ಯಲಹಂಕ ಬಳಿ 153 ಎಕರೆಯಲ್ಲಿ ‘ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ ನಿರ್ಮಾಣ: ಈಶ್ವರ ಖಂಡ್ರೆ

Date:

ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಒ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ‘ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಭವನದಲ್ಲಿ ಸೋಮವಾರ ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, “153 ಎಕರೆ ಅರಣ್ಯ ಭೂಮಿಯನ್ನು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಗುತ್ತಿಗೆ ನೀಡಲಾಗಿತ್ತು. ಈಗ ಗುತ್ತಿಗೆ ಅವಧಿ ಮುಗಿದಿದ್ದು, ಸಾಮಾಜಿಕ ಜವಾಬ್ದಾರಿ- ಇಲಾಖೆ ಮತ್ತು ಸಿ.ಎಸ್.ಆರ್ ನಿಧಿಯ ನೆರವಿನೊಂದಿಗೆ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಒಂದು ಸಸ್ಯೋದ್ಯಾನ ಮಾಡಲಾಗುವುದು” ಎಂದರು.

“ಯಲಹಂಕ ಸುತ್ತುಮುತ್ತ ಬೆಂಗಳೂರು ವ್ಯಾಪಕವಾಗಿ ಬೆಳೆದಿದೆ. ಈ ಹಿನ್ನೆಯಲ್ಲಿ ಜನರಿಗೆ ಅನುಕೂಲವಾಗುವಂತೆ ಇಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಸ್ಥಾಪಿಸಿದಲ್ಲಿ ಅದು ಅತ್ಯಂತ ಆಕರ್ಷಣೀಯ ತಾಣವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರು ನಗರವು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಭಾರತದ ಗಾರ್ಡನ್ ಸಿಟಿ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ. ಭಾರತೀಯ ಅರಣ್ಯ ಸಮೀಕ್ಷಾ ವರದಿಯಂತೆ ಬೆಂಗಳೂರು ನಗರವು ಭಾರತದಲ್ಲಿ ಮೂರನೇ ಅತಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ನಗರವಾಗಿದ್ದು, ಸುಮಾರು 89 ಚದರ ಕಿಲೋಮೀಟರ್‌ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಬೆಂಗಳೂರಿನ ವೃಕ್ಷ ಹೊದಿಕೆ ಶೇ.6.81 ರಷ್ಟಿದೆ. ಕಳೆದ 10 ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ 5 ಚದರ ಕಿಲೋಮೀಟರ್‌ ನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ” ಎಂದರು.

“ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಉದ್ಯಾನ ನಗರಿ ಎನ್ನುವ ಹೆಗ್ಗಳಿಕೆಯನ್ನು ಮರುಸ್ಥಾಪಿಸಲು ಇಲಾಖೆಯು ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಇನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ. ಜೊತೆಗೆ ರಾಜಧಾನಿಯಲ್ಲಿ ಒತ್ತುವರಿಯಾಗಿರುವ ಅರಣ್ಯಭೂಮಿಯನ್ನು ಮರಳಿ ವಶಕ್ಕೆ ಪಡೆಬೇಕಿದೆ” ಎಂದು ಈಶ್ವರ ಖಂಡ್ರೆ ಹೇಳಿದರು.

“ವನ್ಯ ಮೃಗಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಜನರಲ್ಲಿ ಅರಿವು ಮೂಡಿಸಲು ಮುಂದಿನ ಪೀಳಿಗೆಗೆ ವನ್ಯ ಮೃಗಗಳ ಮಹತ್ವ ತಿಳಿಸಲು ಪ್ರತಿವರ್ಷ ಅಕ್ಟೋಬರ್ 2ರಿಂದ 8ರವರೆಗೆ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತದೆ” ಎಂದು ತಿಳಿಸಿದರು.

ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್, ಮುಖ್ಯ ವನ್ಯ ಜೀವಿ ಪರಿಪಾಲಕರಾದ ಸುಭಾಷ್ ಮಾಲ್ಖಡೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...