ದೇಶದ ಹಿತರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಸದಾ ಸೇನೆ ಬೆನ್ನಿಗೆ ನಿಲ್ಲಲಿದೆ: ಡಿಸಿಎಂ ಡಿ ಕೆ ಶಿವಕುಮಾರ್

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ದೇಶದ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ನವದೆಹಲಿಯಲ್ಲಿ ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ” ಎಂದು ತಿಳಿಸಿದರು.

“ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಷನ್ ಸಿಂಧೂರ ಉತ್ತಮ ಪ್ರತ್ಯುತ್ತರವಾಗಿದೆ. ಪಹಲ್ಗಾಮ್‌ ದಾಳಿಯಲ್ಲಿ ನಮ್ಮ ರಾಜ್ಯ ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಮೃತರಾಗಿದ್ದರು. ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು. ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಹಲ್ಗಾಮ್ ದಾಳಿಯಲ್ಲಿ ಮೃತರ ಕುಟುಂಬದವರು ಈ ಆಪರೇಷನ್ ನಿಂದ ನೆಮ್ಮದಿ ಪಡೆಯುವರೇ?, ವಿರೋಧ ಪಕ್ಷ ಕೂಡ ಸರ್ಕಾರದ ಬೆನ್ನಿಗೆ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಹೌದು, ನಾವು ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ನಿಂತಿದ್ದೇವೆ. ಬೆಲೆ ಏರಿಕೆ ವಿಚಾರವಾಗಿ ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದನ್ನು ನಾವು ರದ್ದುಗೊಳಿಸಿದ್ದೇವೆ. ಈ ಸಂದರ್ಭದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಹೀಗಾಗಿ ಈ ಪ್ರತಿಭಟನಾ ಸಮಾವೇಶವನ್ನು ಮುಂದೂಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...