ಕಾಂಗ್ರೆಸ್‌ ಎರಡನೇ ಪಟ್ಟಿ ಅಂತಿಮಗೊಳಿಸಲು ಸಿದ್ದತೆ; ಇಂದು ಸ್ಕ್ರೀನಿಂಗ್‌ ಕಮಿಟಿ ಸಭೆ

Date:

  • ಬೆಂಗಳೂರಿನ ಹೊರವಲಯದಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆ
  • ಬಾಕಿ ಇರುವ 100 ಕ್ಷೇತ್ರಗಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಇಂದು(ಮಾ. 27) ನಡೆಯಲಿದೆ. ಬೆಂಗಳೂರು ಹೊರ ವಲಯದ ಖಾಸಗಿ ರೆಸಾರ್ಟ್‌ನಲ್ಲಿ ಈ ಸಭೆ ನಡೆಯಲಿದೆ.

ಸ್ಕ್ರೀನಿಂಗ್ ಕಮಿಟಿ ಸದಸ್ಯ ಮೋಹನ್ ಪ್ರಕಾಶ್ ನೇತೃತ್ವದ ಸಭೆಯಲ್ಲಿ, ಬಾಕಿ ಉಳಿದಿರುವ 100 ಕ್ಷೇತ್ರಗಳಿಗೆ ಉಮೇದುವಾರರನ್ನು ಅಂತಿಮಗೊಳಿಸಲಾಗುವುದೆಂದು ಮೂಲಗಳು ತಿಳಿಸಿವೆ.

ಮೊದಲ ಪಟ್ಟಿಯಲ್ಲಿ ಘೋಷಣೆ ಆಗದೆ ಉಳಿದಿರುವ ಆರು ಮಂದಿ ಹಾಲಿ ಶಾಸಕರ ಕ್ಷೇತ್ರಗಳನ್ನೂ ಒಳಗೊಂಡಂತೆ ಇಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳನ್ನು ಹೊಂದಿರುವ ಸ್ಪರ್ಧಾಕಣದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಪಟ್ಟಿಯಲ್ಲಿ 60 ಕ್ಷೇತ್ರಗಳ ಸ್ಪರ್ಧಾಕ್ಷೇತ್ರಗಳು ಅಂತಿಮವಾಗಿದ್ದು. ಹೊಸದಾಗಿ ಅವುಗಳಿಗೆ ಬಂದಿರುವ ಅಹವಾಲುಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉಳಿದಂತೆ ಬಿಜೆಪಿ, ಜೆಡಿಎಸ್‌ ಪಟ್ಟಿಗೆ ಕಾದಿರುವ ಕಾಂಗ್ರೆಸ್ ಆ ಪಕ್ಷಗಳ ನಡೆ ನೋಡಿ ಮುಂದೆ ತಮ್ಮ ಹೆಜ್ಜೆ ಇಡಲಿದೆ. ಹಾಗೆಯೇ ಅನ್ಯ ಪಕ್ಷಗಳಿಂದ ವಲಸೆ ಬರಲಿರುವ ಹಾಗೂ ಅಭ್ಯರ್ಥಿಗಳಿಲ್ಲದ ಕ್ಷೇತ್ರಗಳಿಗೆ ಹೊಸಬರನ್ನು ಹುಡುಕಿಕೊಳ್ಳುವ ಅನಿವಾರ್ಯತೆ ಇದೆ. ಹೀಗಾಗಿ ಎರಡನೇ ಪಟ್ಟಿ ಬಿಡುಗಡೆ ತಡವಾಗಲಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? :ಕೈ ಹಿಡಿಯದ ಕಮಲ ಶಾಸಕರು: ಹಲವು ಕ್ಷೇತ್ರಗಳ ಗೊಂದಲಕ್ಕೆ ಬಹುತೇಕ ತೆರೆ

ಸ್ಕ್ರೀನಿಂಗ್ ಕಮಿಟಿ ಸಭೆ ಆರಂಭಕ್ಕೂ ಮುನ್ನ ಟಿಕೆಟ್ ಘೋಷಿತ ಅಭ್ಯರ್ಥಿಗಳಿಗೆ ಚುನಾವಣೆ ತಯಾರಿ ಬಗ್ಗೆ ಪಕ್ಷ ಪ್ರಮುಖರು ಸಲಹೆ ನೀಡಲಿದ್ದಾರೆ. ಇಂದಿನ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...