ಗುತ್ತಿಗೆದಾರ ಸಚಿನ್ ಆತ್ಮಹತ್ಯೆ | ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

Date:

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ಅಟ್ಟಹಾಸ ಬಹಳ ನಡೆಯುತ್ತಿದೆ.‌ ಜಿಲ್ಲೆಯ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಎಲ್ಲದರಲ್ಲೂ ತಮಗೆ ಬೇಕಾದವರನ್ನು ಸಹಚರರನ್ನಾಗಿ ಜೋಡಿಸಿಕೊಂಡು ಎಲ್ಲ ರೀತಿಯ ದಂಧೆಗಳಲ್ಲಿ ತೊಡಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಶನಿವಾರ ಮಾತನಾಡಿದ ಅವರು, “ಮರಳು ದಂಧೆ ಇದೆ. ಟೈಲ್ಸ್, ಸಿಮೆಂಟ್ ಫ್ಯಾಕ್ಟರಿಗಳ ದಂಧೆ ಇದೆ. ಎಲ್ಲ ರೀತಿಯ ದಂಧೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಟ್ರಾಕ್ಟ್ ವಿಚಾರಕ್ಕೂ ಬೇಕಾದವರ ನೇಮಕ ಆಗಿದೆ. ಇದೇ ಕಾರಣಕ್ಕೂ ಸಚಿನ್ ಅವರ ಆತ್ಮಹತ್ಯೆ ಆಗಿದೆ” ಎಂದು ಆರೋಪಿಸಿದರು.

“ಸಚಿನ್ ಆತ್ಮಹತ್ಯೆ ಬಗ್ಗೆ ಉನ್ನತ ತನಿಖೆ ಆಗಬೇಕು. ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ‌ಸಿದ್ದರಾಮಯ್ಯ ಅವರು ಕೈಬಿಡಬೇಕು. ಅಲ್ಲದೆ ತಕ್ಷಣ ಅವರನ್ನು ಬಂಧಿಸಬೇಕು. ಅವರು ಸಂಪೂರ್ಣವಾಗಿ ತನಿಖೆಗೆ ಸಹಕರಿಸುವಂತೆ ಸರಕಾರ ಮಾಡಬೇಕು. ಇಲ್ಲವಾದರೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಅಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೃತ ಸಚಿನ್ ಅವರು 7 ಪುಟಗಳ ಡೆತ್ ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅದರಲ್ಲಿ ಆಂದೋಲ ಸ್ವಾಮೀಜಿ, ಚಂದು ಪಾಟೀಲ, ಬಸವರಾಜ ಮತ್ತಿಮೂಡ ಅವರನ್ನು ಸುಪಾರಿ ಕೊಟ್ಟು ಸಾಯಿಸುವ ವಿಚಾರವೂ ಪ್ರಸ್ತಾಪವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳೆದುಹೋದ ವರ್ಚಸ್ಸು ಮತ್ತು ಗೇಲಿಯ ಸರಕಾದ ‘ಹೈಡ್ರಾಮಾ’

ರಿಪಬ್ಲಿಕ್ ಆಫ್ ಗುಲ್ಬರ್ಗ ವ್ಯವಸ್ಥೆ

“ಅದು ರಿಪಬ್ಲಿಕ್ ಆಫ್ ಗುಲ್ಬರ್ಗ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ; ಗುಲ್ಬರ್ಗದ ವ್ಯವಸ್ಥೆಯೇ ಬೇರೆಯಾಗಿದೆ. ಪೊಲೀಸರು ಕೂಡ ಅಲ್ಲಿ ಪ್ರಿಯಾಂಕ್ ಖರ್ಗೆಯವರು ಹೇಳಿದ್ದೇ ಆಡಳಿತ ಎಂಬಂತೆ ನಡೆದುಕೊಳ್ಳುತ್ತಾರೆ.‌ ಅಲ್ಲಿ ಖರ್ಗೆ ಮನೆತನದ ದೊಡ್ಡ ಪಾರುಪತ್ಯ ನಡೆದಿದೆ. ಬೇರೆ ಯಾರಿಗೂ ಮಾತನಾಡಲು ಅವಕಾಶ ಇಲ್ಲ.ವಿಶೇಷವಾಗಿ ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ. ಯಾರಾದರೂ ಅವರ ವಿರುದ್ಧ ಮಾತನಾಡಿದರೆ, ಪೊಲೀಸಿನವರು ಅಂಥವರ ಮನೆ ಮುಂದೆ ಇರುತ್ತಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...