ಸಂಘಪರಿವಾರದವ ಮೊಬೈಲ್ ಇಟ್ಟು ಸಿಕ್ಕಿ ಬಿದ್ದ ಸುದ್ದಿ ಬಿಜೆಪಿ ಕಚೇರಿಗೆ ಇನ್ನೂ ತಲುಪಿಲ್ಲವೇ?: ಕಾಂಗ್ರೆಸ್

Date:

  • ಸಂತ್ರಸ್ತಳಾದ ಹಿಂದೂ ಹೆಣ್ಣುಮಗಳಿಗೆ ಶೋಭಾ ಕರಂದ್ಲಾಜೆ ನ್ಯಾಯ ಕೇಳುವುದು ಯಾವಾಗ?
  • ಬಿಜೆಪಿ ಹೋರಾಟ, ಪ್ರತಿಭಟನೆಗಳನ್ನು ಯಾವಾಗ ಹಮ್ಮಿಕೊಳ್ಳುತ್ತದೆ? ಕಾಂಗ್ರೆಸ್ ಟ್ವೀಟ್

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಘಟನೆಯ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಕೋಲಾಹಲ ಎಬ್ಬಿಸಿದ್ದ ಬೆನ್ನಲ್ಲೇ, ಮಂಗಳೂರಿನಲ್ಲಿ ಸಂಘಪರಿವಾರದ ಸಕ್ರಿಯ ಕಾರ್ಯಕರ್ತನೋರ್ವ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ಬಂಧಿತ ಯುವಕನನ್ನು ಮುಲ್ಕಿ ಸಮೀಪದ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದೆ. ಈತ ಹಿಂದೂ ಜಾಗರಣ ವೇದಿಕೆಯ ಸ್ಥಳೀಯ ಘಟಕದ ಸಕ್ರಿಯ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಆದರೆ ಈವರೆಗೂ ಬಿಜೆಪಿ ಕಡೆಯಿಂದ ಏನೂ ಪ್ರತಿಕ್ರಿಯೆಗಳಾಗಲೀ, ಹೇಳಿಕೆಗಳಾಗಲೀ ಬಂದಿಲ್ಲ.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿಯ ಕಾಲೆಳೆದಿರುವ ಕಾಂಗ್ರೆಸ್, ‘ಸಂಘಪರಿವಾರದಿಂದ ವಿಡಿಯೋ ಚಿತ್ರೀಕರಣದ ತರಬೇತಿ ಪಡೆದವನೊಬ್ಬ ಬಾತ್ ರೂಮಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಸಿಕ್ಕಿ ಬಿದ್ದಿರುವ ಸುದ್ದಿ ಇನ್ನೂ ಬಿಜೆಪಿ ಕಚೇರಿಯನ್ನು ತಲುಪಿಲ್ಲವೇ?’ ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಹೋರಾಟ, ಪ್ರತಿಭಟನೆಗಳನ್ನು ಯಾವಾಗ ಹಮ್ಮಿಕೊಳ್ಳುತ್ತದೆ? ಈತನಿಂದ ಸಂತ್ರಸ್ತಳಾದ ಹಿಂದೂ ಹೆಣ್ಣುಮಗಳಿಗೆ ಶೋಭಾ ಕರಂದ್ಲಾಜೆ ನ್ಯಾಯ ಕೇಳುವುದು ಯಾವಾಗ? ಈ ಪ್ರಕರಣದಲ್ಲಿ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡುವುದಿಲ್ಲವೇ? ಎಂದು ಪ್ರಶ್ನಿಸಿದೆ.

ಇದನ್ನು ಓದಿದ್ಧೀರಾ? ಸ್ನಾನದ ವಿಡಿಯೋ ಪ್ರಕರಣ : ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ಎಫ್‌ಐಆರ್, ನ್ಯಾಯಾಂಗ ಬಂಧನ

ಘಟನೆ ಏನು?
ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಹಿಂದೂ ಜಾಗರಣ ವೇದಿಕೆಯ ಸ್ಥಳೀಯ ಘಟಕದ ಸಕ್ರಿಯ ಕಾರ್ಯಕರ್ತ ಸುಮಂತ್ ಪೂಜಾರಿ ಮೊಬೈಲ್ ಇಟ್ಟಿದ್ದ. ಆದರೆ, ಯುವತಿಯ ಬದಲಾಗಿ ಯುವತಿಯ ಅಣ್ಣ ಬಚ್ಚಲು ಮನೆಗೆ ಸ್ನಾನಕ್ಕಾಗಿ ಬಂದಿದ್ದ. ಇದೇ ವೇಳೆ ವಿಡಿಯೋ ರೆಕಾರ್ಡಿಂಗ್‌ಗೆ ಇಟ್ಟಿದ್ದ ಮೊಬೈಲ್ ಅನ್ನು ತೆಗೆಯಲೆಂದು ಸುಮಂತ್ ಬಂದಾಗ ಏನೋ ಶಬ್ದವಾಗಿದೆ. ಬಳಿಕ ಮೊಬೈಲ್ ಇರುವುದನ್ನು ಗಮನಿಸಿದ ಯುವತಿಯ ಅಣ್ಣ, ರೆಡ್​ ಹ್ಯಾಂಡ್​ ಆಗಿ ಹಿಡಿದು ಆರೋಪಿ ಸುಮಂತ್​ನನ್ನು ಪೊಲೀಸರಿಗೆ ಒಪ್ಪಿಸಿದ್ದರು.

ಆ ಬಳಿಕ ಪೊಲೀಸರು ‘ಸ್ಟೇಷನ್‌ ಬೇಲ್’ನ ಮೇಲೆ ಬಿಟ್ಟು ಕಳುಹಿಸಿದ್ದಾರೆ ಎಂದೂ ವರದಿಯಾಗಿತ್ತು. ಸಂಘಪರಿವಾರದ ನಾಯಕರ ಒತ್ತಡಕ್ಕೆ ಮಣಿದ ಪೊಲೀಸರು, ಯುವಕನ ವಿರುದ್ಧ ಠಾಣೆಯಲ್ಲೇ ಜಾಮಿನು ನೀಡಬಹುದಾದ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು ಎನ್ನಲಾಗಿತ್ತು.

ಘಟನೆ ಕಳೆದ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ತಡವಾಗಿ ಬೆಳಕಿಗೆ ಬಂದಿತ್ತು. ಈ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ ಬೆನ್ನಲ್ಲೇ, ಆರೋಪಿಯನ್ನು ಮತ್ತೆ ಬಂಧಿಸಿ, ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...