ತೆಲಂಗಾಣದಲ್ಲೂ ‘ಗ್ಯಾರಂಟಿ’ಯ ಭರವಸೆ ನೀಡಿದ ಕಾಂಗ್ರೆಸ್; ಆದರೆ ಐದಲ್ಲ, ಆರು!

Date:

  • ಕರ್ನಾಟಕದ ಮಾದರಿಯನ್ನೇ ತೆಲಂಗಾಣದಲ್ಲೂ ಘೋಷಿಸಿದ ಕಾಂಗ್ರೆಸ್
  • ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರದ ನನ್ನ ಕನಸು ಎಂದ ಸೋನಿಯಾ ಗಾಂಧಿ

ಕರ್ನಾಟಕದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ಐದು ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್, ತೆಲಂಗಾಣದಲ್ಲೂ ಅದೇ ಮಾದರಿಯನ್ನು ಅನುಸರಿಸಿದೆ.

ಪಂಚ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದ್ದ ಕಾಂಗ್ರೆಸ್, ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಕೆ ಚಂದ್ರಶೇಖರ್ ರಾವ್ ಪಕ್ಷಕ್ಕೆ ಠಕ್ಕರ್ ನೀಡಲು, ‘ಆರು ಗ್ಯಾರಂಟಿ’ ಅಸ್ತ್ರ ಪ್ರಯೋಗಿಸಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 6 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡಿದ್ದು, ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ತುಕ್ಕುಗುಡದಲ್ಲಿ ನಡೆದ ಕಾಂಗ್ರೆಸ್​ ರ‍್ಯಾಲಿಯಲ್ಲಿ ಮೊದಲ ಗ್ಯಾರಂಟಿ ‘ಮಹಾಲಕ್ಷ್ಮೀ’ ಯೋಜನೆಯನ್ನು ಕಾಂಗ್ರೆಸ್​ ಮುಖಸ್ಥೆ ಸೋನಿಯಾ ಗಾಂಧಿ ಅಧಿಕೃತವಾಗಿ ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮಹಾಲಕ್ಷ್ಮೀ’ ಯೋಜನೆಯಡಿ ತೆಲಂಗಾಣದಲ್ಲಿ ಮಹಿಳೆಯರಿಗೆ ಮಾಸಿಕ 2,500 ಹಣ ನೀಡುವ ಯೋಜನೆಯಾಗಿದ್ದು, ಪ್ರತಿ ಸಿಲಿಂಡರ್‌ಗೆ 500 ರೂಪಾಯಿ ಸಬ್ಸಿಡಿ ಮತ್ತು ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯದೊಳಗಡೆ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ್ದಾರೆ.

2ನೇ ಗ್ಯಾರಂಟಿಯಾಗಿ ‘ರೈತ ಭರೋಸಾ’ ಯೋಜನೆಯಡಿ ಆರ್ಥಿಕ ಸಹಾಯ ನೀಡಲು ಕಾಂಗ್ರೆಸ್ ಮುಂದಾಗಿದೆ. ಅನ್ನದಾತರಿಗೆ ಪ್ರತಿ ವರ್ಷ 15 ಸಾವಿರ ರೂಪಾಯಿ ನೀಡುವ ಯೋಜನೆ ಇದಾಗಿದೆ. ರೈತ ಕೂಲಿ ಕಾರ್ಮಿಕರಿಗೆ ಪ್ರತಿ ವರ್ಷ 12 ಸಾವಿರ ಆರ್ಥಿಕ ಸಹಾಯ ಒದಗಿಸಲಾಗುತ್ತಿದೆ. ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 500 ರೂಪಾಯಿ, ಮಾಸಿಕ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ಯೋಜನೆ ಕೂಡ ಘೋಷಣೆ ಮಾಡಲಾಗಿದೆ.

‘ಇಂದಿರಮ್ಮ ಗೃಹ ನಿರ್ಮಾಣ’ ಯೋಜನೆ ಘೋಷಿಸಿರುವ ಕಾಂಗ್ರೆಸ್‌, ಮನೆ ಇಲ್ಲದವರಿಗೆ ನಿವೇಶನ ಖರೀದಿಸಲು 5 ಲಕ್ಷ ರೂ. ನೀಡುವ ಭರವಸೆ ನೀಡಿದ್ದಾರೆ. ತೆಲಂಗಾಣ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಹೋರಾಟ ಮಾಡಿದವರಿಗೆ ಉಚಿತ ನಿವೇಶನ ನೀಡಲು ಇದೇ ವೇಳೆ ಕಾಂಗ್ರೆಸ್​ ಮುಂದಾಗಿದೆ.

ಪ್ರಮುಖ 6 ಗ್ಯಾರಂಟಿ ಯೋಜನೆಗಳ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್, ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಗ್ಯಾರಂಟಿ ಯೋಜನೆ ಅನುಷ್ಠಾನ ಭರವಸೆ ನೀಡಿದೆ. ಮಹಾಲಕ್ಷ್ಮೀ, ರೈತ ಭರೋಸಾ, ಇಂದಿರಮ್ಮ ಗೃಹ ನಿರ್ಮಾಣ, ವಿದ್ಯಾ ಭರೋಸಾ, ಯುವ ವಿಕಾಸ, ಚೆಯುತ ಎಂಬುದು ಆರು ಪ್ರಮುಖ ಗ್ಯಾರಂಟಿಗಳಾಗಿದೆ.

ಘೋಷಣೆ ಬಳಿಕ ಮಾತನಾಡಿದ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ತೆಲಂಗಾಣ ಜನರ ಆಕಾಂಕ್ಷೆಗಳನ್ನು ಈಡೇರಿಸಲು ನಾವು ಆರು ಗ್ಯಾರಂಟಿಗಳನ್ನು ಘೋಷಿಸಿದ್ದು, ಅವುಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ನನ್ನ ಕನಸು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...