ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

Date:

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದರು.

ಮಣಿಪುರದಲ್ಲಿ ಬಿಜೆಪಿಯ ಅಭ್ಯರ್ಥಿ ತೌನೊಜಮ್ ಬಸಂತ ಕುಮಾರ್ ಸಿಂಗ್ ಪರವಾಗಿ ಇಂಫಾಲ್‌ನಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು, ಬಿಜೆಪಿ ರಾಜ್ಯವನ್ನು ಸುಭದ್ರಗೊಳಿಸಲಿದೆ ಎಂದು ಭರವಸೆ ನೀಡಿದರು.

“ಕಾಂಗ್ರೆಸ್ ಎಲ್ಲಿ ಹೋದರೂ ವಿಭಜನೆಯ ಬಗ್ಗೆ ಮಾತನಾಡುತ್ತದೆ. ಇದು ದೇಶವನ್ನು ವಿಭಜಿಸಿದೆ. ಈಗಲೂ ಕಾಂಗ್ರೆಸ್ಸಿಗರು ದೇಶವನ್ನು ಉತ್ತರ ಮತ್ತು ದಕ್ಷಿಣ ಭಾರತದ ರೀತಿಯಲ್ಲಿ ವಿಭಜಿಸಲು ಬಯಸುತ್ತಿದ್ದಾರೆ. ಮಣಿಪುರವನ್ನು ವಿಭಜಿಸಲೂ ಮುಂದಾಗಿದ್ದಾರೆ. ಆದರೆ ನಾನು ನಿಮಗೆ ಹೇಳುತ್ತೇನೆ, ನಾವು ಮಣಿಪುರವನ್ನು ವಿಭಜಿಸಲು ಬಿಡುವುದಿಲ್ಲ” ಎಂದು ಶಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆಗೂ ಮುನ್ನ ಮಣಿಪುರಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

“ಒಳನುಸುಳುವಿಕೆ (ಅಕ್ರಮ ವಲಸೆ) ಮೂಲಕ ಸಣ್ಣ ರಾಜ್ಯದ ಜನಸಂಖ್ಯೆಯನ್ನು ಬದಲಾಯಿಸುವ ಪಿತೂರಿ ನಡೆಯುತ್ತಿದೆ ಎಂದು ನನಗೆ ತಿಳಿದಿದೆ. (ಭಾರತ-ಮ್ಯಾನ್ಮಾರ್) ಮುಕ್ತ ಚಲನೆಯ ಆಡಳಿತವನ್ನು ಮಾದಕ ದ್ರವ್ಯಗಳ ಕಳ್ಳಸಾಗಣೆಗಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ. ನಾವು ಮ್ಯಾನ್ಮಾರ್‌ಗೆ ಬೇಲಿ ಹಾಕಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.


“ಗಡಿಯಲ್ಲಿ ಈ ಕಾರ್ಯ ಆರಂಭವಾಗಿದೆ. ನಾವು ಮಣಿಪುರವನ್ನು ಸುಭದ್ರಗೊಳಿಸುತ್ತೇವೆ” ಎಂದ ಅಮಿತ್ ಶಾ ಮೈತಿಗಳು ಮತ್ತು ಕುಕಿಗಳನ್ನು ಒಳಗೊಂಡ ಜನಾಂಗೀಯ ಹಿಂಸಾಚಾರವನ್ನೂ ಉಲ್ಲೇಖಿಸಿದ್ದಾರೆ. “ಸಮಾಜದ ಎಲ್ಲಾ ವರ್ಗಗಳೊಂದಿಗೆ ಮಾತನಾಡುವ ಮೂಲಕ ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ಮೋದಿ ಸರ್ಕಾರದ ಆದ್ಯತೆಯಾಗಿದೆ” ಎಂದು ಹೇಳಿದರು.

“ಆರು ವರ್ಷಗಳಿಂದ ಮಣಿಪುರದಲ್ಲಿ ಏನೂ ಆಗಿಲ್ಲ. ನಂತರ ಹಿಂಸಾಚಾರ ನಡೆದಿದೆ. ಮುಂದಿನ ದಿನಗಳಲ್ಲಿ ಶಾಂತಿ ಸ್ಥಾಪಿಸುವುದು ಮೋದಿ ಅವರ ಆದ್ಯತೆ ಎಂದು ನಾನು ಕಣಿವೆ ಮತ್ತು ಬೆಟ್ಟಗಳಲ್ಲಿ ಜೀವಿಸುವವರಿಗೆ ಹೇಳಲು ಬಯಸುತ್ತೇನೆ. ಯಾರು ಎಷ್ಟೇ ಪ್ರಯತ್ನಿಸಿದರೂ ಮಣಿಪುರವನ್ನು ವಿಘಟನೆ ಮಾಡಲು ಬಿಡುವುದಿಲ್ಲ. ಎರಡೂ ಸಮುದಾಯಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಶಾಂತಿಯನ್ನು ತರಲು ಮೋದಿ ಸರ್ಕಾರ ಬದ್ಧವಾಗಿದೆ” ಎಂದರು.

ಇದನ್ನು ಓದಿದ್ದೀರಾ?   ಮಣಿಪುರ ಹಿಂಸಾಚಾರ | ಜೂನ್‌ 24 ರಂದು ಸರ್ವಪಕ್ಷ ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ

ಮೋದಿಯವರು ಪ್ರಧಾನಿಯಾದ ಬಳಿಕ ಈಶಾನ್ಯಕ್ಕೆ 70 ಬಾರಿ ಭೇಟಿ ನೀಡಿದ್ದಾರೆ ಎಂದು ಉಲ್ಲೇಖಿಸಿದ ಅಮಿತ್ ಶಾ, ಈ ಪ್ರದೇಶದ ಸಣ್ಣ ರಾಜ್ಯಗಳು ಭಾರತದ ಆತ್ಮ ಎಂಬ ಕಲ್ಪನೆ ಕಾಂಗ್ರೆಸ್‌ಗೆ ಇಲ್ಲ ಎಂದರು. “ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಣಿಪುರದಲ್ಲಿ ಬಂದ್‌ಗಳು ಮತ್ತು ದಿಗ್ಬಂಧನಗಳು ಸಾಮಾನ್ಯವಾಗಿದ್ದವು. ಇಬೋಬಿ ಸಿಂಗ್ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರವು ನೂರಾರು ಜನರ ಎನ್‌ಕೌಂಟರ್ ಮಾಡಿದೆ” ಎಂದು ಆರೋಪಿಸಿದರು.

ನಾಗಾ-ಕುಕಿ ಘರ್ಷಣೆಯಲ್ಲಿ ಒಟ್ಟು 750 ಜನರು, ಮೈತಿ-ಪಂಗಲ್ ಸಂಘರ್ಷದಲ್ಲಿ 100 ಮಂದಿ ಮತ್ತು ಕುಕಿ-ಪೈತೆ ಸಂಘರ್ಷದಲ್ಲಿ 325 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಾ ತಿಳಿಸಿದರು.

“ಈ ಚುನಾವಣೆಯು ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿ ಮಾಡುವುದಾಗಿದೆ. ಮಣಿಪುರದ ಮತಗಳು ಜನರು ಯಾರೊಂದಿಗೆ ಇದ್ದಾರೆ ಎಂಬುದನ್ನು ತೋರಿಸುತ್ತವೆ. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಲ್ಲ. ಇದು ಮಣಿಪುರವನ್ನು ವಿಭಜಿಸುವ ಬಗ್ಗೆ ಮಾತನಾಡುವವರು ಮತ್ತು ರಾಜ್ಯವನ್ನು ಒಗ್ಗೂಡಿಸುವವರ ನಡುವೆ ಇದೆ” ಎಂದು ಶಾ ಹೇಳಿದರು.

2023 ರ ಮೇ 3 ರಂದು ಮಣಿಪುರದಲ್ಲಿ ಕುಕಿ ಮತ್ತು ಮೈತಿ ಜನಾಂಗದ ನಡುವೆ ಘರ್ಷಣೆಗಳು ಪ್ರಾರಂಭವಾಗಿದೆ. ಅದಾದ ಬಳಿಕ ಮೇ 29 ರಿಂದ ಜೂನ್ 2 ರವರೆಗೆ ಬಿಜೆಪಿ ಆಡಳಿತದ ಈ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಲ್ಕು ದಿನಗಳ ಭೇಟಿ ಮಾಡಿದ್ದರು. ಆದರೆ ಅದಾದ ಬಳಿಕ ಮತ್ತೆ ಭೇಟಿ ನೀಡಿಲ್ಲ. ಈಗ ಚುನಾವಣೆ ಸಂದರ್ಭದಲ್ಲಿ ಮತ್ತೆ ಮಣಿಪುರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದ್ದು ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ಕೇಂದ್ರ ಸಚಿವರ ಎರಡನೇ ಭೇಟಿ ಇದಾಗಿದೆ.

ಇದನ್ನು ಓದಿದ್ದೀರಾ?   ಮೋದಿ, ಶಾ ಓದಿರುವುದು ನಮ್ಮ ಶಾಲೆಗಳಲ್ಲಿ: ಪ್ರಧಾನಿ ಲೋಕಸಭೆ ಭಾಷಣದ ವಿರುದ್ಧ ಖರ್ಗೆ ಕಿಡಿ

ಅಮಿತ್ ಶಾ ಅವರಂತೆ ಪ್ರಧಾನಿ ನರೇಂದ್ರ ಮೋದಿ ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ಒಂದು ಬಾರಿಯೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಈ ಕಾರಣದಿಂದಾಗಿಯೇ ನರೇಂದ್ರ ಮೋದಿ ನಿರಂತರವಾಗಿ ವಿರೋಧ ಪಕ್ಷಗಳಿಂದ ಟೀಕೆಗೆ ಒಳಗಾಗಿದ್ದಾರೆ. ಹಿಂಸಾಚಾರವು ಮೇ ತಿಂಗಳಲ್ಲಿ ಆರಂಭವಾಗಿದ್ದರೂ ಯಾವುದೇ ಹೇಳಿಕೆಯನ್ನು ನೀಡದ ಪ್ರಧಾನಿ ಮೋದಿ 2023 ರ ಆಗಸ್ಟ್‌ನಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಮಾಡಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಭಾಷಣದಲ್ಲಿ ಮಣಿಪುರದ ಉಲ್ಲೇಖ ಮಾಡಿದ್ದರು. “ಭಾರತದ ಜನರು ಮಣಿಪುರದೊಂದಿಗೆ ನಿಂತಿದ್ದಾರೆ” ಎಂದು ಹೇಳಿದ್ದರು.

ಹಾಗೆಯೇ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಅಮಿತ್ ಶಾ ಮೈತೆ ಮತ್ತು ಕುಕಿಗಳ ನಡುವೆ ಶಾಂತಿ ಸಂವಾದಕ್ಕೆ ಕರೆ ನೀಡಿದ್ದರು. ತಮ್ಮ ಭೇಟಿ ವೇಳೆ ಕುಕಿ ಪ್ರಾಬಲ್ಯದ ಚುರಾಚಂದ್‌ಪುರ ಜಿಲ್ಲೆ ಮತ್ತು ಮ್ಯಾನ್ಮಾರ್‌ನ ಗಡಿಯಲ್ಲಿರುವ ಮೋರೆಹ್ ಪಟ್ಟಣಕ್ಕೆ ಭೇಟಿ ನೀಡಿದರು. ಆದರೆ ಪ್ರಧಾನಿ ಈವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಕೇವಲ ಒಂದು ಬಾರಿ ಮಾತ್ರ ಮಣಿಪುರದ ಬಗ್ಗೆ ಮಾತನಾಡಿದ್ದಾರೆ. ಅದನ್ನು ಹೊರತುಪಡಿಸಿ ಮಣಿಪುರ ರಾಜ್ಯೋತ್ಸವಕ್ಕೆ ಪ್ರಧಾನಿ ಶುಭಕೋರಿದ್ದಾರೆ. ಈ ಸಂದರ್ಭದಲ್ಲಿಯೂ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...