ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು, ನೀರಿನ ಟ್ಯಾಂಕ್​​ಗೆ ವಿಷ ಬೆರೆಸಿದ ಶ್ರೀರಾಮಸೇನೆ ಮುಖಂಡ: ಸಿಎಂ ಆಕ್ರೋಶ

Date:

ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಶ್ರೀರಾಮಸೇನೆಯ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್‌ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್​​ಗೆ ವಿಷ ಹಾಕಿದ ಕೋಮುವಾದಿ ದುರುಳರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ. ‘ದಯೆಯೇ ಧರ್ಮದ ಮೂಲವಯ್ಯ’ ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ” ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ.

“ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು” ಎಂದು ಸಿಎಂ ಕರೆ ನೀಡಿದ್ದಾರೆ.

“ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ. ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ” ಎಂದು ಸಿಎಂ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...