ಮಧ್ಯಪ್ರದೇಶ ಬಿಜೆಪಿ ಸರ್ಕಾರ ನಿದ್ದೆಗೆ ಜಾರಿದೆ; ಕಾಂಗ್ರೆಸ್‌ನಿಂದ ‘ಕುಂಭಕರ್ಣ’ ಪ್ರತಿಭಟನೆ

Date:

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆಯನ್ನು ನಡೆಸಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟನೆಯ ವಿಡಿಯೋ ಹರಿದಾಡುತ್ತಿದೆ. ಮಲಗಿರುವ ಬಿಜೆಪಿ ಸರ್ಕಾರವನ್ನು ಎಬ್ಬಿಸಲು ಕಾಂಗ್ರೆಸ್‌ ‘ಕುಂಭಕರ್ಣ’ ಪ್ರತಿಭಟನೆಯನ್ನು ನಡೆಸಿದೆ.

ಶಾಸಕರು ಹಗರಣಗಳು ಮತ್ತು ಭ್ರಷ್ಟಾಚಾರಗಳನ್ನು ಮಾಡಿದರೂ ಕೂಡಾ ಸರ್ಕಾರ ಮಾತ್ರ ಕುಂಭಕರ್ಣನಂತೆ ಮಲಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಹಾಗೆಯೇ ಕುಂಭಕರ್ಣನಂತೆ ವೇಷ ಧರಿಸಿ ನಿದ್ದೆಗೆ ಜಾರಿರುವಂತೆ ನಟಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಅಪರಾಧ ಹೆಚ್ಚಳ | ತನ್ನ ತಟ್ಟೆಯಲ್ಲಿ ಹೆಗ್ಗಣ, ಕಾಂಗ್ರೆಸ್ ತಟ್ಟೆಯ ನೊಣದತ್ತ ಬಿಜೆಪಿ ಬೊಟ್ಟು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಮಲಗಿರುವ ಸರ್ಕಾರವನ್ನು ಪ್ರತಿನಿಧಿಸುವ ಕುಂಭಕರ್ಣ ವೇಷಾಧಾರಿಯನ್ನು ಎಬ್ಬಿಸಲು ಕಾಂಗ್ರೆಸ್ ನಾಯಕರು ಪೀಪಿ ಊದಿ ಪ್ರತಿಭಟಿಸಿದ್ದಾರೆ. ವಿಪಕ್ಷ ನಾಯಕ ಉಮಾಂಗ್ ಸಿಂಘಾರ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಶಾಸಕ ದಿನೇಶ್ ಜೈನ್ ಕುಂಭಕರ್ಣನಂತೆ ವೇಷ ಧರಿಸಿದ್ದರು.

“ದೇಶದಲ್ಲಿ ನಿರಂತರವಾಗಿ ಹಗರಣ ನಡೆಯುತ್ತಿದ್ದರೂ ಕೂಡಾ ಬಿಜೆಪಿ ಸರ್ಕಾರವು ಕುಂಭಕರ್ಣನಂತೆ ಮಲಗಿದೆ. ಆದ್ದರಿಂದ ನಾವು ಈ ರೀತಿಯಾಗಿ ವಿನೂತನ ಪ್ರತಿಭಟನೆ ನಡೆಸಿದ್ದೇವೆ. ರಾಜ್ಯದಲ್ಲಿ ನರ್ಸಿಂಗ್ ಹಗರಣ, ಸಾರಿಗೆ ಹಗರಣ, ಪತ್ವಾರಿ ಹಗರಣ ನಡೆದಿದೆ. ಯುವಕರಿಗೆ ಉದ್ಯೋಗ ಲಭಿಸುತ್ತಿಲ್ಲ. ರೈತರಿಗೆ ಗೊಬ್ಬರುಗಳು ಲಭ್ಯವಾಗುತ್ತಿಲ್ಲ. ಆದರೆ ಸರ್ಕಾರ ಇದರ ವಿರುದ್ಧವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಒಪ್ಪುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಕ್ರಮವೂ ಕೈಗೊಳ್ಳುತ್ತಿಲ್ಲ” ಎಂದು ಸಿಂಘಾರ್ ಆರೋಪಿಸಿದ್ದಾರೆ.

ಆದರೆ ಇದಕ್ಕೆ ತಿರುಗೇಟು ನೀಡಿದ ಕ್ರೀಡಾ ಸಚಿವ ವಿಶ್ವಾಶ್ ಸಾರಂಗ್, “ನಾವು ಎಲ್ಲಾ ವಿಚಾರದ ಬಗ್ಗೆ ಚರ್ಚೆ ನಡೆಸಲು ಸಿದ್ಧವಿದ್ದೇವೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡಿ ಬಜೆಟ್ ಅಧಿವೇಶನದ ವೇಳೆ ಗದ್ದಲ ಸೃಷ್ಟಿಸುತ್ತಿದೆ. ಬರೀ ಫೋಟೋಗಾಗಿ ಈ ರೀತಿ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...