ಕೋವಿಡ್ ಸಾವಿನ ಅಂಕಿಅಂಶದಲ್ಲಿ ಭಾರೀ ವ್ಯತ್ಯಾಸ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

Date:

ಅಧಿಕೃತ ಕೋವಿಡ್ ಸಾವಿನ ಸಂಖ್ಯೆ ಮತ್ತು ನಾಗರಿಕ ನೋಂದಣಿ ವ್ಯವಸ್ಥೆಯ ದತ್ತಾಂಶದಲ್ಲಿರುವ ಅಂಕಿಅಂಶಗಳ ನಡುವೆ ಹೊಂದಾಣಿಕೆ ಇಲ್ಲ ಎಂಬ ಆರೋಪದ ಮೇಲೆ ಕಾಂಗ್ರೆಸ್ ಭಾನುವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ವಿಚಾರದಲ್ಲಿ ಈ ಪಕ್ಷಪಾತ ಸರ್ಕಾರ ತಮ್ಮ ಕ್ರಮಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ನಿರೀಕ್ಷಿಸುವುದು ತುಂಬಾ ಹೆಚ್ಚು. ಆದರೆ ಇತಿಹಾಸದಲ್ಲಿ ಈ ಸರ್ಕಾರ ದುರ್ಬಲ ಕೃತ್ಯಗಳು ದಾಖಲಾಗುವುದು ಖಚಿತ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಐದು ವರ್ಷಗಳ ಹಿಂದೆ, ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಜಗತ್ತು ಧ್ವಂಸಗೊಡಿತ್ತು. ಆ ಕ್ಷಣದಲ್ಲಿ ಒಂದು ಶತಮಾನಕ್ಕೂ ಹೆಚ್ಚು ಕಾಲ ನಾವು ನೋಡಿರದ ಪ್ರಮಾಣದಲ್ಲಿ ಭಾರತವು ವಿನಾಶಕ್ಕೆ ಒಳಗಾಗಿದೆ ಎಂಬುದು ಸ್ಪಷ್ಟವಾಗಿತ್ತು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದಿರಾ? ಕೋವಿಡ್‌ ಲಸಿಕೆ ಪಡೆದ ಗಣ್ಯರ ಮಾಹಿತಿ ಸೋರಿಕೆ; ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಲಸಿಗರ ಬಿಕ್ಕಟ್ಟಿನಿಂದ ಹಿಡಿದು ಲಸಿಕೆಗಳ ಉತ್ಪಾದನೆಯ ಕೊರತೆಯವರೆಗೆ, ಸಾಮೂಹಿಕ ಸಾವುಗಳು ಮತ್ತು ಆಮ್ಲಜನಕದ ಕೊರತೆಯಿಂದ ಹಿಡಿದು ಮಾನವರ ಜೀವಗಳಿಗೆ ಆದ್ಯತೆ ನೀಡುವ ಬದಲು ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲು ಪ್ರಧಾನಿಯವರು ಹೋದವರೆಗೂ ಸಾಂಕ್ರಾಮಿಕ ರೋಗದ ಸಮಯದಲ್ಲಿ ಮೋದಿ ಸರ್ಕಾರದ ಅತ್ಯಂತ ಕ್ರೂರ ಮತ್ತು ಕೆಟ್ಟ ಆಡಳಿತ ಪ್ರದರ್ಶನಗೊಂಡಿತು” ಎಂದು ಟೀಕಿಸಿದ್ದಾರೆ.

“ಸರ್ಕಾರವು ಕೋವಿಡ್ ಸಾವುಗಳ ಲೆಕ್ಕವನ್ನು ವ್ಯವಸ್ಥಿತವಾಗಿ ಕಡಿಮೆ ವರದಿ ಮಾಡಿದೆ ಎಂದು ನಮಗೆ ಅಂದೇ ತಿಳಿದಿತ್ತು. ಆದರೆ 2021ರಲ್ಲಿ ಮಾತ್ರ ಭಾರತದಾದ್ಯಂತ ಹೆಚ್ಚುವರಿಯಾಗಿ 20 ಲಕ್ಷ ಸಾವುಗಳು ವರದಿಯಾಗಿವೆ ಎಂದು ನಮಗೆ ಈಗ ತಿಳಿದುಬಂದಿದೆ. ಇವುಗಳಲ್ಲಿ ಹೆಚ್ಚಿನವು ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸಂಭವಿಸಿರುವ ಸಾವು. 20 ಲಕ್ಷ ಸಾವಿನ ಸಂಖ್ಯೆಯೂ ಅಧಿಕೃತ ಕೋವಿಡ್ ಸಾವಿನ ಸಂಖ್ಯೆ 3.3 ಲಕ್ಷಕ್ಕಿಂತ ಸುಮಾರು ಆರು ಪಟ್ಟು ಹೆಚ್ಚು” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿಯವರ ತವರು ರಾಜ್ಯ ಗುಜರಾತ್‌ನಲ್ಲಿ ದಿಗ್ಭ್ರಮೆಗೊಳಿಸುವಷ್ಟು ಪ್ರಮಾಣದಲ್ಲಿ ಸಾವುಗಳು ಸಂಭವಿಸಿದೆ. ಇದೀಗ ಬಂದ ಲೆಕ್ಕಾಚಾರ ನೋಡಿದಾಗ ಗುಜರಾತ್ ಸರ್ಕಾರ ಒಪ್ಪಿಕೊಂಡಿದ್ದಕ್ಕಿಂತ 33 ಪಟ್ಟು ಹೆಚ್ಚು ಸಾವುಗಳು ಸಂಭವಿಸಿದೆ ಎಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

“ಈ ಸರ್ಕಾರವು ತನ್ನ ಕಿವುಡ ಕ್ರಮಗಳಿಗೆ ವಿಷಾದ ಅಥವಾ ಪಶ್ಚಾತ್ತಾಪವನ್ನು ವ್ಯಕ್ತಪಡಿಸುತ್ತದೆ ಎಂದು ನಿರೀಕ್ಷಿಸುವುದು ನಮ್ಮ ಅತಿರೇಕದ ನಿರೀಕ್ಷೆಯಾಗಬಹುದು. ಆದರೆ ಇತಿಹಾಸ ಈ ದುಷ್ಕೃತ್ಯವನ್ನು ದಾಖಲಿಸುವುದು ಖಚಿತ”ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...