ಲೋಕಸಭೆ ಚುನಾವಣೆ | ಆದಿವಾಸಿ ಸಮಾಜಕ್ಕಾಗಿ ಕಾಂಗ್ರೆಸ್‌ನ ಆರು ಸಂಕಲ್ಪ

Date:

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಇದಗೀ, ಆದಿವಾಸಿ ಸಮುದಾಯಕ್ಕಾಗಿ ಕಾಂಗ್ರೆಸ್‌ನ ಆರು ಸಂಕಲ್ಪಗಳನ್ನು ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಆದಿವಾಸಿ ಸಹೋದರ ಸಹೋದರಿಯರೇ!, ಬುಡಕಟ್ಟು ಸಮಾಜದ ನೀರು, ಅರಣ್ಯ, ಭೂಮಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಕಾಂಗ್ರೆಸ್ ಆರು ನಿರ್ಣಯಗಳನ್ನು (ಸಂಕಲ್ಪ) ತೆಗೆದುಕೊಂಡಿದೆ” ಎಂದು ತಿಳಿಸಿದ್ದಾರೆ.


ಆದಿವಾಸಿ ಸಮಾಜಕ್ಕೆ ಕಾಂಗ್ರೆಸ್‌ನ ಆರು ಸಂಕಲ್ಪಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1. ಉತ್ತಮ ಆಡಳಿತ: ಅರಣ್ಯ ಹಕ್ಕುಗಳ ಕಾಯ್ದೆ (ಎಫ್‌ಆರ್‌ಎ) ಅಡಿಯಲ್ಲಿ, ಎಲ್ಲಾ ಬಾಕಿ ಇರುವ ಕ್ಲೈಮ್‌ಗಳನ್ನು 1 ವರ್ಷದೊಳಗೆ ಇತ್ಯರ್ಥಗೊಳಿಸಲಾಗುವುದು. ಎಲ್ಲಾ ತಿರಸ್ಕೃತ ಕ್ಲೈಮ್‌ಗಳನ್ನು 6 ತಿಂಗಳೊಳಗೆ ಪರಿಶೀಲಿಸಲಾಗುತ್ತದೆ. ಅದನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ರಾಷ್ಟ್ರೀಯ ಮಿಷನ್ ಅನ್ನು ಸ್ಥಾಪಿಸಲಾಗುತ್ತದೆ.

2. ಸುಧಾರಣೆಗಳು: ಅರಣ್ಯ ಸಂರಕ್ಷಣೆ ಮತ್ತು ಭೂಸ್ವಾಧೀನ ಕಾನೂನುಗಳಲ್ಲಿ ಮೋದಿ ಸರ್ಕಾರ ಮಾಡಿದ ಎಲ್ಲಾ ತಿದ್ದುಪಡಿಗಳನ್ನು ಕಾಂಗ್ರೆಸ್ ಹಿಂಪಡೆಯಲಿದೆ.

3. ಭದ್ರತೆ: ಆದಿವಾಸಿಗಳ ಪ್ರಾಬಲ್ಯವಿರುವ ದೇಶದ ಪ್ರತಿಯೊಂದು ಪ್ರದೇಶಕ್ಕೂ ‘ಪರಿಶಿಷ್ಟ ಪ್ರದೇಶ’ ಸ್ಥಾನಮಾನವನ್ನು ನೀಡಲಾಗುತ್ತದೆ.

4. ಸ್ವ-ಆಡಳಿತ: ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ‘ಗ್ರಾಮ ಸರ್ಕಾರ’ ಮತ್ತು ‘ಸ್ವಾಯತ್ತ ಜಿಲ್ಲಾ ಸರ್ಕಾರ’ ಸ್ಥಾಪಿಸಲು ಕಾಂಗ್ರೆಸ್ ಪ್ರತಿ ರಾಜ್ಯದಲ್ಲಿ ಪಿಇಎಸ್‌ಎ ಅಡಿಯಲ್ಲಿ ಕಾನೂನನ್ನು ಜಾರಿ ಮಾಡುತ್ತದೆ.

5. ಆತ್ಮಗೌರವ: ಎಂಎಸ್‌ಪಿಯನ್ನು ಖಾತರಿಪಡಿಸಲು ಸಣ್ಣ ಅರಣ್ಯ ಉತ್ಪನ್ನವನ್ನು (ಎಂಎಫ್‌ಪಿ) ಸಹ ಕಾನೂನಿನಲ್ಲಿ ಸೇರಿಸಲಾಗುತ್ತದೆ.

6. ಉಪ ಯೋಜನೆ: ಎಸ್‌ಸಿ-ಎಸ್‌ಟಿ ಉಪ ಯೋಜನೆಯನ್ನು ಪುನರುಜ್ಜೀವನಗೊಳಿಸಲಾಗುವುದು ಮತ್ತು ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾಡಿದಂತೆ ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ಬಜೆಟ್‌ನಲ್ಲಿ ಬಜೆಟ್‌ನಲ್ಲಿ ಪಾಲು ನೀಡಲು ಕಾನೂನು ರಕ್ಷಣೆ ನೀಡಲಾಗುತ್ತದೆ.

“ಆದಿವಾಸಿಗಳ ಪಾರಂಪರಿಕ ಹಕ್ಕುಗಳನ್ನು ಮತ್ತು ಅವರನ್ನು ರಕ್ಷಿಸದೆ ದೇಶದ ಅಭಿವೃದ್ಧಿಯನ್ನು ಕಲ್ಪಿಸಲು ಸಾಧ್ಯವಿಲ್ಲ. ಭಾರತ ಸರ್ಕಾರವು ಆದಿವಾಸಿಗಳ ಹಕ್ಕುಗಳು, ಭದ್ರತೆ ಮತ್ತು ಗೌರವದ ಭರವಸೆಯಾಗಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದರು.

ಇನ್ನು ಉದ್ಯೋಗ ಸೃಷ್ಟಿ, ಅಪ್ರೆಂಟಿನ್‌ಶಿಪ್, ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಠಿಣ ಕ್ರಮ, ಕಾರ್ಮಿಕರಿಗೆ (ನಿರ್ದಿಷ್ಟ ಅವಧಿಗೆ ದುಡಿಯುವವರು) ಸ್ಟಾರ್ಟ್‌ಅಪ್ ಫಂಡ್‌ಗಳು ಮತ್ತು ಸಾಮಾಜಿಕ ಭದ್ರತೆ ನೀಡುವ ಐದು ಗ್ಯಾರಂಟಿಗಳನ್ನು ಈಗಾಗಲೇ ಕಾಂಗ್ರೆಸ್ ಘೋಷಿಸಿದ್ದು, ಈಗ ಬುಡಕಟ್ಟು ಸಮಾಜಕ್ಕೆ ಆರು ಸಂಕಲ್ಪಗಳನ್ನು ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...