ಕೆಲವು ಮುಸ್ಲಿಮರು ಸತ್ತರೆ ಯಾವುದೇ ಸಮಸ್ಯೆಯಿಲ್ಲ: ಉತ್ತರ ಪ್ರದೇಶದ ಮಾಜಿ ರಾಜ್ಯಪಾಲರ ವಿವಾದಾತ್ಮಕ ಹೇಳಿಕೆ

Date:

ದೇಶದಲ್ಲಿರುವ 22 ಕೋಟಿ ಮುಸ್ಲಿಮರಲ್ಲಿ ಒಂದು ಅಥವಾ ಎರಡು ಕೋಟಿ ಜನರು ಸತ್ತರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಮುಸ್ಲಿಮರು ಭಯದ ನೆರಳಿನಲ್ಲಿ ಬದುಕುತ್ತಿದ್ದು, ಈ ಸಮುದಾಯವನ್ನು ಕಳೆದ 10 ವರ್ಷಗಳಿಂದ ಬೆದರಿಸಲಾಗುತ್ತಿದೆ  ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲರಾದ ಅಜೀಜ್‌ ಖುರೇಷಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನವದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ ತಮಗೆ ಅನ್ಯಾಯವಾದರೆ ಸಿಡಿದೇಳದೆ ವಿಧಿಯಿಲ್ಲ. ಇತ್ತೀಚಿಗೆ ಕಾಂಗ್ರೆಸ್‌ನಲ್ಲಿ ಧರ್ಮದ ಬಗ್ಗೆ ಹೆಚ್ಚು ಒಲವು ಕಾಣುತ್ತಿದೆ. ಈ ಹೇಳಿಕೆಯ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ. ನನ್ನನ್ನು ಪಕ್ಷದಿಂದ ಬೇಕಾದರೆ ಉಚ್ಚಾಟಿಸಲಿ ಎಂದು ಅಜೀಜ್‌ ಖುರೇಷಿ ಸವಾಲು ಹಾಕಿದರು.

“ನನ್ನನ್ನು ಪಕ್ಷದಿಂದ ಉಚ್ಚಾಟಿಸಿದರೆ ನನಗೆ ಯಾವುದೇ ಭಯವಿಲ್ಲ. ಇಂದು ಕಾಂಗ್ರೆಸಿಗರು ಜೈ ಗಂಗಾ ಮಾಯಿ, ಜೈ ನರ್ಮದಾ ಮಾಯಿ ಎಂಬ ಘೋಷಣೆಗಳನ್ನು ಕೂಗಿ ಧಾರ್ಮಿಕ ಮೆರವಣಿಗೆಗಳನ್ನು ನಡೆಸುತ್ತಿದ್ದಾರೆ. ಕಾಂಗ್ರೆಸಿನಲ್ಲಿ ನೆಹರು ಅವರ ಜಾತ್ಯತೀತ ಪರಿಕಲ್ಪನೆಯನ್ನು ನಾಶ ಮಾಡಲಾಗುತ್ತಿದೆ. ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯವು ತಮ್ಮ ಗುಲಾಮರಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಮಲ್ಲಿಕಾರ್ಜುನ ಖರ್ಗೆ

“ದೇಶದ ಪ್ರಧಾನಿ ಹಾಗೂ ಗೃಹ ಸಚಿವರ ತಮ್ಮ ಭಾಷಣಗಳ ಮೂಲಕ ಮುಸ್ಲಿಂ ಸಮುದಾಯವನ್ನು ಬೆದರಿಸುತ್ತಿದ್ದಾರೆ. ಸಮುದಾಯವು ಇಂದು ಭಯದ ನರಳಿನಲ್ಲಿ ಬದುಕುವ ಸ್ಥಿತಿ ಎದುರಾಗಿದೆ. ಬುಲ್ಡೋಜರ್‌ಗಳು ಮತ್ತು ಎನ್‌ಕೌಂಟರ್‌ಗಳು ಮುಸ್ಲಿಮರ ಮೇಲೆ ಮಾತ್ರ ನಡೆಸಲಾಗುತ್ತಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಖುರೇಷಿ ವಾಗ್ದಾಳಿ ನಡೆಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅಜೀಜ್‌ ಖುರೇಷಿ, ನೀವು ಕೆಲಸ ಕೊಡುವುದಿಲ್ಲ. ನೀವು ಅವರನ್ನು ಪೊಲೀಸ್, ಸೇನೆ ಅಥವಾ ನೌಕಾಪಡೆಗೆ ಸೇರಿಸಿಕೊಳ್ಳುವುದಿಲ್ಲ. ಹಾಗಾದರೆ ನಿಮಗೆ ಏಕೆ ಮತ ಹಾಕಬೇಕು ಎಂದು ಪ್ರಶ್ನಿಸಿದರು.  

ಮಧ್ಯಪ್ರದೇಶದವರಾದ ಅಜೀಜ್ ಖುರೇಷಿ ಈ ಹಿಂದೆ ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರನ್ನು 2020 ರಲ್ಲಿ ಅಂದಿನ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ರಾಜ್ಯ ಉರ್ದು ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಿಸಿತ್ತು.

ಮಧ್ಯಪ್ರದೇಶ ಕಾಂಗ್ರೆಸ್‌ ಸರ್ಕಾರಗಳಲ್ಲಿ ಸಚಿವರಾಗಿದ್ದರು. 1984ರ ಲೋಕಸಭೆ ಚುನಾವಣೆಯಲ್ಲಿ ಸತ್ನಾದಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...