ʼಸಿಟಿʼ ರವಿಗೂ, ಕಾರು ಅಘಾತಕ್ಕೂ, ʼಓಟಿʼ ಮದ್ಯಕ್ಕೂ ಜನ್ಮಾಂತರದ ಸಂಬಂಧ: ಕಾಂಗ್ರೆಸ್‌ ಲೇವಡಿ

Date:

  • ʼಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆʼ
  • ʼಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂತಾ ರವಿ ಅವರೇ?ʼ

“ಬಿಜೆಪಿಯ ಸಿ ಟಿ ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ ರಾಶಿ, ಜೊತೆಗೊಂದು ಮಾರಕಾಸ್ತ್ರ ಇರುತ್ತದೆ. ಈ ʼಸಿಟಿʼ ರವಿಗೂ, ಕಾರು ಆಘಾತಕ್ಕೂ, ʼಓಟಿʼ ಮದ್ಯಕ್ಕೂ ಏನು ಈ ಜನ್ಮಾಂತರದ ಸಂಬಂಧ!” ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಧರ್ಮ, ಸಂಸ್ಕೃತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆ!” ಎಂದು ಕುಟುಕಿದೆ.

“ ʼಸಿಟಿʼ ರವಿಗೂ ʼಓಟಿʼ ಮದ್ಯಕ್ಕೂ ಯಾವ ಜನ್ಮದ ಮೈತ್ರಿ ಇದೆಯೋ? ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂದಿದ್ದೇ ಸಿ ಟಿ ರವಿ ಅವರೇ? ಹೆಂಡ ಪೂರೈಕೆ ಮಾಡಲೆಂದೇ ವಾರಕ್ಕೊಮ್ಮೆ ಮೋದಿ, ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆಯೇ?” ಎಂದು ಕಿಚಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸಕರಿಗೆ “ಬಾಂಬೆ ಮಿಠಾಯಿ” ಆಮಿಷ ತೋರಿಸಿ ಆಪರೇಷನ್ ಮಾಡುವ ಬಿಜೆಪಿ ಮತದಾರರಿಗೆ ಹೆಂಡ ತೋರಿಸಿ ಮತ ಪಡೆಯಲು ಮುಂದಾಗಿದೆ. ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸಂಬಂಧಿಸಿದ ಕಾರಿನಲ್ಲಿ “ಓಟಿ ಮದ್ಯ” ಹಾಗೂ ಲಾಂಗ್ ಪತ್ತೆಯಾಗಿದೆ. ಹೆಂಡ ಕುಡಿಸಿ, ಬೆದರಿಸಿ ಮತ ಪಡೆಯುವ ಜವಾಬ್ದಾರಿಯನ್ನು ರೌಡಿ ಮೋರ್ಚಾಗೆ ವಹಿಸಲಾಗಿದೆಯೇ” ಎಂದು ಬಿಜೆಪಿಯನ್ನು ಹಿಯಾಳಿಸಿದೆ.

ಚಿಕ್ಕಮಗಳೂರು ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ ಟಿ ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ. ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...