ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್‌: ಪ್ರಲ್ಹಾದ ಜೋಶಿ

Date:

  • ರಾಜಣ್ಣ ಹೇಳಿದ್ದರಲ್ಲಿ ತಪ್ಪೇನಿದೆ? ಆತ್ಮವಿಮರ್ಶೆ ಮಾಡಿಕೊಳ್ಳಲಿ ರಾಹುಲ್‌ ಗಾಂಧಿ

ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‌ ಪಕ್ಷ ಇಂದು ಒಬ್ಬ ಎಸ್ಟಿ ನಾಯಕನನ್ನು ಕತ್ತು ಹಿಡಿದು ಹೊರ ದಬ್ಬಿದ್ದು, ಇದು ಅತ್ಯಂತ ಖಂಡನೀಯ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನವದೆಹಲಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಕರ್ನಾಟದಕಲ್ಲಿ ಕೆ.ಎನ್‌.ರಾಜಣ್ಣ ಎಸ್ಟಿ ಸಮುದಾಯದ ಒಬ್ಬ ಹಿರಿಯ ನಾಯಕರು. ರಾಹುಲ್‌ ಗಾಂಧಿ ಅವರ ʼಮತಗಳ್ಳತನʼ ಆರೋಪ ಸಂಬಂಧ ರಾಜಣ್ಣ ಇರುವ ಸತ್ಯವನ್ನು ಹೇಳಿದ್ದರು. ಆ ಕಾರಣಕ್ಕೇ ಅವರನ್ನೀಗ ಹೊರ ದಬ್ಬಲಾಗಿದೆ” ಎಂದು ವಿಷಾದಿಸಿದರು.

“ಕಾಂಗ್ರೆಸ್‌ನಲ್ಲಿ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದು ರಾಹುಲ್‌ ಗಾಂಧಿ ಅಹಂಕಾರಕ್ಕೆ ನಿದರ್ಶನವಾಗಿದೆ ಎಂದು ಆರೋಪಿಸಿದ ಸಚಿವರು, ರಾಜಣ್ಣ ಮಾಡಿದ ತಪ್ಪೇನು? ಎಂಬ ಬಗ್ಗೆ ಇಡೀ ಕಾಂಗ್ರೆಸ್‌ ಪಕ್ಷ ಆತ್ಮವಿಮರ್ಶೆ ಮಾಡಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಣ್ಣ ಹೇಳಿದ್ದು ಸರಿಯಾಗೇ ಇದೆ: “ರಾಹುಲ್‌ ಗಾಂಧಿ ಅವರ ಮತಗಳ್ಳತನ ಆರೋಪ ಕುರಿತಂತೆ ರಾಜಣ್ಣ ಸರಿಯಾಗೇ ಹೇಳಿದ್ದಾರೆ. ʼಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ತಯಾರಿ ನಡೆದಾಗ ನಮ್ಮ ಸರ್ಕಾರವೇ ಇತ್ತು. ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರಿಂದ ಹಿಡಿದು ಎಲ್ಲಾ ಅಧಿಕಾರ ವರ್ಗ ನಮ್ಮವರೇ ಇದ್ದರು ಮತ್ತು ಚುನಾವಣಾ ಆಯೋಗ ಕೊಟ್ಟ ಮತದಾರರ ಪಟ್ಟಿಯನ್ನು ನಾವು ನೋಡಿಕೊಳ್ಳಬೇಕಿತ್ತುʼ ಎಂದಿದ್ದಾರೆ. ಇದರಲ್ಲಿ ಅವರ ತಪ್ಪೇನಿದೆ” ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದರು.

ಪರಿಶಿಷ್ಟ ವಿರೋಧಿ ನಡೆ: “ಕೆ.ಎನ್‌.ರಾಜಣ್ಣ 72 ವರ್ಷದ ಹಿರಿಯರು ಮತ್ತು ಎಸ್ಟಿ ಸಮುದಾಯದ ಪ್ರಬಲ ರಾಜಕಾರಣಿ. ಇಂಥವರನ್ನು ವಜಾಗೊಳಿಸಿರುವುದು ಕಾಂಗ್ರೆಸ್‌ ಪಕ್ಷ ಪರಿಶಿಷ್ಟರನ್ನು, ಸತ್ಯವಂತರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದಕ್ಕೆ ನಿದರ್ಶನ ಇದಾಗಿದೆ” ಎಂದರು.

“ರಾಹುಲ್‌ ಗಾಂಧಿ ಅವರ ಅಹಂಕಾರದಿಂದಾಗಿ ರಾಜಣ್ಣ ಸತ್ಯ ಹೇಳಿದ್ದಕ್ಕೆ ಶಿಕ್ಷೆ ಅನುಭವಿಸುವಂತಾಗಿದೆ. ನಿಜಕ್ಕೂ ಇದು ದುರಂತ ಮತ್ತು ಖಂಡನೀಯ. ರಾಹುಲ್‌ ಗಾಂಧಿ ತಮ್ಮ ನಡೆ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಅವರ ಬಳಿ ಇರುವುದೆಲ್ಲ ಸುಳ್ಳಿನ ಕಂತೆಗಳು. ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಕೊಟ್ಟ ದಾಖಲೆಗಳಲ್ಲ. ದೇಶದ ಜನರಿಗೆ ರಾಹುಲ್‌ ಗಾಂಧಿ ಸುಳ್ಳು ಹೇಳಿದ್ದಾರೆ” ಎಂದು ಜೋಶಿ ಆರೋಪಿಸಿದರು.

ಕಾಂಗ್ರೆಸ್‌ ಒಂದೂ ಆಕ್ಷೇಪಣೆ ಸಲ್ಲಿಸಿಲ್ಲ

“ಕರ್ನಾಟಕದಲ್ಲಿ ಚುನಾವಣಾ ಆಯೋಗ 27 ಅಕ್ಟೋಬರ್‌ಗೆ ಕರುಡು ವೋಟರ್‌ ಲೀಸ್ಟ್‌ ಕೊಟ್ಟಿದೆ. ಜನವರಿ ತಿಂಗಳಲ್ಲಿ ಅಂತಿಮ ಮತದಾರರ ಪಟ್ಟಿ ಕೊಟ್ಟಿದೆ. ಹಾಗಿದ್ದರೂ ಕಾಂಗ್ರೆಸ್‌ ಪಕ್ಷ ಯಾವುದೇ ಒಂದು ಆಕ್ಷೇಪಣೆಯನ್ನೂ ಸಲ್ಲಿಸಿಲ್ಲ. ಎಲ್ಲಾ ಅಭ್ಯರ್ಥಿಗಳು, ಪಕ್ಷದವರು ಅದನ್ನು ಸ್ವೀಕರಿಸಿದ್ದಾರೆ” ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...