ಕಲಬುರಗಿ | ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ : ಮಲ್ಲಿಕಾರ್ಜುನ ಖರ್ಗೆ

Date:

ಪ್ರಧಾನಿ ಮೋದಿಯವರು ಹಾಗೂ ಬಿಜೆಪಿಯ ಅನೇಕ ಶಾಸಕರು, ಸಂಸದರು ಹಾಗೂ ಅಭ್ಯರ್ಥಿಗಳು ಬಹಿರಂಗವಾಗಿ ನಾವು 400 ಸೀಟ್ ಗೆದ್ದರೆ ದೇಶದಲ್ಲಿ ಸಂವಿಧಾನ ಬದಲಾಯಿಸುವುದಾಗಿ ಹೇಳಿದ್ದಾರೆ. ಬಿಜೆಪಿಗೆ 2/3ರಷ್ಟು ಬಹುಮತ ನೀಡಿದರೆ, ಈ ದೇಶದಲ್ಲಿ ಸಂವಿಧಾನ ಇರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಆಯೋಜಿಸಿದ ಕೋಲಿ, ಕಬ್ಬಲಿಗ ಸಮಾಜದ ರಾಜ್ಯ ಮಟ್ಟದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ, “ದೇಶದ ಸಂವಿಧಾನ ತಿರುಚುವುದು, ಪ್ರಜಾಪ್ರಭುತ್ವ ಹಾಳು ಮಾಡುವುದು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನವರ ಮುಖ್ಯ ಅಜೆಂಡಾವಾಗಿದೆ. ಸಂವಿಧಾನ ಬದಲಾದರೆ ಯಾವುದೇ ರೀತಿಯ ಮೀಸಲಾತಿ ಪಡೆಯಲಾಗುವುದಿಲ್ಲ. ಮೀಸಲಾತಿ ವಿರೋಧಿ ಬಿಜೆಪಿ, ಆರ್‌ಎಸ್‌ಎಸ್‌ನಿಂದ ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ” ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಂದಂತೆ ಈ ಬಾರಿಯೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬೀಡುಬಿಟ್ಟಿದ್ದಾರೆ. ಕ್ಷೇತ್ರದಲ್ಲಿ ರಾತ್ರಿ ಹಗಲು ಎನ್ನದೇ ಸುತ್ತಾಡಿ ಮೋದಿ ತರಹ ಸುಳ್ಳು ಹೇಳಿ ಪ್ರಚಾರ ನಡೆಸುತ್ತಿದ್ದಾರೆ, ಅವರಿಂದ ಮತದಾರರು ಎಚ್ಚರವಾಗಿರಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರದಲ್ಲಿ 30 ಲಕ್ಷ ಉದ್ಯೋಗಗಳು ಖಾಲಿ ಉಳಿದಿವೆ, ಅದರಲ್ಲಿ ಶೇ.50% ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ, ಉಳಿದ ಶೇ 50% ರಷ್ಟು ಓಬಿಸಿ ಹಾಗೂ ಇತರೆ ಸಮಾಜದವರಿಗೆ ಮೀಸಲಿವೆ. ಆದರೆ ಈ ಉದ್ಯೋಗಗಳು ಬಡವರಿಗೆ ನೀಡಿದರೆ ಅವರು ಆರ್ಥಿಕವಾಗಿ ಬಲಿಷ್ಠರಾಗುತ್ತಾರೆ ಎಂಬ ಕಾರಣಕ್ಕೆ ಮೋದಿ ಸರ್ಕಾರ ಉದ್ಯೋಗ ಭರ್ತಿ ಮಾಡಲು ಕೈಗೆತ್ತಿಕೊಳ್ಳುತ್ತಿಲ್ಲ ಎಂದರು.

“ಮಲ್ಲಿಕಾರ್ಜುನ ಖರ್ಗೆಯವರು ಶಿವ ಮತ್ತು ರಾಮನಲ್ಲಿ ವ್ಯತ್ಯಾಸ ಮಾಡಿ ಸಮಾಜವನ್ನು ವಿಂಗಡಿಸುತ್ತಿದ್ದಾರೆ ಎಂದು ಮೋದಿಯವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆದರೆ ಹನ್ನೆರಡು ಜೋತಿರ್ಲಿಂಗದಲ್ಲಿ ನನ್ನ ಹೆಸರು ʼಮಲ್ಲಿಕಾರ್ಜುನʼ ಅಂತ ಇದ್ದೀನಿ, ನಾನೇಕೆ ವಿರೋಧಿಸಲಿ ಎಂದು ಹೇಳಿದ್ದೇನೆ ಎಂದರು. ಬಿಜೆಪಿ, ಆರ್‌ಎಸ್‌ಎಸ್‌ನವರು ಜಾತಿ, ಧರ್ಮದ ಆಧಾರದಲ್ಲಿ ದೇಶ ಒಡೆಯಬೇಡಿ” ಎಂದು ಹೇಳಿದರು.

ಬಿಜೆಪಿಯಿಂದ ದೇಶ ಉದ್ದಾರ ಆಗುವುದಿಲ್ಲ, ಸ್ವಾತಂತ್ರ್ಯವಾಗಿ ಬಾಳಿ ಬದುಕಿ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸಿದರೆ ಮಾತ್ರ ನಾವು ಸ್ವತಂತ್ರವಾಗಿ ಮಾತಾಡಲು ಅಧಿಕಾರ ಇರುತ್ತದೆ ಎಂದು ಎಚ್ಚರಿಸಿದರು.

“ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯಿಂದ ಬಡವರಿಗೆ ಆರ್ಥಿಕವಾಗಿ ಅನುಕೂಲ ಆಗಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ʼಮಹಿಳಾ ನ್ಯಾಯʼ ಯೋಜನೆಯಡಿ ಕುಟುಂಬದ ಮಹಿಳೆಗೆ ಪ್ರತಿ ವರ್ಷ ಒಂದು ಲಕ್ಷ ರೂ. ಹಣ ನೇರ ವರ್ಗಾವಣೆ ಮಾಡುತ್ತೇವೆ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದರು. ಅದೇ ಮಾದರಿಯಲ್ಲಿ ʼರೈತ ನ್ಯಾಯʼ ಯೋಜನೆಯಡಿ ರೈತರ ಸಾಲ ಮನ್ನಾ ಮಾಡುವುದು, ಯುವ ನ್ಯಾಯ, ಕಾರ್ಮಿಕ ನ್ಯಾಯ ಹಾಗೂ ಜಾತಿ ಜನಗಣತಿ ಮಾಡುವ ಮಹತ್ವದ ಯೋಜನೆಗಳು ನಮ್ಮದಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ದೇಶದಲ್ಲಿ ಸಂವಿಧಾನಬದ್ಧ ಸರ್ಕಾರ ಆಡಳಿತಕ್ಕೆ ಬರಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಬರುವ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆ ದಿನದಂದು ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಬೇಕು ಎಂದು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...