ತರಗತಿ ಕೊಠಡಿ ನಿರ್ಮಾಣ ಹಗರಣ: ಎಸಿಬಿ ವಿಚಾರಣೆಗೆ ಮನೀಶ್ ಸಿಸೋಡಿಯಾ ಗೈರು

Date:

ಸರ್ಕಾರಿ ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆಯಬೇಕಿದ್ದ ದೆಹಲಿ ಸರ್ಕಾರದ ಎಸಿಬಿ ವಿಚಾರಣೆಗೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗೈರುಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಮಾಜಿ ಲೋಕೋಪಯೋಗಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಸಮನ್ಸ್ ನೀಡಿತ್ತು. ಶುಕ್ರವಾರ ಜೈನ್ ಎಸಿಬಿ ಮುಂದೆ ಹಾಜರಾಗಿದ್ದು, ಎಸಿಬಿ ಐದು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ.

ಇದನ್ನು ಓದಿದ್ದೀರಾ? 2,000 ಕೋಟಿ ರೂ. ಹಗರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾ ವಿರುದ್ಧ ಮತ್ತೊಂದು ಪ್ರಕರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಸಿಸೋಡಿಯಾ ಹಾಜರಾಗಬೇಕಿತ್ತು. ಆದರೆ ಮನೀಷ್ ಸಿಸೋಡಿಯಾ ಅವರು ಇಂದು ಬರಲು ಸಾಧ್ಯವಾಗುವುದಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ. ಸಿಸೋಡಿಯಾ ಅವರಿಗೆ ಮತ್ತೆ ಸಮನ್ಸ್ ನೀಡಲಾಗುವುದು ಎಂದು ವರದಿ ಉಲ್ಲೇಖಿಸಿದೆ.

ಸಿಸೋಡಿಯಾ ಈ ಸಮನ್ಸ್ ಬರುವುದಕ್ಕೂ ಮುನ್ನವೇ ಬೇರೊಂದು ಕಾರ್ಯಕ್ರಮದಲ್ಲಿ ಹಾಜರಾಗಲು ವೇಳಾಪಟ್ಟಿ ಸಿದ್ಧಪಡಿಸಿದ್ದರು. ಆದ್ದರಿಂದ ಎಸಿಬಿ ಮುಂದೆ ಹಾಜರಾಗಿಲ್ಲ. ಈ ಬಗ್ಗೆ ಎಸಿಬಿಗೆ ಸಿಸೋಡಿಯಾ ಪರ ವಕೀಲರು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ದೆಹಲಿ ಸರ್ಕಾರಿ ಶಾಲೆಗಳಲ್ಲಿ 12,000ಕ್ಕೂ ಹೆಚ್ಚು ತರಗತಿ ಕೊಠಡಿಗಳ ನಿರ್ಮಾಣದಲ್ಲಿ 2,000 ಕೋಟಿ ರೂ.ಗಳಷ್ಟು ಆರ್ಥಿಕ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಏಪ್ರಿಲ್ 30ರಂದು ಎಫ್‌ಐಆರ್ ದಾಖಲಿಸಿದ್ದು ಸಮನ್ಸ್ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...