ಸೇನಾ ಕಾರ್ಯಾಚರಣೆಗೆ ಬೆಂಬಲ; ಬೆಂಗಳೂರಲ್ಲಿ ಕಾಂಗ್ರೆಸ್‌ ತಿರಂಗಾ ಯಾತ್ರೆ

Date:

ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಉದ್ವಿಗ್ನಗೊಂಡಿದೆ. ಪಾಕಿಸ್ತಾನದ ದಾಳಿಯ ವಿರುದ್ಧ ಭಾರತೀಯ ಸೇನೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕರು ಮತ್ತು ಪಾಕಿಸ್ತಾನ್ ದಾಳಿಯನ್ನು ಯಶಸ್ವಿಯಾಗಿ ಹತ್ತಿಕ್ಕುತ್ತಿರುವ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ತಿರಂಗಾ ಯಾತ್ರೆ ನಡೆಸಿದೆ.

ಬೆಂಗಳೂರಿನ ಕೆ.ಆರ್. ವೃತ್ತದಿಂದ ಮ್ಯೂಸಿಯಂ ರಸ್ತೆಯ ಚಿನ್ನಸ್ವಾಮಿ ಸ್ಟೇಡಿಯಂ ವೃತ್ತದ ಮಿನ್ಸ್ ಸ್ಕ್ವೇರ್‌ವರೆಗೆ ಕಾಂಗ್ರೆಸ್‌ ತಿರಂಗಾ ಯಾತ್ರೆ ನಡೆಸಿದೆ. ಯಾತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿ ಎಚ್‌.ಕೆ. ಪಾಟೀಲ್, ಎಂ.ಸಿ. ಸುಧಾಕರ್, ದಿನೇಶ್ ಗುಂಡೂರಾವ್‌, ಕೃಷ್ಣ ಭೈರೇಗೌಡ, ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಕಾಂಗ್ರೆಸ್‌ ನಾಯಕರು ತಿರಂಗಾ ಧ್ವಜ ಹಿಡಿದು, ಹೆಜ್ಜೆ ಹಾಕಿದ್ದಾರೆ.

ತಿರಂಗಾ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ, ‘ನಾವು ನಮ್ಮ ಸೈನಿಕರ ಜೊತೆಗಿದ್ದೇವೆ. ಭದ್ರತೆ ವಿಚಾರವಾಗಿ ಉತ್ತರ ಭಾರತದ ರಾಜ್ಯಗಳಿಗೆ ನೀಡಲಾದ ಸೂಚನೆಗಳನ್ನೇ ಕರ್ನಾಟಕಕ್ಕೂ ಕೇಂದ್ರ ಸರ್ಕಾರ ಕೊಟ್ಟಿದೆ. ನಾವು ಎಲ್ಲ ಜಿಲ್ಲೆಗಳ ಎಸ್‌ಪಿ‌ಗಳಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದೇವೆ. ಮಾಹಿತಿಗಳನ್ನು ಸಂಗ್ರಹಿಸಲು ತಿಳಿಸಿದ್ದವೆ. ಸ್ಲೀಪರ್ ಸೆಲ್‌ಗಳ ಮೇಲೂ ನಿಗಾ ಇಡಲು ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಎಲ್ಲ ಜಲಾಶಯಗಳು, ಅಣೆಕಟ್ಟುಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಚರ್ಚೆಗಳು ನಡೆಯುತ್ತಿವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...