ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ, ಕಮಿಷನ್ ಕೈಂಕರ್ಯವೇ ರಾಜಧರ್ಮ: ಜೆಡಿಎಸ್ ಟೀಕೆ

Date:

ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದರೆ, ಜೆಡಿಎಸ್ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿದೆ.

ಮಂಗಳವಾರ(ಅ.17) ಸುದೀರ್ಘವಾದ ಟ್ವೀಟ್ ಮಾಡಿರುವ ಜೆಡಿಎಸ್ ಐಟಿ ಸೆಲ್, ‘ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ, ಕಮಿಷನ್ ಕೈಂಕರ್ಯವೇ ರಾಜಧರ್ಮ’ ಎಂದು ಟೀಕಿಸಿದೆ.

‘ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ. ಲೂಟಿ, ದಂಧೆ, ಅಕ್ರಮವೇ ಅದರ ಗ್ಯಾರಂಟಿ. ಅನ್ಯರಾಜ್ಯಗಳ ಚುನಾವಣೆ ಇವರಿಗೆ ಚಿನ್ನದ ಗಣಿ. ಹೈಕಮಾಂಡ್ ಆಸರೆಯೇ ಅಕ್ಷಯ ಪಾತ್ರೆ. ಇಂಥವರಿಗೆ ಕುಮಾರಸ್ವಾಮಿಯವರ ಕೂಗು ಕೇಳುವುದೇ? ಇಲಾಖೆಗೊಂದು ಹಿಟಾಚಿ ಇಟ್ಟುಕೊಂಡು 24X7 ಬಾಚುತ್ತಿದ್ದಾರೆ’ ಎಂದು ಜೆಡಿಎಸ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ ಕೆ ಶಿವಕುಮಾರ್ ವಿರುದ್ಧವೂ ಉರಿದು ಬಿದ್ದಿರುವ ಜೆಡಿಎಸ್, ‘ಅವರು ರಾಜ್ಯಕ್ಕೆ ಉಪ ಮುಖ್ಯಮಂತ್ರಿ. ಅವರನ್ನು ಮೂರ್ಖ ಶಿಖಾಮಣಿ ಎನ್ನುವುದು ತರವಲ್ಲ. ಅಸಲಿಗೆ, ಹಾಗೆಂದು ಹೇಳಲು ನಮಗೂ ಇಷ್ಟವಿಲ್ಲ ಬಿಡಿ. ಲೂಟಿಯನ್ನೇ ನಿತ್ಯಕಾಯಕ, ದಂಧೆಯನ್ನೇ ದಿನವಹಿ ಧನಾರ್ಜನೆಗೆ ರಹದಾರಿ ಮಾಡಿಕೊಂಡಿರುವ, ಕಂಡ ಕಂಡವರ ಜಮೀನುಗಳಿಗೆ ಬೇಲಿ ಬಿಗಿದು ಅವರ ರಕ್ತ ಹೀರುತ್ತಿರುವ ವ್ಯಕ್ತಿ ರಾಜ್ಯಕ್ಕೆ ಉಪ ಮುಖ್ಯಮಂತ್ರಿ. ಇದಲ್ಲವೇ ಕನ್ನಡಿಗರ ದೌರ್ಭಾಗ್ಯ’ ಎಂದಿದೆ.

‘ಅವರ ‘ಅಂತ್ಯವಿಲ್ಲದ ಹೈಕಮಾಂಡ್ ಕೃಪಾಪೋಷಿತ ಅಕ್ರಮ’ಗಳಿಗೆ ಕೊನೆ ಎಂಬುದಿಲ್ಲವೇ? ಎಂದು ಜನ ಕೇಳುತ್ತಿದ್ದಾರೆ. ಕೊನೆ ಇದೆ, ಇದ್ದೇ ಇರುತ್ತದೆ.. ಕಾಯಬೇಕಷ್ಟೇ. ವಾಕ್ಯ ಎಂದ ಮೇಲೆ ಫುಲ್ ಸ್ಟಾಪ್ ಇರಲೇಬೇಕು.’ ಎಂದು ತಿಳಿಸಿದೆ.

‘ಸೂರ್ಯ ಪಶ್ಚಿಮಕ್ಕೆ ವಾಲಿದೊಡನೆ ಕಂಡವರ ಪಕ್ಷಗಳವರ ಮನೆ ಬಾಗಿಲ ಮುಂದೆ ಪರ್ಸಂಟೇಜ್ ಪಟಾಲಂ ಪ್ರತ್ಯಕ್ಷ. ಇಂಥಾ ಕಲುಷಿತ ರಾಜಕಾರಣ ಶೋಭೆಯೇ? ನುಡಿದಂತೆ ನಡೆಯುತ್ತೇವೆ ಎಂದರೆ ಇದೇನಾ? ಜನರ ದುಡ್ಡು, ಇವರದ್ದು ಜಾತ್ರೆ. ಇದೇ ಇವತ್ತಿನ ಕರ್ನಾಟಕದ ಚಿತ್ರಣ. ರಾಜ್ಯದ ಜನರಿಗೆ ಇವರ ಭಂಡಾರವೆಲ್ಲ ಗೊತ್ತಾಗಿದೆ. ಆ ಭಂಡಾರ ಬಿಚ್ಚಿಕೊಂಡ ಕೂಡಲೇ ಬಾಲಸುಟ್ಟ ಬೆಕ್ಕಿನಂತೆ ವಿಲವಿಲನೆ ಒದ್ದಾಡಿದರೆ ಹೇಗೆ? ಅವರ ಫಸಲು, ಅವರವರ ಫಲ’ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮುಗಿಬಿದ್ದಿದೆ.

‘ಕರ್ನಾಟಕವನ್ನು ಹೈಕಮಾಂಡ್‌ಗೆ ಒತ್ತೆ ಇಟ್ಟ ಭೂಪತಿ, ಆಧುನಿಕ ಈಸ್ಟ್ ಇಂಡಿಯಾ ಕಂಪನಿಗಳ ಪೊಲಿಟಿಕಲ್ ಏಜೆಂಟ್, ಕರುನಾಡಿನ ಕರೋಡ್ ಪತಿ, ಬದುಕೆಲ್ಲ ಬ್ರೋಕರೇಜ್ ಮಾಡಿಕೊಂಡೇ ಕೊಳ್ಳೆ ಹೊಡೆದ ವ್ಯಕ್ತಿ, ಈಗ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದೇ? ಅರೆರೆ.. ಇವರ SST, YST ಅಬ್ಬರ ಕಂಡು GSTಯೇ ಬೆಚ್ಚಿದೆ. ಇದೇ ನೋಡಿ ಕರ್ನಾಟಕದ ಮಾದರಿ’ ಎಂದು ತಿಳಿಸಿದೆ.

ಕಾಂಗ್ರೆಸ್ ಸ್ವತಃ ತಾನೇ ಕೊಳೆತು ನಾರುತ್ತಿದೆ. ಆದರೆ, ಪಕ್ಕದ ಮನೆ ಕಾಂಪೌಡಿನ ಮೇಲೆ ಮರದೆಲೆ ಬಿದ್ದಿದೆ ಎಂದು ಅಂಗೈ ಪರಚಿಕೊಳ್ಳುತ್ತಿದೆ. ಪರಚಿಕೊಳ್ಳುವುದರ ಜತೆಗೆ, ಕರ್ನಾಟಕವನ್ನೇ ಪಾಪರ್ ಮಾಡುವುದೇ ಪರ್ಸಂಟೇಜ್ ಪಟಾಲಂ ಹಾಕಿಕೊಂಡಿರುವ ಏಕೈಕ ಗುರಿ. ಅದರ ಪಾಲಿಗೆ ಹೈಕಮಾಂಡ್ ಸೇವೆಯೇ ಆನಂದದಾಯಕ ಸೇವೆ’ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...