ಪ್ರಿಯಾಂಕಾ ಗಾಂಧಿ ಬಗ್ಗೆ ಬಿಜೆಪಿ ನಾಯಕ ಬಿಧುರಿ ಹೇಳಿಕೆ; ದೂರು ದಾಖಲಿಸಿದ ಕಾಂಗ್ರೆಸ್

Date:

ಲಕ್ನೋದಲ್ಲಿ ಕಾರ್ಪೋರೇಟರ್‌ ಸೇರಿದಂತೆ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ನಾಯಕ ರಮೇಶ್ ಬಿಧುರಿ ವಿರುದ್ಧ ದೂರು ದಾಖಲಿಸಿದ್ದಾರೆ.

“ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿ ನಿರ್ಮಿಸಲಾಗುವುದು” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ರಮೇಶ್ ಬಿಧುರಿ ವಿವಾದದಲ್ಲಿ ಸಿಲುಕಿದ್ದಾರೆ. ಅದಾದ ಬಳಿಕ ಮಾಧ್ಯಮಗಳ ಮುಂದೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು ಇನ್ನಷ್ಟು ಟೀಕೆಗೆ ಒಳಗಾಗಿದ್ದಾರೆ.

ಇದನ್ನು ಓದಿದ್ದೀರಾ? ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್‌ನ ಮಾಳವೀಯ ನಗರ ವಾರ್ಡ್ 21 ಅನ್ನು ಪ್ರತಿನಿಧಿಸುವ ಕಾಂಗ್ರೆಸ್ ನಾಯಕಿ ಮಮತಾ ಚೌಧರಿ ಅವರು ಲಿಖಿತ ದೂರು ಸಲ್ಲಿಸಿದ್ದು, ಬಿಧುರಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬಜಾರ್ ಖಾಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ನೀಡಿದ ದೂರು ಪತ್ರದಲ್ಲಿ, “ಬಿಧುರಿ ಹೇಳಿಕೆಯು ಸಾರ್ವಜನಿಕ ವ್ಯಕ್ತಿಯಾಗಿರುವ ಪ್ರಿಯಾಂಕಾ ಗಾಂಧಿಗೆ ಅಗೌರವಿಸಿದಂತೆ ಮಮತ್ತು ಮಾನನಷ್ಟ ಮಾಡಿದಂತಿದೆ. ಮಹಿಳೆಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿರುವ ರಮೇಶ್ ಬಿಧುರಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಔಪಚಾರಿಕ ದೂರಿನಲ್ಲಿ ಬರೆದಿದ್ದಾರೆ.

ಇದನ್ನು ಓದಿದ್ದೀರಾ? ಬಿಧುರಿ ‘ಮಹಿಳಾ ವಿರೋಧಿ’ – ಬಿಜೆಪಿ ನಾಯಕನ ನಿವಾಸದ ಗೇಟ್‌ ಮೇಲೆ ಬರೆದ ಪ್ರತಿಭಟನಾಕಾರರು

ಇನ್ನು ದೆಹಲಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬಿಜೆಪಿ ನಾಯಕ ರಮೇಶ್ ಬಿಧುರಿ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಬಿಧುರಿ ನಿವಾಸದ ಗೇಟ್‌ ಮೇಲೆ ಕಪ್ಪು ಪೇಂಟ್‌ ಬಳಸಿ ‘ಮಹಿಳಾ ವಿರೋಧಿ’ ಎಂದು ಬರೆದಿದ್ದಾರೆ. ಒಂದು ಹೆಣ್ಣಿನ ದೇಹದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಖಂಡನಾರ್ಹ ಎಂದು ಯುವ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...