ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

Date:

ಇಂದು(ಸೆಪ್ಟೆಂಬರ್‌ 16) ಹೈದರಾಬಾದ್‌ನಲ್ಲಿ ನಡೆಯಲಿರುವ ಪುನರ್ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಮೊದಲ ಸಭೆಯು ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸಭೆಗೆ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ ಎಂದು ಖರ್ಗೆ ಖಚಿತಪಡಿಸಿದರು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮೊದಲ ಸಿಡಬ್ಲ್ಯೂಸಿ ಸಭೆಯಾಗಿದ್ದು, ನಾಳೆ ವಿಸ್ತೃತ ಕಾರ್ಯಕಾರಿ ಸಮಿತಿಯ ಸಭೆಯೂ ನಡೆಯಲಿದ್ದು, ಅಲ್ಲಿ ಪಕ್ಷಕ್ಕೆ ಸಂಬಂಧಿಸಿದ ಚರ್ಚೆಗಳನ್ನು ಮಾಡಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಲ್ಲ ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿರುತ್ತಾರೆ ಮತ್ತು ಐದು ರಾಜ್ಯಗಳ ಮುಂಬರುವ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಿದ್ದು, ಅದಕ್ಕೆ ಅನುಗುಣವಾಗಿ ಯೋಜನೆ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಮೈತ್ರಿಕೂಟದ ‘ಇಂಡಿಯಾ’ದ ಪಾಲುದಾರರೊಂದಿಗೆ ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು” ಎಂದು ಖರ್ಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಏಕದಿನ ಕ್ರಿಕೆಟ್: ಭಾರತದ ದಾಖಲೆ ಸರಿಗಟ್ಟಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ

ಸಿಡಬ್ಲ್ಯುಸಿ ಸಭೆಯ ವಿವರವಾದ ಯೋಜನೆಯನ್ನು ಶುಕ್ರವಾರ ಪ್ರಕಟಿಸಿದ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್, ಹಲವು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯು ದೆಹಲಿಯ ಹೊರಗೆ ಮೂರು ದಿನಗಳ ಕಾಲ ಚರ್ಚೆ ನಡೆಸಲಿದೆ ಎಂದು ಹೇಳಿದರು.

ಭಾನುವಾರ(ಸೆ.17) ವಿಸ್ತೃತ ಸಿಡಬ್ಲ್ಯೂಸಿಯ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಎಲ್ಲ ರಾಜ್ಯಗಳ ಪಕ್ಷದ ಮುಖ್ಯಸ್ಥರು ಮತ್ತು ಸಿಎಲ್‌ಪಿ ನಾಯಕರು, ಸಂಸದೀಯ ಪಕ್ಷದ ಪದಾಧಿಕಾರಿಗಳು, ಕೇಂದ್ರ ಚುನಾವಣಾ ಸಮಿತಿ ಸದಸ್ಯರನ್ನು ಆಹ್ವಾನಿಸಲಾಗಿದೆ.

ಅದೇ ದಿನ, ‘ತೆಲಂಗಾಣ ರಾಷ್ಟ್ರೀಯ ಏಕೀಕರಣ ದಿನ’ ಎಂದು ಆಚರಿಸಲಾಗುತ್ತದೆ, ಕಾಂಗ್ರೆಸ್ ಹೈದರಾಬಾದ್ ಬಳಿ “ಮೆಗಾ ರ‍್ಯಾಲಿ” ನಡೆಸಲಿದೆ. ಅಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಗೆ ಆರು ಭರವಸೆಗಳನ್ನು ಘೋಷಿಸಲಾಗುತ್ತದೆ.

ಸಿಡಬ್ಲ್ಯುಸಿ 39 ಸಾಮಾನ್ಯ ಸದಸ್ಯರು, 32 ಖಾಯಂ ಆಹ್ವಾನಿತರು ಮತ್ತು 13 ವಿಶೇಷ ಆಹ್ವಾನಿತರನ್ನು ಹೊಂದಿದೆ. ಇವರಲ್ಲಿ 15 ಮಹಿಳೆಯರು ಮತ್ತು ಹಲವಾರು ಹೊಸ ಮುಖಗಳಾದ ಶಶಿ ತರೂರ್, ಸಚಿನ್ ಪೈಲಟ್ ಮತ್ತು ಗೌರವ್ ಗೊಗೋಯ್ ಸಾಮಾನ್ಯ ಸದಸ್ಯರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...