‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

Date:

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ ಸಂವಿಧಾನವನ್ನು ‘ಬಲವಂತವಾಗಿ’ ಹೇರಲಾಯಿತು ಎಂದು ದಕ್ಷಿಣ ಗೋವಾದ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ವಿರಿಯಾಟೊ ಫೆರ್ನಾಂಡಿಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಟೀಕೆಗೆ ಗುರಿಯಾಗಿದೆ.

ನಿವೃತ್ತ ನೌಕಾಪಡೆ ಅಧಿಕಾರಿ ಮತ್ತು ಕಾರ್ಗಿಲ್ ಯುದ್ಧದ ಯೋಧ ಫರ್ನಾಂಡಿಸ್ ಅವರು ದಕ್ಷಿಣ ಗೋವಾದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 2019ರಲ್ಲಿ ಚುನಾವಣೆಗೂ ಮುನ್ನ ‘ದ್ವಿ ಪೌರತ್ವ’ ಕುರಿತು ರಾಹುಲ್‌ ಗಾಂಧಿ ಜೊತೆ ನಡೆಸಿದ್ದ ಮಾತುಕತೆಯನ್ನು ನೆನಪಿಸಿಕೊಂಡಿರು. “2019ರ ಮಾರ್ಚ್‌ 10ರಂದು ಪಣಜಿಯ ಹೋಟೆಲ್‌ನಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿದ್ದೆ” ಎಂದು ಹೇಳಿದರು.

“1961ರಲ್ಲಿ ಗೋವಾ ವಿಮೋಚನೆಯಾದಾಗ ಭಾರತೀಯ ಸಂವಿಧಾನವನ್ನು ನಮ್ಮ ಮೇಲೆ ಬಲವಂತವಾಗಿ ಹೇರಲಾಯಿತು” ಎಂದು ಹೇಳಿದ್ದಾರೆ. ಆ ಸಮಯದಲ್ಲಿ ಅವರು ಗೋವಾದ ಜನರಿಗೆ ದ್ವಿಪೌರತ್ವ ನೀಡಬೇಕೆಂದು ಒತ್ತಾಯಿಸುತ್ತಿದ್ದ ‘ಗೋಯೆಂಚೋ ಆವಾಜ್’ ಎಂಬ ಎನ್‌ಜಿಒದಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಅವರ [ರಾಹುಲ್] ಮುಂದೆ 12 ಬೇಡಿಕೆಗಳನ್ನು ಇಟ್ಟಿದ್ದೆ. ಅವುಗಳಲ್ಲಿ ಒಂದು ದ್ವಿಪೌರತ್ವಕ್ಕೆ ಸಂಬಂಧಿಸಿದ್ದು. ಆದರೆ, ನನ್ನ ಬೇಡಿಕೆಯು ಸಂವಿಧಾನಬದ್ಧವಾಗಿಲ್ಲದಿದ್ದರೆ, ಅದರನ್ನು ಪರಿಗಣಿಸುವುದಿಲ್ಲ ಎಂದರು. ಆಗ ನಾನು, ‘1950ರ ಜನವರಿ 26ರಂದು ಭಾರತೀಯ ಸಂವಿಧಾನವನ್ನು ಜಾರಿಗೆ ತರಲಾಯಿಗಿತ್ತು. 1961ರಲ್ಲಿ ಗೋವಾವನ್ನು ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಳಿಸಿದಾಗ, ನೀವು [ಕೇಂದ್ರ ಸರ್ಕಾರ] ನಮ್ಮ ಮೇಲೆ ಸಂವಿಧಾನವನ್ನು ಒತ್ತಾಯದಿಂದ ಹೇರಿದ್ದೀರಿ’ ಎಂದು ವಿವರಿಸಿದೆ” ಎಂದು ಫರ್ನಾಂಡಿಸ್ ಹೇಳಿದರು.

“ಭಾರತದ ಸಂವಿಧಾನವನ್ನು ಜಾರಿಗೆ ತಂದಾಗ, ಗೋವಾ ಭಾರತದ ಭಾಗವಾಗಿರಲಿಲ್ಲ. ಗೋವಾ ಜನರಿಗಾಗಿ ಯಾವುದೇ ನಿಬಂಧನೆಗಳು ಇರಲಿಲ್ಲ” ಎಂದು ಅವರು ಹೇಳಿದರು.

ಫರ್ನಾಂಡಿಸ್ ಅವರ ಹೇಳಿಕೆಗಳು ತೀವ್ರ ಟೀಕೆಗೆ ಗುರಿಯಾಗಿವೆ. ಇದೇ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌, “ಭಾರತೀಯ ಸಂವಿಧಾನವನ್ನು ಗೋವಾದವರ ಮೇಲೆ ಬಲವಂತವಾಗಿ ಹೇರಲಾಗಿದೆ ಎಂಬ ಕಾಂಗ್ರೆಸ್‌ನ ಅಭ್ಯರ್ಥಿಯ ಹೇಳಿಕೆಯಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಗೋವಾ ಭಾರತದ ಅವಿಭಾಜ್ಯ ಅಂಗ ಎಂದು ಮನಃಪೂರ್ವಕವಾಗಿ ನಂಬಿದ್ದರು” ಎಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕಾಂಗ್ರೆಸ್ ಗೋವಾ ವಿಮೋಚನೆಯನ್ನು 14 ವರ್ಷ ವಿಳಂಬಗೊಳಿಸಿತು. ಈಗ, ಅವರ ಅಭ್ಯರ್ಥಿ ಭಾರತೀಯ ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆಯೇ? ಈ ಅಜಾಗರೂಕ ‘ಭಾರತ್ ಟೊಡೊ’ ರಾಜಕಾರಣವನ್ನು ಕಾಂಗ್ರೆಸ್ ಕೂಡಲೇ ನಿಲ್ಲಿಸಬೇಕು. ಕಾಂಗ್ರೆಸ್ ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯ” ಎಂದು ಸಾವಂತ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...