ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆ.30) ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ” ಎಂದರು.

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಸೇರಿ , ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

ಬಾಕಿ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಲು ರಾಜ್ಯಪಾಲರಿಗೆ ಒತ್ತಾಯ

ಮುಡಾ ಪ್ರಕರಣದಲ್ಲಿ ಸಿಎಂ ಅವರು ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ವಿಜಯೇಂದ್ರ ತಿಳಿಸಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ,ಜನಾರ್ಧನ ರೆಡ್ಡಿ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜುಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ” ಎಂದು ತಿಳಿಸಿದರು.

ಪರಿಸರ ತೀರುವಳಿ ಬಂದ ತಕ್ಷಣ ಮಹಾದಾಯಿಗೆ ಚಾಲನೆ

“ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು” ಎಂದರು.

16ನೇ ಹಣಕಾಸು ಆಯೋಗ ರಾಜ್ಯದ ಅನುದಾನ ಕೊರತೆ ನೀಗಿಸುವ ವಿಶ್ವಾಸ

“ನಿನ್ನೆ 16 ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ತೆರಿಗೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು , 1.66 ರಷ್ಟು ಪ್ರಮಾಣ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರ್ಉ 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16 ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ” ಎಂಬ ವಿಶ್ವಾಸವಿದೆ ಎಂದರು.

ನಟ ದರ್ಶನ್ ಪ್ರಕರಣ: ತಪ್ಪೆಸೆಗಿರುವ ಅಧಿಕಾರಿಗಳ ಅಮಾನತು

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ನಿಟ್ಟಿನಲ್ಲಿ ಕರ್ತವ್ಯ ಲೋಪ ಎಸಗಿದ್ದ 9 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಜೊತೆಗೆ ಉಳಿದ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಕಳಿಸಲಾಗಿದ್ದು, ಇಂತಹ ತಪ್ಪು ನಡೆದ ಜೈಲಿನ ಡಿಜಿಪಿಗೆ ನೋಟಿಸ್‌ ನೀಡಲಾಗಿದೆ” ಎಂದು ಹೇಳಿದರು.

ಮುಡಾದ ಮಾಜಿ ಆಯುಕ್ತರ ಮೇಲೆ ಆರೋಪವಿದ್ದು, ಅವರನ್ನು ಹಾವೇರಿ ವಿವಿಗೆ ಕುಲಸಚಿವರಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...