ಗೋವಾ ನೈಟ್‌ಕ್ಲಬ್‌ ಅಗ್ನಿ ಅವಘಡ | ಸಮಗ್ರ ತನಿಖೆಗೆ ಕಾಂಗ್ರೆಸ್ ಒತ್ತಾಯ; ಆಡಳಿತದ ವೈಫಲ್ಯ ಎಂದ ರಾಹುಲ್ ಗಾಂಧಿ

Date:

ಗೋವಾದ ನೈಟ್‌ಕ್ಲಬ್‌ ಅಗ್ನಿ ಅವಘಡದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಭಾನುವಾರ ಒತ್ತಾಯಿಸಿದೆ. ಹಾಗೆಯೇ ಈ ಘಟನೆಯು ಸುರಕ್ಷತೆ ಮತ್ತು ಆಡಳಿತದ ಕ್ರಿಮಿನಲ್ ವೈಫಲ್ಯ ಎಂದು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಸದ್ಯ ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ಜನಪ್ರಿಯ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು ನಾಲ್ವರು ಪ್ರವಾಸಿಗರು ಮತ್ತು 14 ಸಿಬ್ಬಂದಿ ಸೇರಿದಂತೆ ಕನಿಷ್ಠ 25 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಗೋವಾ ನೈಟ್‌ ಕ್ಲಬ್‌ನಲ್ಲಿ ಭೀಕರ ಬೆಂಕಿ ದುರಂತ: 23 ಮಂದಿ ಜೀವಂತ ದಹನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಈ ದುರಂತವು ಅತಿ ದೊಡ್ಡ ನಷ್ಟವಾಗಿದೆ. ಮೃತರ ಕುಟುಂಬಸ್ಥರು ಮತ್ತು ಪ್ರೀತಿಪಾತ್ರರಿಗೆ ನನ್ನ ತೀವ್ರ ಸಂತಾಪಗಳು. ಮೊದಲೇ ತಡೆಗಟ್ಟಬಹುದಾದ ಅವಘಡ ಇದಾಗಿದೆ. ಈ ದುರಂತದಲ್ಲಿ ಸರಿದೂಗಿಸಲಾಗದ ನಷ್ಟವಾಗಿದೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

“ಇಂತಹ ದುರಂತಗಳು ಸಮಗ್ರ ತನಿಖೆಗೆ ಒಳಗಾಗಬೇಕು. ಎಲ್ಲಾ ಅಗ್ನಿ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳ ಅಗತ್ಯವಿದೆ. ಇದರಿಂದಾಗಿ ಇಂತಹ ವಿನಾಶಕಾರಿ ಘಟನೆಗಳು ಪುನರಾವರ್ತನೆಯಾಗುವುದಿಲ್ಲ. ಈ ಪ್ರದೇಶದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ಸಹಾಯವನ್ನು ನೀಡಬೇಕೆಂದು ಮತ್ತು ಇಂತಹ ಸಮಯದಲ್ಲಿ ಅವರೊಂದಿಗೆ ನಿಲ್ಲಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, “ಗೋವಾದ ಅರ್ಪೋರಾದಲ್ಲಿ 20ಕ್ಕೂ ಹೆಚ್ಚು ಜೀವಗಳನ್ನು ಭೀಕರ ಬೆಂಕಿ ದುರಂತ ಬಲಿ ಪಡೆದುಕೊಂಡಿದೆ. ಈ ಘಟನೆ ತೀವ್ರ ನೋವುಂಟು ಮಾಡಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

“ಇದು ಕೇವಲ ಅಪಘಾತವಲ್ಲ, ಸುರಕ್ಷತೆ ಮತ್ತು ಆಡಳಿತದ ಕ್ರಿಮಿನಲ್ ವೈಫಲ್ಯ. ಸಂಪೂರ್ಣ, ಪಾರದರ್ಶಕ ತನಿಖೆ ನಡೆಯಬೇಕು. ಅಂತಹ ತಡೆಗಟ್ಟಬಹುದಾದ ದುರಂತಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...