ ರಾಜೀನಾಮೆಯನ್ನು ಹಿಂಪಡೆಯುತ್ತೇನೆ” ಎಂದು ಇನಾಮದಾರ್ ಹೇಳಿದರು.

ಇನಾಮದಾರ್ ಅವರು ರಾಜೀನಾಮೆ ಸಲ್ಲಿಸುವುದು, ಬಳಿಕ ರಾಜೀನಾಮೆಯನ್ನು ಹಿಂಪಡೆಯುವಲ್ಲಿ ತಮ್ಮದೇ ದಾಖಲೆ ಹೊಂದಿದ್ದಾರೆ. 2020ರ ಜನವರಿಯಲ್ಲಿಯೂ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಸ್ಪೀಕರ್ ಅದನ್ನು ಅಂಗೀಕರಿಸಿರಲಿಲ್ಲ.

ಹಿಂದೆ ಸರಿದ ಕಾಂಗ್ರೆಸ್ ಅಭ್ಯರ್ಥಿ 

ಅಹಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೋಹನ್ ಗುಪ್ತಾ ಅವರು ತಮ್ಮ ತಂದೆಯ ಗಂಭೀರ ಅನಾರೋಗ್ಯದ ಕಾರಣ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಗುಪ್ತಾ ಅವರು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾಗಿದ್ದು, ಮಾರ್ಚ್ 12 ರಂದು ಪಕ್ಷವು ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...